LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಐತಿಹಾಸಿಕ ಕೊಲೋಸಿಯಂನಲ್ಲಿ ಪ್ರಧಾನಿ ಮೋದಿಗೆ ಜಾರ್ಜಿಯಾ ಮೆಲೋನಿ ಆತ್ಮೀಯ ಸ್ವಾಗತ: ವೈರಲ್ ಆಯ್ತು ಸೆಲ್ಫಿ ಫೋಟೋ

ರೋಮ್ : ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ತಮ್ಮ ಐದು ದೇಶಗಳ ಯಶಸ್ವಿ ಪ್ರವಾಸದ ಅಂತಿಮ ಹಂತವಾಗಿ ಇಟಲಿ ರಾಜಧಾನಿ ರೋಮ್‌ಗೆ ತಲುಪಿದ್ದಾರೆ. ಈ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರು ಜಾಗತಿಕವಾಗಿ ಭಾರಿ ಸದ್ದು ಮಾಡುತ್ತಿರುವ ಐತಿಹಾಸಿಕ ‘ಕೊಲೋಸಿಯಂ’ (Colosseum) ಸ್ಮಾರಕದ ಮುಂದೆ ಪ್ರಧಾನಿ ಮೋದಿಯವರನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ

ಪ್ರಧಾನಿ ಮೋದಿ ಜೊತೆಗಿನ ಸುಂದರ ಫೋಟೋವನ್ನು ತಮ್ಮ ಸೋಷಿಯಲ್ ಮೀಡಿಯಾ ‘X’ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿರುವ ಮೆಲೋನಿ, ಮೋದಿಯವರನ್ನು ನನ್ನ ಗೆಳೆಯ ಎಂದು ಸಂಬೋಧಿಸಿದ್ದಾರೆ. “ನನ್ನ ಗೆಳೆಯನೇ, ರೋಮ್‌ ನಗರಕ್ಕೆ ನಿನಗೆ ಸುಸ್ವಾಗತ” ಎಂದು ಅವರು ಬರೆದುಕೊಂಡಿದ್ದು, ಈ ಮೆಲೋಡಿ (Melodi) ಜುಗಲ್‌ಬಂದಿ ಇಂಟರ್ನೆಟ್‌ನಲ್ಲಿ ಸಖತ್ ವೈರಲ್ ಆಗುತ್ತಿದೆ

ಪ್ರಧಾನಿ ಮೋದಿ ಅವರ ನಾರ್ವೆ, ಸ್ವೀಡನ್, ನೆದರ್ಲ್ಯಾಂಡ್ಸ್ ಮತ್ತು ಯುಎಇ (UAE) ಪ್ರವಾಸದ ನಂತರದ ಕೊನೆಯ ನಿಲ್ದಾಣ ಇಟಲಿ.

ವಿಮಾನ ನಿಲ್ದಾಣದಲ್ಲಿ ಇಟಲಿಯ ಉಪ ಪ್ರಧಾನಿ ಆಂಟೋನಿಯೊ ತಾಜಾನಿ ಅವರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ.

ಹೋಟೆಲ್ ತಲುಪುತ್ತಿದ್ದಂತೆ ಭಾರತೀಯ ಮೂಲದವರಿಂದ (Diaspora) ಶಾಸ್ತ್ರೀಯ ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅದ್ಧೂರಿ ಸತ್ಕಾರ.

ಏನಿದು ಭೇಟಿಯ ಅಜೆಂಡಾ?: IMEC ಕಾರಿಡಾರ್‌ಗೆ ಬಿಗ್ ಬೂಸ್ಟ್

ಭಾರತ ಮತ್ತು ಇಟಲಿ ನಡುವಿನ ದ್ವಿಪಕ್ಷೀಯ ಬಾಂಧವ್ಯ ಈಗ ಗರಿಷ್ಠ ಮಟ್ಟದಲ್ಲಿದೆ. ಎರಡು ದೇಶಗಳ ನಡುವಿನ ವ್ಯಾಪಾರವು ಈಗಾಗಲೇ 2025 ರ ವೇಳೆಗೆ ಬರೋಬ್ಬರಿ 16.77 ಬಿಲಿಯನ್ ಡಾಲರ್ ತಲುಪಿದೆ. ಈ ಭೇಟಿಯ ಪ್ರಮುಖ ಉದ್ದೇಶಗಳು ಹೀಗಿವೆ:

ಆಕ್ಷನ್ ಪ್ಲಾನ್ ಪರಿಶೀಲನೆ: ಎರಡೂ ದೇಶಗಳ ನಡುವಿನ ಜಂಟಿ ಕಾರ್ಯತಂತ್ರದ ಕ್ರಿಯಾ ಯೋಜನೆ (Joint Strategic Action Plan 2025-2029) ಪ್ರಗತಿಯನ್ನು ಉಭಯ ನಾಯಕರು ಪರಿಶೀಲಿಸಲಿದ್ದಾರೆ.

IMEC ಕಾರಿಡಾರ್ ಚರ್ಚೆ: ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (IMEC) ಅನ್ನು ಮತ್ತಷ್ಟು ಬಲಪಡಿಸುವ ಕುರಿತು ಪ್ರಧಾನಿ ಮೋದಿ ಹಾಗೂ ಮೆಲೋನಿ ಗಂಭೀರ ಚರ್ಚೆ ನಡೆಸಲಿದ್ದಾರೆ.

ವಿಶ್ವಸಂಸ್ಥೆಯ FAO ಭೇಟಿ: ಪ್ರಧಾನಿ ಮೋದಿ ಅವರು ರೋಮ್‌ನಲ್ಲಿರುವ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (FAO) ಪ್ರಧಾನ ಕಚೇರಿಗೆ ಭೇಟಿ ನೀಡಿ, ಜಾಗತಿಕ ಆಹಾರ ಭದ್ರತೆಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಲಿದ್ದಾರೆ.

ನಾನು ಇಟಲಿ ಅಧ್ಯಕ್ಷ ಸೆರ್ಗಿಯೋ ಮಟ್ಟರೆಲ್ಲಾ ಮತ್ತು ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದೇನೆ. ಈ ಭೇಟಿಯು ರಕ್ಷಣೆ, ಶುದ್ಧ ಇಂಧನ, ತಂತ್ರಜ್ಞಾನ ಮತ್ತು ವ್ಯಾಪಾರ ವಲಯದಲ್ಲಿ ಉಭಯ ದೇಶಗಳ ಸಹಕಾರವನ್ನು ಮತ್ತೊಂದು ಎತ್ತರಕ್ಕೆ ಕೊಂಡೊಯ್ಯಲಿದೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ