LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿಮ್ಮ ಮಗಳು ಶ್ರೀಲೀಲಾ ಮುಂಬೈ ಇಂಡಿಯನ್ಸ್‌ ಆಟಗಾರನ ಜತೆ ಲವ್‌ನಲ್ಲಿದ್ದಾರಂತೆ, ಅವರು ನಿಮ್ಮ ಅಳಿಯ ಅಂತೆ ಹೌದಾ? ಕೊನೆಗೂ ತುಟಿಬಿಚ್ಚಿದ ಶ್ರೀಲೀಲಾ ತಾಯಿ

ನಟಿ ಶ್ರೀಲೀಲಾ ಸದ್ಯ ದಕ್ಷಿಣ ಭಾರತದ ಟಾಪ್ ಒನ್ ನಟಿ. ಕನ್ನಡದ ಕಿಸ್ ಚಿತ್ರದ ಮೂಲಕ ನಟನೆ ಆರಂಭಿಸಿದ ಶ್ರೀಲೀಲಾ ತನ್ನ ಭರ್ಜರಿ ಡಾನ್ಸ್ ಹಾಗೂ ನಟನಾ ಕೌಶಲ್ಯದಿಂದ ಬೇಗನೆ ತೆಲುಗು ಚಿತ್ರರಂಗದಲ್ಲಿ ಅವಕಾಶ ಗಿಟ್ಟಿಸಿಕೊಂಡು ಬ್ಯುಸಿಯಾಗಿಬಿಟ್ಟರು.

ಮಹೇಶ್ ಬಾಬು ರೀತಿಯ ಸೂಪರ್ ಸ್ಟಾರ್‌ಗೆ ನಟಿಯಾದ ಶ್ರೀಲೀಲಾ ರೇಂಜ್ ಬೇರೆಯದ್ದೇ ಲೆವೆಲ್‌ನಲ್ಲಿದ್ದು, ನಟಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ವದಂತಿಗಳು ಸಹ ಅಷ್ಟೇ ಮಟ್ಟದಲ್ಲಿವೆ.

ನಟಿ ಶ್ರೀಲೀಲಾ ಮದುವೆ, ಬಾಯ್‌ಫ್ರೆಂಡ್ ಎಂಬ ನಾನಾ ವೈಯಕ್ತಿಕ ವಿಚಾರಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆಯುತ್ತಲೇ ಇದ್ದು, ಇತ್ತೀಚೆಗಷ್ಟೆ ಈ ವಿಷಯಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗನ ಜತೆ ಶ್ರೀಲೀಲಾ ಹೆಸರು ತಳುಕಿಹಾಕಿಕೊಂಡಿತ್ತು.

ಹೌದು, ಮುಂಬೈ ಇಂಡಿಯನ್ಸ್ ಸ್ಪೋಟಕ ಆಟಗಾರ ತಿಲಕ್ ವರ್ಮಾ ಜತೆ ಶ್ರೀಲೀಲಾ ಲವ್‌ನಲ್ಲಿ ಇದ್ದಾರೆ ಎಂಬ ಸುದ್ದಿಗಳು ದೊಡ್ಡ ಮಟ್ಟದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಆದರೆ ಈ ಕುರಿತು ನಟಿ ಶ್ರೀಲೀಲಾ ಆಗಲಿ ಅಥವಾ ತಿಲಕ್ ವರ್ಮಾ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಆದರೆ ಶ್ರೀಲೀಲಾ ತಾಯಿ ಡಾ. ಸ್ವರ್ಣಲತಾ ಈ ಕುರಿತು ಪ್ರತಿಕ್ರಿಯಿಸಿದ್ದು, ಇದೆಲ್ಲ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ. ಡೆಕ್ಕನ್ ಕ್ರಾನಿಕಲ್ ಜತೆ ಮಾತನಾಡಿದ ಅವರು ಶ್ರೀಲೀಲಾ ಹಾಗೂ ತಿಲಕ್ ವರ್ಮಾ ಇಷ್ಟು ವರ್ಷಗಳಲ್ಲಿ ಒಮ್ಮೆಯೂ ಪರಸ್ಪರ ಭೇಟಿಯಾಗಿಲ್ಲ, ಹೀಗಿರುವಾಗ ಡೇಟಿಂಗ್ ಎಲ್ಲ ವದಂತಿ ಅಷ್ಟೇ ಎಂದು ಸ್ಪಷ್ಟನೆ ಕೊಟ್ಟಿದ್ದು, ಎಲ್ಲ ಸುದ್ದಿಗಳನ್ನು ತಳ್ಳಿಹಾಕಿದ್ದಾರೆ.

ಇನ್ನು ಈ ರೀತಿಯ ವದಂತಿ ಹುಟ್ಟಿಕೊಳ್ಳಲು ಕಾರಣ ಇದೇ ಶ್ರೀಲೀಲಾ ತಾಯಿ ಸ್ವರ್ಣಲತಾ ಮುಂಬೈ ಇಂಡಿಯನ್ಸ್ ಪಂದ್ಯವನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ತೆರಳಿದ್ದರು. ಈ ವೇಳೆ ಸ್ವರ್ಣಲತಾ ಸ್ನೇಹಿತೆಯೊಬ್ಬರು ತಿಲಕ್ ವರ್ಮಾ ಹೆಸರಿರುವ ಜೆರ್ಸಿ ಧರಿಸಿದ್ದರು, ಹೀಗಾಗಿ ಈ ವದಂತಿ ಹಬ್ಬಿತು ಎಂದು ಹೇಳಲಾಗಿತ್ತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ