LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಧ್ಯರಾತ್ರಿ ಸ್ನೇಹಿತನ ಜನ್ಮದಿನ ಆಚರಿಸಿದ ಬೆನ್ನಲ್ಲೇ ಈಜುಕೊಳಕ್ಕೆ ಬಿದ್ದು ಯುವಕ ಸಾವು

ಬೆಂಗಳೂರು: ಸ್ನೇಹಿತನ ಜನ್ಮದಿನ ಆಚರಿಸಲು ರೆಸಾರ್ಟ್ ಗೆ ಬಂದಿದ್ದ ಯುವಕನೊಬ್ಬ ನಿದ್ದೆ ಮಂಪರಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರದ ಹೊಸಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಚರಮಂಗನಹಳ್ಳಿಯ ಅಭಿಲಾಶ್(20) ಮೃತಪಟ್ಟ ಯುವಕ. ಮೇ 17ರಂದು ಸ್ನೇಹಿತರ ತಂಡ ಜನ್ಮದಿನ ಆಚರಿಸಲು ಕೋಲಾರದಿಂದ ಹೊಸಹಳ್ಳಿ ರಸ್ತೆಯಲ್ಲಿರುವ ರೆಸಾರ್ಟ್ ಗೆ ಬಂದಿದೆ. ಮೇ 18ರ ಮಧ್ಯರಾತ್ರಿ ಸ್ನೇಹಿತರೆಲ್ಲ ಸೇರಿ ಜನ್ಮದಿನ ಆಚರಿಸಿ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ.

ನಂತರ ಎಲ್ಲರೂ ರೂಂಗೆ ಹೋಗಿ ಮಲಗಿದ್ದಾರೆ. ಈ ವೇಳೆ ಹೊರಬಂದ ಅಭಿಲಾಶ್ ಹೆಚ್ಚಿನ ಸಮಯವಾದರೂ ಮರಳಿ ಬಾರದ ಕಾರಣ ಸ್ನೇಹಿತರು ಹುಡುಕಾಡಿದ್ದಾರೆ. ಆದರೆ, ಕತ್ತಲೆಯಲ್ಲಿ ಆತ ಕಂಡು ಬಂದಿರಲಿಲ್ಲ. ನಂತರ ರೆಸಾರ್ಟ್ ಮಾಲೀಕರಿಗೆ ಮಾಹಿತಿ ನೀಡಲಾಗಿದೆ.

ಬೆಳಗ್ಗೆ ಈಜುಕೊಳದಲ್ಲಿ ಯುವಕನ ಶವ ತೇಲುವುದನ್ನು ಗಮನಿಸಿದ ರೆಸಾರ್ಟ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಹೊಸಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ನಿದ್ದೆ ಮಂಪರಿನಲ್ಲಿ ತೆರಳಿದ್ದ ಅಭಿಲಾಶ್ ಆಕಸ್ಮಿಕವಾಗಿ ಈಜುಕೊಳಕ್ಕೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ