LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮನೆ ಕಳ್ಳತನ ತಪ್ಪಿಸಲು ವಿನೂತನ ಕ್ರಮ: ಧಾರವಾಡ ಜಿಲ್ಲೆಯಲ್ಲಿ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಜಾರಿ 

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ರಾತ್ರಿ ಸಮಯದಲ್ಲಿ ನಡೆಯುವ ಕಳ್ಳತನ ಹಾಗೂ ಸ್ವತ್ತಿನ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಧಾರವಾಡ ಜಿಲ್ಲಾ ಪೊಲೀಸ್ ವತಿಯಿಂದ ಒಂದು ವಿನೂತನವಾದ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ (L.H.B.S) ನ್ನು ಕಲಘಟಗಿ, ಅಳ್ನಾವರ, ಕುಂದಗೋಳ ಪಟ್ಟಣ ಪಂಚಾಯತ ಹಾಗೂ ಅಣ್ಣಿಗೇರಿ ಮತ್ತು ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಜಾರಿಗೆ ತರಲಾಗುತ್ತಿದೆ.

ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಕುರಿತ ಮಾಹಿತಿವುಳ್ಳ ಬಿತ್ತಿಪತ್ರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ತಮ್ಮ ಕಚೇರಿಯಲ್ಲಿ ಇಂದು ಬಿಡುಗಡೆ ಮಾಡಿದರು.

ಸಾರ್ವಜನಿಕರು ಪ್ರವಾಸ, ಮದುವೆ, ದೇವಸ್ಥಾನ, ಜಾತ್ರೆಗಳು ಸೇರಿದಂತೆ ವಿವಿಧ ರೀತಿಯ ಇನ್ನೀತರ ಸಮಾರಂಭಗಳಿಗಾಗಿ ಬೇರೆ ಊರುಗಳಿಗೆ ತೆರಳುವಾಗ ಧಾರವಾಡ ಪೊಲೀಸ್ ಇಲಾಖೆ ಆರಂಭಿಸಿರುವ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ (L.H.B.S) ಎಂಬ ವಿನೂತನವಾದ ವ್ಯವಸ್ಥೆಯನ್ನು ಉಪಯೋಗಿಸಿಕೊಳ್ಳಬೇಕು.

ಮನೆಗೆ ಬೀಗ ಹಾಕಿ, ಮನೆ ಬಿಟ್ಟು ತೆರಳುವ ಸಂದರ್ಭದಲ್ಲಿ ತಮ್ಮ ಹೆಸರು, ವಿಳಾಸ, ಸಂಪರ್ಕ ಸಂಖ್ಯೆ ಹಾಗೂ ಗೂಗಲ್ ಲೊಕೇಶನ್ ಮಾಹಿತಿಯನ್ನು ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ – 8277968343 ಗೆ ಸಂದೇಶದ ಮೂಲಕ ಅಥವಾ ವಾಟ್ಸಾಪ್ ಕಳುಹಿಸುವ ಮೂಲಕ ಕಳ್ಳತನದಂತಹ ಪ್ರಕರಣಗಳನ್ನು ತಪ್ಪಿಸಲು ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ತಿಳಿಸಿದ್ದಾರೆ.

ಧಾರವಾಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿಯ ಸಾರ್ವಜನಿಕರಿಗಾಗಿ ಜಾರಿಗೆ ತರಲಾದ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ