LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಸತಿ ಯೋಜನೆಯಡಿ ಮನೆ ನಿರ್ಮಾಣ ; ಅರ್ಜಿ ಆಹ್ವಾನ

ಮಡಿಕೇರಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಅನುದಾನ ಮಂಜೂರು ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಮುದಾಯದ ಪಲಾಪೇಕ್ಷಿಗಳು ಅರ್ಜಿಯನ್ನು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಅಥವಾ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇವರ ಕಚೇರಿಗೆ ಇದೇ ಮೇ 30 ರೊಳಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು: ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, ನಿವೇಶನದ ಹಕ್ಕುಪತ್ರ, ಆರ್.ಟಿ.ಸಿ, ಅರ್ಜಿದಾರರು ಹಿಂದೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಅಥವಾ ಇತರೆ ವಸತಿ ಯೋಜನೆಗಳಡಿ ಸೌಕರ್ಯ ಪಡೆಯದಿರುವ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯತ್/ ನಗರ ಸ್ಥಳೀಯ ಸಂಸ್ಥೆಯಿಂದ ದೃಢೀಕರಣ ಪತ್ರ. ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಮೇ, 23 ರಂದು ವಿಶ್ವ ಜೇನುನೋಣ ದಿನಾಚರಣೆ

ಮಡಿಕೇರಿ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮಂಡ್ಯ ವ್ಯಾಪ್ತಿಯ ವಿಸ್ತರಣಾ ಶಿಕ್ಷಣ ಘಟಕ, ಮಡಿಕೇರಿ ಹಾಗೂ ಅರಣ್ಯ ಮಹಾವಿದ್ಯಾಲಯ,ಪೊನ್ನಂಪೇಟೆ ಮತ್ತು ರೇನೊರೆಸ್ಟ್ ಅಲೈನ್ಸ್ ಮತ್ತು ಬೈಫ್-ಸಬಲ ಯೋಜನೆಗಳ ಸಂಯುಕ್ತ ಆಶ್ರಯದಲ್ಲಿ ಮೇ 23 ರಂದು ಬೆಳಗ್ಗೆ 10.30 ಗಂಟೆಗೆ ಅರಣ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ವಿಶ್ವ ಜೇನುನೊಣ ದಿನಾಚರಣೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಕೆ.ನಾರಾಯಣಸ್ವಾಮಿ, ಕೃಷಿ ಸಚಿವರಾದ ವಿಶೇಷ ಕರ್ತವ್ಯಾಧಿಕಾರಿಗಳಾದ ಡಾ.ಎ.ಬಿ.ಪಾಟೀಲ್, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರಾದ ಡಾ.ರಾಮಚಂದ್ರ ಸಿ., ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರು ಹಾಗೂ ಅರಣ್ಯ ಮಹಾವಿದ್ಯಾಲಯದ ಡೀನ್ (ಅರಣ್ಯ) ಡಾ ಜಿ.ಎಂ.ದೇವಗಿರಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮವು ಜೇನುಸಾಕಣೆ, ಜೇನು ಉತ್ಪನ್ನಗಳು, ಉಪಕರಣಗಳು, ಜೇನು ನೊಣಗಳ ಆಹಾರ ಸಸ್ಯಗಳು ಮತ್ತಿತರ ಬಗ್ಗೆ, ಸಮಗ್ರ ಮಾಹಿತಿಯನ್ನು ಒದಗಿಸುವ ಕಾರ್ಯಕ್ರಮವಾಗಿದ್ದು, ಕೊಡಗು ಮತ್ತು ಅಕ್ಕಪಕ್ಕದ ಜಿಲ್ಲೆಗಳ ಕೃಷಿಕರು, ಜೇನು ಸಾಕಣೆದಾರರು, ಜೇನುಸಾಕಣೆ ಆಸಕ್ತರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥರು (9880076381, ಡಾ.ಆರ್.ಎನ್.ಕೆಂಚರಡ್ಡಿ), ತೋಟಗಾರಿಕೆ ತಜ್ಞರು (9900588345 ಡಾ. ಹೇಮಂತ್ ಕುಮಾರ್ ಪಿ.) ಇವರನ್ನು ಸಂಪರ್ಕಿಸಬಹುದಾಗಿದೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
‘SSLC’ ಬಳಿಕ ಸ್ಮಾರ್ಟ್ ಚಾಯ್ಸ್ : ಪಾಲಿಟೆಕ್ನಿಕ್‌ನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಬಾಗಿಲುBIG NEWS: ಮದುವೆ ಮಂಟಪದಿಂದಲೇ ರೌಡಿಶೀಟರ್ ನನ್ನು ಸಿನಿಮಾ ಸ್ಟೈಲ್ ನಲ್ಲಿ ಎಳೆದೊಯ್ದ ಪೊಲೀಸರುಕೈಕೊಟ್ಟ ಯುವತಿ: ಹೈಟೆನ್ಶನ್ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಯುವಕBIG NEWS : ಆಗಸ್ಟ್ 31ರೊಳಗೆ ‘GBA’ ಪಂಚ ಪಾಲಿಕೆ ಚುನಾವಣೆ ಪ್ರಕ್ರಿಯೆ ಮುಗಿಸಲು ಸುಪ್ರೀಂಕೋರ್ಟ್ ಅಂತಿಮ ಗಡುವುರೈತರಿಗೆ ಬಿಗ್ ಶಾಕ್: ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಮುಂಗಾರು ಬಿತ್ತನೆ ಸಮಯದಲ್ಲಿ ಅನ್ನದಾತ ಸಂಕಷ್ಟಕ್ಕೆ ಸಿಲುಕುವ ಆತಂಕಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್ ನೀಡಿದ ಪ್ರಧಾನಿ ಮೋದಿ ; ವೀಡಿಯೋ ವೈರಲ್ |WATCH VIDEOಪ್ರಪಂಚದಲ್ಲಿ ಅತಿ ಹೆಚ್ಚು ನೀರನ್ನು ಬಳಸುವ ದೇಶ ಯಾವುದು ? ಒಬ್ಬ ವ್ಯಕ್ತಿ ಎಷ್ಟು ಲೀಟರ್ ಬಳಸುತ್ತಾರೆ ? ತಿಳಿಯಿರಿ”ಅಗರಬತ್ತಿ ಹಚ್ಚಲಿಲ್ಲ, ಗಿಡಗಳಿಗೆ ನೀರು ಹಾಕಲಿಲ್ಲ”: ಮೃತ ಸೊಸೆಯ ಬಗ್ಗೆ ಭೋಪಾಲ್ ಮಹಿಳೆ ನೀಡಿದ ಹೇಳಿಕೆಗಳಿವು.!BIG NEWS : ‘ಮೆಟಾ’ ಉದ್ಯೋಗಿಗಳಿಗೆ ಬಿಗ್ ಶಾಕ್ ; ವಿಶ್ವದಾದ್ಯಂತ 8,000 ನೌಕರರ  ವಜಾ |Meta Lay offವಸತಿ ಯೋಜನೆಯಡಿ ಮನೆ ನಿರ್ಮಾಣ ; ಅರ್ಜಿ ಆಹ್ವಾನ