LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೈಲಿನಲ್ಲಿ ಬೇಸತ್ತು ನಟ ದರ್ಶನ್ ಆತ್ಮಹತ್ಯೆ ಯತ್ನ? ಡಿಜಿಪಿ ಅಲೋಕ್ ಕುಮಾರ್‌ ಕೊಟ್ಟ ಉತ್ತರವೇನು?

ನಿನ್ನೆ ( ಮೇ 19 ) ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಅವರ 23ನೇ ವರ್ಷದ ವಿವಾಹ ವಾರ್ಷಿಕೋತ್ಸವದ ವಿಶೇಷ ದಿನವಿತ್ತು. ಹೀಗಾಗಿ ವಿಜಯಲಕ್ಷ್ಮಿ ದರ್ಶನ್ ತಾವು ತಮ್ಮ ಪತಿಯನ್ನು ಖುದ್ದಾಗಿ, ವೈಯಕ್ತಿಕವಾಗಿ ಭೇಟಿಯಾಗಲು ಅನುವು ಮಾಡಿಕೊಡುವಂತೆ ಪರಪ್ಪನ ಅಗ್ರಹಾರ ಕಾರಾಗೃಹದ ಡಿಜಿಪಿ ಅಲೋಕ್ ಕುಮಾರ್ ಅವರಿಗೆ ಬೇಡಿಕೆಯನ್ನು ಇಟ್ಟಿದ್ದರು.

ಅದರಂತೆ ವಿಜಯಲಕ್ಷ್ಮಿ ದರ್ಶನ್ ತಮ್ಮ ವಿವಾಹ ವಾರ್ಷಿಕೋತ್ಸವದ ದಿನದಂದು ಮಗನ ಸಮೇತ ಕೊಲೆ ಆರೋಪಿ ದರ್ಶನ್ ಇದ್ದ ಕಾರಾಗೃಹಕ್ಕೆ ತೆರಳಿ ಭೇಟಿಯಾಗಿ ಬಂದಿದ್ದರು.

ಈ ಸುದ್ದಿಗಳ ಜತೆ ಕೆಲ ಮಾಧ್ಯಮಗಳು ನಟ ದರ್ಶನ್ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ ಎಂಬ ಸುದ್ದಿ ಸಹ ಹರಿದಾಡಿತ್ತು. ಹಲವು ದಿನಗಳಿಂದ ಜೈಲಿನಲ್ಲೇ ಇರುವ ದರ್ಶನ್ ಬೇಸತ್ತು ಆತ್ಮಹತ್ಯೆ ಯತ್ನ ಮಾಡಿದರು ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿದೆ ಎಂದು ಹೆಡ್‌ಲೈನ್‌ಗಳು ಹರಿದಾಡಿದ್ದವು.

ಇದನ್ನು ದರ್ಶನ್ ಮೇಲೆ ಎಲ್ಲಿಲ್ಲದ ಪ್ರೀತಿ ಇಟ್ಟುಕೊಂಡಿರುವ ಕೆಲ ಅಭಿಮಾನಿಗಳು ಕಂಡು ತೀರ ಬೇಸರಕ್ಕೆ ಒಳಗಾಗಿದ್ದರು. ಆದರೆ ಪರಪ್ಪನ ಅಗ್ರಹಾರ ಕಾರಾಗೃಹದ ಡಿಜಿಪಿ ಅಲೋಕ್ ಕುಮಾರ್ ಮಾತನಾಡಿ ಇದೊಂದು ಸುಳ್ಳು ಸುದ್ದಿ ಎಂದು ಸ್ಪಷ್ಟನೆಯನ್ನು ಕೊಟ್ಟರು. ಇದೊಂದು ಗಾಳಿ ಸುದ್ದಿಯಾಗಿದ್ದು ಅಭಿಮಾನಿಗಳಲ್ಲಿ ಇದರಿಂದ ಆತಂಕ ಮೂಡಿದೆ, ಯಾರೂ ಸಹ ಈ ಸುದ್ದಿಗೆ ಕಿವಿಗೊಡಬೇಡಿ ಎಂದರು. ಇನ್ನು ಇದೊಂದು ಆಧಾರರಹಿತ ವದಂತಿಯಾಗಿದ್ದು, ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿಕೆ ನೀಡಿದರು.

ಇನ್ನೂ ಮುಂದುವರಿದು ಮಾತನಾಡಿದ ಅಲೋಕ್ ಕುಮಾರ್ ದರ್ಶನ್ ಅವರಿಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಲ್ಲಿ ಬೇಲ್ ಸಿಗದೇ ಇರುವುದರಿಂದ ಕುಗ್ಗಿರುವುದು ನಿಜ ಎಂದರು. ಅಲ್ಲದೇ ತಿಂಗಳಿಗೆ 60 ನಿಮಿಷ ದೂರವಾಣಿಯಲ್ಲಿ ಮಾತನಾಡುವ ಅವಕಾಶವನ್ನು ಏರಿಕೆ ಮಾಡಿ ಎಂದೂ ಸಹ ದರ್ಶನ್ ಮನವಿ ಮಾಡಿಕೊಂಡರು ಎಂದು ಅಲೋಕ್ ಕುಮಾರ್ ತಿಳಿಸಿದರು.

Disclaimer: ಜೀವನದಲ್ಲಿ ಯಾವುದೇ ಕಹಿ ಘಟನೆ ನಡೆದರೂ ಅಥವಾ ಹಿನ್ನಡೆಯುಂಟಾದರೂ ಎಲ್ಲದ್ದಕ್ಕೂ ಆತ್ಮಹತ್ಯೆಯೇ ಪರಿಹಾರವಲ್ಲ. ಒಂದುವೇಳೆ ನಿಮಗೆ ಆತ್ಮಹತ್ಯೆಯಂತಹ ಕೆಟ್ಟ ಆಲೋಚನೆ ಬಂದರೆ ನಿಮ್ಮ ಪ್ರೀತಿ ಪಾತ್ರರ ಜತೆ ಮಾತನಾಡಿ ಅಥವಾ ಈ ಟೋಲ್‌ ಫ್ರೀ ನಂಬರ್‌ಗೆ ಕರೆ ಮಾಡಿ: 9152987821

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ