LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂನಿಯರ್ ಎನ್‌ಟಿಆರ್ ‘ಡ್ರ್ಯಾಗನ್’ ಗ್ಲಿಂಪ್ಸ್‌ಗೆ ಫಿದಾ ಆದ ರಿಷಬ್ ಶೆಟ್ಟಿ: ತಾರಕ್ ಅವರನ್ನು ‘ಮ್ಯಾನ್ ಆಫ್ ಮಾಸಸ್’ ಎಂದು ಕೊಂಡಾಡಿದ ಕರಾವಳಿ ಹೀರೊ!

ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ಅವರ ಜನ್ಮದಿನದ ಅಂಗವಾಗಿ ಬಿಡುಗಡೆಯಾಗಿರುವ ಅವರ ಮುಂಬರುವ ಬಹುನಿರೀಕ್ಷಿತ ‘ಡ್ರ್ಯಾಗನ್’ ಚಿತ್ರದ ಮೊದಲ ಗ್ಲಿಂಪ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಈ ಅದ್ಭುತ ಟೀಸರ್ ವಿಡಿಯೋವನ್ನು ಕೊಂಡಾಡಿರುವ ಕಾಂತಾರ ಖ್ಯಾತಿಯ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ, ಜೂನಿಯರ್ ಎನ್‌ಟಿಆರ್ ಅವರನ್ನು ‘ನಿಜವಾದ ಜನಸಾಮಾನ್ಯರ ನಾಯಕ’ (True Man of Masses) ಎಂದು ಬಣ್ಣಿಸಿದ್ದಾರೆ. ಅಲ್ಲದೆ ಡ್ರ್ಯಾಗನ್ ಚಿತ್ರದ ಮೊದಲ ಝಲಕ್ ಅನ್ನು ‘ಪ್ಯೂರ್ ಸಿನೆಮ್ಯಾಟಿಕ್ ರೇಜ್’ ಎಂದು ಶ್ಲಾಘಿಸಿದ್ದಾರೆ.

ರಿಷಬ್ ಶೆಟ್ಟಿ ಟ್ವೀಟ್ ವೈರಲ್ ನಟ ಜೂನಿಯರ್ ಎನ್‌ಟಿಆರ್ ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಹುಟ್ಟುಹಬ್ಬದ ಹಾರ್ದಿಕ ಶುಭಕಾಮನೆಗಳನ್ನು ತಿಳಿಸಿರುವ ರಿಷಬ್ ಶೆಟ್ಟಿ, “ಡ್ರ್ಯಾಗನ್ ಚಿತ್ರದ ಗ್ಲಿಂಪ್ಸ್ ಮಾಸ್, ಮ್ಯಾಡ್ನೆಸ್ ಮತ್ತು ಶುದ್ಧ ಸಿನೆಮ್ಯಾಟಿಕ್ ರೇಜ್‌ನಿಂದ ಭರ್ಜರಿಯಾಗಿ ಗರ್ಜಿಸುತ್ತಿದೆ. ನನ್ನ ಪ್ರೀತಿಯ ಸಹೋದರ ಜೂನಿಯರ್ ಎನ್‌ಟಿಆರ್ ಅವರಿಗೆ ಜನ್ಮದಿನದ ಶುಭಾಶಯಗಳು. ಈ ವರ್ಷ ನಿಮಗೆ ಅದ್ಭುತವಾಗಿರಲಿ ಮತ್ತು ಡ್ರ್ಯಾಗನ್ ಚಿತ್ರಕ್ಕೆ ಭರ್ಜರಿ ಯಶಸ್ಸು ಸಿಗಲಿ” ಎಂದು ಬರೆದುಕೊಂಡಿದ್ದಾರೆ. ಇದರೊಂದಿಗೆ ಸಿನೆಮ್ಯಾಟಿಕ್ ಬಿರುಗಾಳಿಗಳ ಮಾಸ್ಟರ್ ಎಂದೇ ಖ್ಯಾತರಾಗಿರುವ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೂ ರಿಷಬ್ ಶುಭ ಹಾರೈಸಿದ್ದಾರೆ. ಚಿತ್ರದಲ್ಲಿ ಬಾಲಿವುಡ್ ನಟ ಅನಿಲ್ ಕಪೂರ್ ನಟಿಸುತ್ತಿರುವುದು ಈ ಮಹಾ ಬಿರುಗಾಳಿಗೆ ಮತ್ತಷ್ಟು ಬಲ ತಂದಿದೆ ಎಂದು ಅವರು ಉತ್ಸಾಹ ವ್ಯಕ್ತಪಡಿಸಿದ್ದಾರೆ.

ಲುಗರ್ ಪಾತ್ರದಲ್ಲಿ ಎನ್‌ಟಿಆರ್ ಮಾಸ್ ಎಂಟ್ರಿ ಹುಟ್ಟುಹಬ್ಬದ ಮುನ್ನಾದಿನ ಬಿಡುಗಡೆಯಾದ ‘ಡ್ರ್ಯಾಗನ್’ ಗ್ಲಿಂಪ್ಸ್‌ನಲ್ಲಿ ಜೂನಿಯರ್ ಎನ್‌ಟಿಆರ್ ಅವರ ಪಾತ್ರದ ಪರಿಚಯ ಪ್ರೇಕ್ಷಕರನ್ನು ರೋಮಾಂಚನಗೊಳಿಸಿದೆ. ಆಫ್ಘನ್ ಟ್ರೇಡಿಂಗ್ ಕಂಪನಿಯ ಮುಖ್ಯ ಹಂತಕ (ಅಸಾಸಿನ್ ಇನ್ ಚೀಫ್) ‘ಲುಗರ್’ ಎಂಬ ಅತ್ಯಂತ ಡಾರ್ಕ್ ಮತ್ತು ತೀವ್ರತೆಯುಳ್ಳ ಪಾತ್ರದಲ್ಲಿ ಎನ್‌ಟಿಆರ್ ಕಾಣಿಸಿಕೊಂಡಿದ್ದಾರೆ. ಕೆಜಿಎಫ್ ಮತ್ತು ಸಲಾರ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಈ ಆಕ್ಷನ್ ಎಪಿಕ್ ಸಿನಿಮಾ ಜೂನ್ 11, 2027 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

ಮೈತ್ರಿ ಮೂವಿ ಮೇಕರ್ಸ್ ಮತ್ತು ಎನ್‌ಟಿಆರ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಜಂಟಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರವು ಐದು ಭಾಷೆಗಳಲ್ಲಿ ತೆರೆಕಾಣಲಿದೆ. ಚಿತ್ರದಲ್ಲಿ ಅನಿಲ್ ಕಪೂರ್ ಜೊತೆಗೆ ಬಿಜು ಮೆನನ್, ರುಕ್ಮಿಣಿ ವಸಂತ್, ಖುಷ್ಬೂ ಸುಂದರ್, ಗುರು ಸೋಮಸುಂದರಂ ಮತ್ತು ಅಶುತೋಷ್ ರಾಣಾ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ