ಮಂಗಳೂರು: ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇಮ್ರಾನ್ ಯಾನೆ ಇಬ್ರಾಹಿಂ ಮತ್ತು ಆರಿಫ್ ಬಂಧಿತ ಆರೋಪಿಗಳು. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14 ರಂದು ಬೆಳಿಗ್ಗೆ ಅಕ್ರಮವಾಗಿ ಗೋವು ಸಾಗಿಸುವಾಗ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.
ಬೆಳುವಾಯಿಂದ ಮೂರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಝಾ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಪಿಎಸ್ಐ ಕೃಷ್ಣಪ್ಪ ಮತ್ತು ಸಿಬ್ಬಂದಿ ರೌಂಡ್ಸ್ ನಲ್ಲಿದ್ದಾಗ ಬಂಧ ಮಾಹಿತಿ ಆಧರಿಸಿ ಪೊಲೀಸರು ವಾಹನ ನಿಲ್ಲಿಸಲು ಪ್ರಯತ್ನಿಸಿದ್ದಾರೆ.
ಈ ವೇಳೆ ಆರೋಪಿಗಳು ವಾಹನ ನಿಲ್ಲಿಸದೇ ಪರಾರಿಯಾಗಿದ್ದು, ವಾಹನ ಬೆನ್ನಟ್ಟಿದ ಪೊಲೀಸರು ದೂರದಲ್ಲಿ ಕಾರ್ ತಡೆದಿದ್ದಾರೆ. ಈ ವೇಳೆ ಕಾರ್ ನಿಲ್ಲಿಸಿ ಪರಾರಿ ಆಗುತ್ತಿದ್ದ ವೇಳೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಕಾರು ಪರಿಶೀಲಿಸಿದಾಗ ಹಿಂಬದಿಯ ಸೀಟಿನಲ್ಲಿ ಜಾನುವಾರು ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.