LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಸತಿ ಯೋಜನೆಯಡಿ ಮನೆ ನಿರ್ಮಾಣ ; ಅರ್ಜಿ ಆಹ್ವಾನ

ಮಡಿಕೇರಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಅನುದಾನ ಮಂಜೂರು ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಮುದಾಯದ ಪಲಾಪೇಕ್ಷಿಗಳು ಅರ್ಜಿಯನ್ನು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಅಥವಾ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇವರ ಕಚೇರಿಗೆ ಇದೇ ಮೇ 30 ರೊಳಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು: ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, ನಿವೇಶನದ ಹಕ್ಕುಪತ್ರ, ಆರ್.ಟಿ.ಸಿ, ಅರ್ಜಿದಾರರು ಹಿಂದೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಅಥವಾ ಇತರೆ ವಸತಿ ಯೋಜನೆಗಳಡಿ ಸೌಕರ್ಯ ಪಡೆಯದಿರುವ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯತ್/ ನಗರ ಸ್ಥಳೀಯ ಸಂಸ್ಥೆಯಿಂದ ದೃಢೀಕರಣ ಪತ್ರ. ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಮೇ, 23 ರಂದು ವಿಶ್ವ ಜೇನುನೋಣ ದಿನಾಚರಣೆ

ಮಡಿಕೇರಿ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮಂಡ್ಯ ವ್ಯಾಪ್ತಿಯ ವಿಸ್ತರಣಾ ಶಿಕ್ಷಣ ಘಟಕ, ಮಡಿಕೇರಿ ಹಾಗೂ ಅರಣ್ಯ ಮಹಾವಿದ್ಯಾಲಯ,ಪೊನ್ನಂಪೇಟೆ ಮತ್ತು ರೇನೊರೆಸ್ಟ್ ಅಲೈನ್ಸ್ ಮತ್ತು ಬೈಫ್-ಸಬಲ ಯೋಜನೆಗಳ ಸಂಯುಕ್ತ ಆಶ್ರಯದಲ್ಲಿ ಮೇ 23 ರಂದು ಬೆಳಗ್ಗೆ 10.30 ಗಂಟೆಗೆ ಅರಣ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ವಿಶ್ವ ಜೇನುನೊಣ ದಿನಾಚರಣೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಕೆ.ನಾರಾಯಣಸ್ವಾಮಿ, ಕೃಷಿ ಸಚಿವರಾದ ವಿಶೇಷ ಕರ್ತವ್ಯಾಧಿಕಾರಿಗಳಾದ ಡಾ.ಎ.ಬಿ.ಪಾಟೀಲ್, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರಾದ ಡಾ.ರಾಮಚಂದ್ರ ಸಿ., ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರು ಹಾಗೂ ಅರಣ್ಯ ಮಹಾವಿದ್ಯಾಲಯದ ಡೀನ್ (ಅರಣ್ಯ) ಡಾ ಜಿ.ಎಂ.ದೇವಗಿರಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮವು ಜೇನುಸಾಕಣೆ, ಜೇನು ಉತ್ಪನ್ನಗಳು, ಉಪಕರಣಗಳು, ಜೇನು ನೊಣಗಳ ಆಹಾರ ಸಸ್ಯಗಳು ಮತ್ತಿತರ ಬಗ್ಗೆ, ಸಮಗ್ರ ಮಾಹಿತಿಯನ್ನು ಒದಗಿಸುವ ಕಾರ್ಯಕ್ರಮವಾಗಿದ್ದು, ಕೊಡಗು ಮತ್ತು ಅಕ್ಕಪಕ್ಕದ ಜಿಲ್ಲೆಗಳ ಕೃಷಿಕರು, ಜೇನು ಸಾಕಣೆದಾರರು, ಜೇನುಸಾಕಣೆ ಆಸಕ್ತರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥರು (9880076381, ಡಾ.ಆರ್.ಎನ್.ಕೆಂಚರಡ್ಡಿ), ತೋಟಗಾರಿಕೆ ತಜ್ಞರು (9900588345 ಡಾ. ಹೇಮಂತ್ ಕುಮಾರ್ ಪಿ.) ಇವರನ್ನು ಸಂಪರ್ಕಿಸಬಹುದಾಗಿದೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ