LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಬಿಗ್ ಶಾಕ್: ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಮುಂಗಾರು ಬಿತ್ತನೆ ಸಮಯದಲ್ಲಿ ಅನ್ನದಾತ ಸಂಕಷ್ಟಕ್ಕೆ ಸಿಲುಕುವ ಆತಂಕ

ಬೆಂಗಳೂರು: ಈಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಪ್ರವೇಶಿಸಲಿದ್ದು, ಆದರೆ ರಾಜ್ಯದಲ್ಲಿ ರಸಗೊಬ್ಬರ ಅಭಾವ ಉಂಟಾಗಿದ್ದು, ಮುಂಗಾರು ಬಿತ್ತನೆ ಸಮಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕುವ ಆತಂಕ ಎದುರಾಗಿದೆ.

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಕಾರಣಕ್ಕೆ ಇಂಧನ ಕೊರತೆ ಎದುರಾಗಿದ್ದು ಇದರ ಬೆನ್ನಲ್ಲೇ ರಸಗೊಬ್ಬರ ಕೊರತೆ ಕೂಡ ಉಂಟಾಗಿದೆ. ರಾಜ್ಯದಲ್ಲಿ 38 ಸಾವಿರ ಟನ್ ರಸಗೊಬ್ಬರ ಕೊರತೆ ಎದುರಾಗಿದೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

14 ಸಾವಿರ ಟನ್ ಯೂರಿಯಾ ಕೊರತೆಯೂ ಇರುವುದಾಗಿ ತಿಳಿಸಿರುವ ಸಚಿವ ಚಲುವರಾಯಸ್ವಾಮಿ, ರೈತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಿ ಪರ್ಯಾಯ ವಿಧಾನಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ. ರಸಗೊಬ್ಬರ ವಿತರಣೆಯಲ್ಲಿ ಅಕ್ರಮ, ದಾಸ್ತಾನು ಹಾಗೂ ಬೇರೆಡೆಗೆ ತಿರುಗಿಸುವಿಕೆ ತಪ್ಪಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿಗಾವಹಿಸಲು ಸೂಚಿಸಲಾಗಿದೆ. ಜೂನ್‌ನಲ್ಲಿ ಮುಂಗಾರು ಆರಂಭವಾಗುವ ನಿರೀಕ್ಷೆಯಿದ್ದು, ರಸಗೊಬ್ಬರ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸಿದ್ಧತೆಗಳು ನಡೆಯುತ್ತಿವೆ. ನಿಜವಾದ ರೈತರಿಗೆ ಮಾತ್ರ ರಸಗೊಬ್ಬರ ವಿತರಣೆ ಆಗುವಂತೆ FRUITS ಐಡಿ ಆಧಾರಿತ ವ್ಯವಸ್ಥೆ ಜಾರಿಗೆ ತಂದಿದ್ದೇವೆ ಎಂದು ತಿಳಿಸುದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಒಟ್ಟು 30.05 ಲಕ್ಷ ಮೆಟ್ರಿಕ್ ಟನ್ ವಿವಿಧ ರೀತಿಯ ರಸಗೊಬ್ಬರ ಹಂಚಿಕೆ ಮಾಡಿದೆ. ಇದರಲ್ಲಿ 11.10 ಲಕ್ಷ ಮೆಟ್ರಿಕ್ ಟನ್ ಯೂರಿಯಾ, 4 ಲಕ್ಷ ಮೆಟ್ರಿಕ್ ಟನ್ ಡಿಎಪಿ, 2.12 ಲಕ್ಷ ಮೆಟ್ರಿಕ್ ಟನ್ ಎಂಒಪಿ, 11.88 ಲಕ್ಷ ಮೆಟ್ರಿಕ್ ಟನ್ ಕಾಂಪ್ಲೆಕ್ಸ್ ರಸಗೊಬ್ಬರ ಹಾಗೂ 0.95 ಲಕ್ಷ ಮೆಟ್ರಿಕ್ ಟನ್ ಎಸ್‌ಎಸ್‌ಪಿ ಸೇರಿವೆ. ಆದರೆ ಈ ವರ್ಷ ಯೂರಿಯಾ ಆರಂಭಿಕ ದಾಸ್ತಾನು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಬಹಳ ಕಡಿಮೆಯಾಗಿದೆ. 2023ರಲ್ಲಿ 3.91 ಲಕ್ಷ ಮೆಟ್ರಿಕ್ ಟನ್ ಹಾಗೂ 2024ರಲ್ಲಿ 5.41 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಆರಂಭಿಕ ದಾಸ್ತಾನು ಇದ್ದರೆ, ಈ ವರ್ಷ ಅದು ಕೇವಲ 2.80 ಲಕ್ಷ ಮೆಟ್ರಿಕ್ ಟನ್‌ಗೆ ಇಳಿದಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ ತಿಂಗಳಲ್ಲಿರಾಜ್ಯವು 4.02 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇಟ್ಟಿದ್ದರೂ, ಕೇಂದ್ರದಿಂದ ಕೇವಲ 2.54 ಲಕ್ಷ ಮೆಟ್ರಿಕ್ ಟನ್ ಪೂರೈಕೆಯಾಗಿದೆ. ಇದರಿಂದ 1.48 ಲಕ್ಷ ಮೆಟ್ರಿಕ್ ಟನ್ ಕೊರತೆ ಉಂಟಾಗಿದೆ. ಇದರಲ್ಲಿ 0.38 ಲಕ್ಷ ಮೆಟ್ರಿಕ್ ಟನ್ ಡಿಎಪಿ ಹಾಗೂ 0.14 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊರತೆ ಸೇರಿದೆ. ಅದೇ ರೀತಿ ಮೇ ತಿಂಗಳಲ್ಲಿ 4.54 ಲಕ್ಷ ಮೆಟ್ರಿಕ್ ಟನ್ ಅಗತ್ಯವಿದ್ದರೂ, ಇದುವರೆಗೆ ಕೇಂದ್ರವು ಕೇವಲ 1.77 ಲಕ್ಷ ಮೆಟ್ರಿಕ್ ಟನ್ ಪೂರೈಕೆ ಮಾಡಿದೆ. ಇನ್ನೂ 2.77 ಲಕ್ಷ ಮೆಟ್ರಿಕ್ ಟನ್ ಬಾಕಿಯಿದೆ. ಇದರಲ್ಲಿ 0.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಹಾಗೂ 0.78 ಲಕ್ಷ ಮೆಟ್ರಿಕ್ ಟನ್ ಡಿಎಪಿ ಪೂರೈಕೆ ಆಗಬೇಕಿದೆ. ಈ ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸದಿದ್ದರೆ ಬಿತ್ತನೆ ಸಮಯದ ಅವಧಿಯಲ್ಲಿ ರೈತರು ಗಂಭೀರ ಸಂಕಷ್ಟ ಎದುರಿಸಬೇಕಾಗಬಹುದು ಎಂದು ಸಚಿವರು ಎಚ್ಚರಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಾನ್ ಫೆಸ್ಟಿವಲ್‌ನಲ್ಲಿ ಗುಜರಾತಿ ಪಟೋಲಾ ಉಡುಪಿನಲ್ಲಿ ಮಿಂಚಿದ ಮೌನಿ ರಾಯ್: ಭಾರತೀಯ ಸಂಸ್ಕೃತಿಗೆ ಜಾಗತಿಕ ವೇದಿಕೆಯಲ್ಲಿ ಗೌರವಸ್ಯಾಂಡಲ್‌ವುಡ್ ಬ್ಯೂಟಿ ನಿಶ್ವಿಕಾ ನಾಯ್ಡುಗೆ ಹುಟ್ಟುಹಬ್ಬದ ಸಂಭ್ರಮ: ನೆಚ್ಚಿನ ನಟಿಗೆ ಶುಭ ಕೋರಿದ ಅಭಿಮಾನಿಗಳು‘ಲೋ ನವೀನಾ’ ಚಿತ್ರದ ಮನಸೆಳೆಯುವ ‘ಮಾತು ಕಥೆ’ ಲಿರಿಕಲ್ ಹಾಡು ರಿಲೀಸ್ಕಾಕ್‌ಟೇಲ್ 2 ಗ್ಯಾಂಗ್ ಅನ್ನು ‘ಬ್ಯೂಟಿಫುಲ್ ಮೆಸ್’ ಎಂದ ರಶ್ಮಿಕಾ ಮಂದಣ್ಣ: ವೈರಲ್ ಆದ ಪೋಸ್ಟ್!ಮತ್ತೆ ಗನಕ್ಕೇರಿದ ಹಳದಿ ಲೋಹದ ದರ: 10 ಗ್ರಾಂ ಚಿನ್ನಕ್ಕೆ ₹1,310 ಜಿಗಿತ: ಆದ್ರೆ ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ ಇಂದಿನ ಲೇಟೆಸ್ಟ್ ರೇಟ್ ಇಲ್ಲಿದೆಬಿಜೆಪಿಗೆ ಬಕೆಟ್ ಹಿಡಿಯುವ ಗೋಧಿ ಮೀಡಿಯಾ ಆಂಕರ್‌ಗಳೇ ನಿಮಗೆ ನಾವು ಇಂಟರ್‌ವ್ಯೂ ಕೊಡಲ್ಲ ತಲೆ ತಿನ್ನಬೇಡಿ; ತಿವಿದ ಜಿರಳೆ ಪಕ್ಷ!ನಿಮ್ಮ ಮಗಳು ಶ್ರೀಲೀಲಾ ಮುಂಬೈ ಇಂಡಿಯನ್ಸ್‌ ಆಟಗಾರನ ಜತೆ ಲವ್‌ನಲ್ಲಿದ್ದಾರಂತೆ, ಅವರು ನಿಮ್ಮ ಅಳಿಯ ಅಂತೆ ಹೌದಾ? ಕೊನೆಗೂ ತುಟಿಬಿಚ್ಚಿದ ಶ್ರೀಲೀಲಾ ತಾಯಿನಾಲಿಗೆಗೆ ಹೊಸ ರುಚಿ ನೀಡುವ ರಾಜಸ್ಥಾನದ ಪ್ರಸಿದ್ಧ ಕಢಿ ಕಚೋರಿ: ಈ ಸರಳ ಹಂತಗಳನ್ನು ಪಾಲಿಸಿ ಸವಿಯಿರಿಡಯಟ್ ಮಾಡುವವರಿಗಾಗಿ ಸ್ಪೆಷಲ್ ಬ್ರೇಕ್‌ಫಾಸ್ಟ್: ಒಂದೇ ಒಂದು ಹನಿ ಎಣ್ಣೆಯಿಲ್ಲದೆ ಹೀಗೆ ಮಾಡಿ ಕ್ರಿಸ್ಪಿ ಮೆದು ವಡೆಮಾವಿನಹಣ್ಣಿನ ಪ್ರಿಯರೇ ಇತ್ತ ಗಮನಿಸಿ: ಪ್ರಪಂಚದಾದ್ಯಂತ ಫೇಮಸ್ ಆಗಿರುವ 7 ಮಾವಿನಹಣ್ಣಿನ ಅದ್ಭುತ ಖಾದ್ಯಗಳಿವು