LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಜೆಯ ಚಹಾ ಜೊತೆಗೆ ತಿನ್ನಲು ಸಖತ್ ಮಜಾ ನೀಡುತ್ತೆ ಈ ‘ಪಿನ್ ವೀಲ್ ಆಲೂ ಪರೋಟ’!

ಬೆಳಗಿನ ಉಪಹಾರಕ್ಕೆ ಆಲೂ ಪರೋಟ ಮಾಡುವುದು ಸಾಮಾನ್ಯ. ಆದರೆ ಸಂಜೆಯ ಟೀ ಸಮಯದಲ್ಲಿ ತಿನ್ನಲು ಏನಾದರೂ ಗರಿಗರಿಯಾದ ಮತ್ತು ರುಚಿಕರವಾದ ತಿಂಡಿ ಬೇಕೆನಿಸಿದರೆ ‘ಪಿನ್ ವೀಲ್ ಆಲೂ ಪರೋಟ’ ಅತ್ಯುತ್ತಮ ಆಯ್ಕೆ. ಮಕ್ಕಳಿಂದ ದೊಡ್ಡವರವರೆಗೆ ಎಲ್ಲರೂ ಇಷ್ಟಪಡುವ ಈ ಪುಟ್ಟ ಪರೋಟಗಳನ್ನು ಸುಲಭವಾಗಿ ಹೇಗೆ ಮಾಡಬಹುದು ಎಂಬ ಮಾಹಿತಿ ಇಲ್ಲಿದೆ.

ಬೇಕಾಗುವ ಸಾಮಗ್ರಿಗಳು

  • ಗೋಧಿ ಹಿಟ್ಟು – 1 ಕಪ್
  • ಬೇಯಿಸಿದ ಆಲೂಗಡ್ಡೆ – 2
  • ಸಣ್ಣಗೆ ಹೆಚ್ಚಿದ ಈರುಳ್ಳಿ – 1
  • ಹಸಿಮೆಣಸಿನಕಾಯಿ – 1
  • ಕೊತ್ತಂಬರಿ ಸೊಪ್ಪು – ಕಾಲು ಕಪ್
  • ಗರಂ ಮಸಾಲ – ಅರ್ಧ ಚಮಚ
  • ಕೆಂಪು ಮೆಣಸಿನ ಪುಡಿ – ಅರ್ಧ ಚಮಚ
  • ಧನಿಯಾ ಪುಡಿ – ಅರ್ಧ ಚಮಚ
  • ಜೀರಿಗೆ ಪುಡಿ – ಅರ್ಧ ಚಮಚ
  • ತುಪ್ಪ – ಹುರಿಯಲು
  • ಉಪ್ಪು – ರುಚಿಗೆ ತಕ್ಕಷ್ಟು

ತಯಾರಿಸುವ ವಿಧಾನ ಮೊದಲು ಒಂದು ಪಾತ್ರೆಯಲ್ಲಿ ಗೋಧಿ ಹಿಟ್ಟನ್ನು ಹಾಕಿಕೊಂಡು, ಸ್ವಲ್ಪ ಸ್ವಲ್ಪವೇ ನೀರು ಸೇರಿಸುತ್ತಾ ಮೃದುವಾಗಿ ಕಲಸಿಕೊಳ್ಳಿ. ಈ ಹಿಟ್ಟನ್ನು ಸ್ವಲ್ಪ ಸಮಯ ಪಕ್ಕಕ್ಕೆ ಇಡಿ. ಈಗ ಮತ್ತೊಂದು ಪಾತ್ರೆಯಲ್ಲಿ ಬೇಯಿಸಿದ ಆಲೂಗಡ್ಡೆಯನ್ನು ಚೆನ್ನಾಗಿ ಸ್ಮ್ಯಾಶ್ ಮಾಡಿಕೊಳ್ಳಿ. ಅದಕ್ಕೆ ಸಣ್ಣಗೆ ಹೆಚ್ಚಿದ ಈರುಳ್ಳಿ, ಹಸಿಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು ಮತ್ತು ಎಲ್ಲಾ ಮಸಾಲಾ ಪುಡಿಗಳನ್ನು ಹಾಗೂ ರುಚಿಗೆ ತಕ್ಕ ಉಪ್ಪು ಸೇರಿಸಿ ಹೂರಣ ಸಿದ್ಧಪಡಿಸಿಕೊಳ್ಳಿ.

ನಂತರ ಕಲಸಿಟ್ಟ ಹಿಟ್ಟಿನಿಂದ ಸಣ್ಣ ಉಂಡೆಗಳನ್ನು ಮಾಡಿಕೊಂಡು ತೆಳುವಾಗಿ ಲಟ್ಟಿಸಿ. ಈ ಪುಟ್ಟ ಪರೋಟದ ಮಧ್ಯಭಾಗದಲ್ಲಿ ಸಿದ್ಧಪಡಿಸಿದ ಆಲೂಗಡ್ಡೆ ಹೂರಣವನ್ನು ಇಟ್ಟು ಎಲ್ಲ ಕಡೆಯಿಂದಲೂ ಮುಚ್ಚಿ. ಇದನ್ನು ಮತ್ತೆ ಲಟ್ಟಿಸಿ ಚಿಕ್ಕ ಪರೋಟದ ಆಕಾರ ನೀಡಿ. ಒಲೆಯ ಮೇಲೆ ಹಂಚು ಕಾಯಲು ಇಟ್ಟು, ಅದಕ್ಕೆ ತುಪ್ಪ ಸವರಿ ಸಣ್ಣ ಅಥವಾ ಮಧ್ಯಮ ಉರಿಯಲ್ಲಿ ಪರೋಟವನ್ನು ಎರಡು ಬದಿ ಹೊಂಬಣ್ಣ ಬರುವವರೆಗೆ ಚೆನ್ನಾಗಿ ಬೇಯಿಸಿ.

ಬಿಸಿಬಿಸಿಯಾದ ಈ ಪಿನ್ ವೀಲ್ ಆಲೂ ಪರೋಟವನ್ನು ಮೊಸರು ಅಥವಾ ನಿಮ್ಮ ನೆಚ್ಚಿನ ಚಟ್ನಿಯೊಂದಿಗೆ ಸವಿಯಲು ನೀಡಿ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ