LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲಬುರಗಿಯಲ್ಲಿ ‘ಪಿಎಂ ಮಿತ್ರ ಜವಳಿ ಪಾರ್ಕ್’ ನಿರ್ಮಾಣಕ್ಕೆ ಮತ್ತಷ್ಟು ವೇಗ

ಬೆಂಗಳೂರು: ಕಲಬುರಗಿಯಲ್ಲಿ ಸ್ಥಾಪನೆಯಾಗಲಿರುವ ಮಹತ್ವಾಕಾಂಕ್ಷಿ ‘ಪಿಎಂ ಮಿತ್ರ ಜವಳಿ ಪಾರ್ಕ್’ ಯೋಜನೆಯ ಕಾಮಗಾರಿ ಕುರಿತು ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಮಾಡಿದ ಘೋಷಣೆಯನ್ನು ಕಾಲಮಿತಿಯಲ್ಲಿ ಜಾರಿಗೆ ತರಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.‌

ಕಲಬುರಗಿ ಜವಳಿ ಪಾರ್ಕ್‌ನ ಬಾಹ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಒಳಗೊಂಡಂತೆ ಸಮಗ್ರ ಯೋಜನಾ ವರದಿಯನ್ನು ತಕ್ಷಣವೇ ಪರಿಷ್ಕರಿಸಿ, ಭಾರತ ಸರ್ಕಾರದ ಯೋಜನಾ ಅನುಮೋದನೆ ಸಮಿತಿಗೆ ಸಲ್ಲಿಸಲು ಕೈಮಗ್ಗ ಮತ್ತು ಜವಳಿ ಇಲಾಖೆಗೆ ನಿರ್ದೇಶಿಸಲಾಯಿತು.

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಮೂಲಕ ಪಾರ್ಕ್‌ನ ಮೊದಲ ಹಂತದ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣವೇ ಆರಂಭಿಸಲು ಸಭೆಯಲ್ಲಿ ಸೂಚಿಸಿದ್ದು, ಮೊದಲ ಹಂತದ ಯಶಸ್ವಿ ಅನುಷ್ಠಾನದ ನಂತರವಷ್ಟೇ ಉದ್ಯೋಗ ಸೃಷ್ಟಿ ಮತ್ತು ಹೂಡಿಕೆ ಪ್ರಮಾಣವನ್ನು ಆಧರಿಸಿ ಎರಡನೇ ಹಂತದ ಅಭಿವೃದ್ಧಿಗೆ ಚಾಲನೆ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕೇಂದ್ರ ಸರ್ಕಾರದ ‘ಅಭಿವೃದ್ಧಿ ಬಂಡವಾಳ ಬೆಂಬಲ’ ಯೋಜನೆಯಡಿ ಒಟ್ಟು ಯೋಜನಾ ವೆಚ್ಚದ ಶೇ. 30 ರಷ್ಟು (ಗರಿಷ್ಠ ₹500 ಕೋಟಿ) ಅನುದಾನ ಲಭ್ಯವಾಗಲಿದ್ದು, ಇದನ್ನು ಎರಡು ಹಂತಗಳಲ್ಲಿ ಬಳಸಿಕೊಳ್ಳಲಾಗುವುದು. ಕೇಂದ್ರದ ಮಾರ್ಗಸೂಚಿಗಳ ಪ್ರಕಾರ, ಪಾರ್ಕ್‌ನ ಗೇಟ್‌ನಿಂದ ಹೊರಗಡೆ ನಡೆಯುವ ಬಾಹ್ಯ ಕಾಮಗಾರಿಗಳನ್ನು ಒಟ್ಟಾರೆ ಅನುದಾನದ ಅರ್ಹತೆಗಾಗಿ ಪರಿಗಣಿಸಬಹುದಾದರೂ, ಕೇಂದ್ರದ ನಿಜವಾದ ಧನಸಹಾಯವನ್ನು ಕೇವಲ ಪಾರ್ಕ್‌ನ ಒಳಗಿನ ಆಂತರಿಕ ಮೂಲಸೌಕರ್ಯಗಳಾದ ರಸ್ತೆ, ನೀರು, ವಿದ್ಯುತ್, ತ್ಯಾಜ್ಯ ನೀರು ಸಂಸ್ಕರಣಾ ಘಟಕ ಮತ್ತು ವಸತಿ ನಿಲಯಗಳಿಗಾಗಿ ಬಳಸಲಾಗುವುದು.

ಕಲಬುರಗಿ ಜಿಲ್ಲೆಯ ಆರ್ಥಿಕ ಚಿತ್ರಣವನ್ನು ಬದಲಿಸಬಲ್ಲ ಹಾಗೂ ಸಾವಿರಾರು ಜನರಿಗೆ ಉದ್ಯೋಗ ನೀಡಬಲ್ಲ ಈ ಬೃಹತ್ ಜವಳಿ ಪಾರ್ಕ್ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆಗೆ ಅನುವಾಗುವಂತೆ, ರಾಜ್ಯ ಅನುಷ್ಠಾನ ಸಂಸ್ಥೆಯು ಕನಿಷ್ಠ ₹25 ಕೋಟಿ ಹಣವನ್ನು ಭೌತಿಕ ಮೂಲಸೌಕರ್ಯಗಳಿಗಾಗಿ ವಿನಿಯೋಗಿಸುವ ಪ್ರಕ್ರಿಯೆಗೆ ಚಾಲನೆ ನೀಡಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು.

ರಾಜ್ಯದ ಟೆಕ್ಸ್ ಟೈಲ್ಸ್ ಉದ್ಯಮಕ್ಕೆ ಹೊಸ ಆಯಾಮ ನೀಡುವ ಈ ಮಹತ್ವಾಕಾಂಕ್ಷಿ ಯೋಜನೆಯ ಮೊದಲ ಹಂತವನ್ನು ಕೆಐಎಡಿಬಿ ಮೂಲಕ ಜಾರಿಗೊಳಿಸುವ ಕುರಿತು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಜೊತೆಗೆ ಯೋಜನೆಗೆ ಅಗತ್ಯವಾದ ಆಡಳಿತಾತ್ಮಕ ಅನುಮೋದನೆಗಾಗಿ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಸಹ ನಿರ್ಧರಿಸಲಾಯಿತು.

ಈ ಟೆಕ್ಸ್ ಟೈಲ್ಸ್ ಪಾರ್ಕ್ ಸ್ಥಾಪನೆಯಿಂದ ಕಲಬುರಗಿ ಭಾಗದಲ್ಲಿ ಭಾರಿ ಪ್ರಮಾಣದ ಹೂಡಿಕೆ, ಸಾವಿರಾರು ಉದ್ಯೋಗಾವಕಾಶಗಳು ಹಾಗೂ ಜವಳಿ ಕ್ಷೇತ್ರದಲ್ಲಿ ಸಮಗ್ರ ಕೈಗಾರಿಕಾ ಪರಿಸರ ನಿರ್ಮಾಣವಾಗಲಿದ್ದು, ಹೈದರಾಬಾದ್-ಕರ್ನಾಟಕ ಭಾಗದ ಆರ್ಥಿಕ ಅಭಿವೃದ್ಧಿಗೆ ಹೊಸ ಚೈತನ್ಯ ದೊರೆಯಲಿದೆ.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್