LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲಬುರಗಿಯಲ್ಲಿ ‘ಪಿಎಂ ಮಿತ್ರ ಜವಳಿ ಪಾರ್ಕ್’ ನಿರ್ಮಾಣಕ್ಕೆ ಮತ್ತಷ್ಟು ವೇಗ

ಬೆಂಗಳೂರು: ಕಲಬುರಗಿಯಲ್ಲಿ ಸ್ಥಾಪನೆಯಾಗಲಿರುವ ಮಹತ್ವಾಕಾಂಕ್ಷಿ ‘ಪಿಎಂ ಮಿತ್ರ ಜವಳಿ ಪಾರ್ಕ್’ ಯೋಜನೆಯ ಕಾಮಗಾರಿ ಕುರಿತು ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಮಾಡಿದ ಘೋಷಣೆಯನ್ನು ಕಾಲಮಿತಿಯಲ್ಲಿ ಜಾರಿಗೆ ತರಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.‌

ಕಲಬುರಗಿ ಜವಳಿ ಪಾರ್ಕ್‌ನ ಬಾಹ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಒಳಗೊಂಡಂತೆ ಸಮಗ್ರ ಯೋಜನಾ ವರದಿಯನ್ನು ತಕ್ಷಣವೇ ಪರಿಷ್ಕರಿಸಿ, ಭಾರತ ಸರ್ಕಾರದ ಯೋಜನಾ ಅನುಮೋದನೆ ಸಮಿತಿಗೆ ಸಲ್ಲಿಸಲು ಕೈಮಗ್ಗ ಮತ್ತು ಜವಳಿ ಇಲಾಖೆಗೆ ನಿರ್ದೇಶಿಸಲಾಯಿತು.

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಮೂಲಕ ಪಾರ್ಕ್‌ನ ಮೊದಲ ಹಂತದ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣವೇ ಆರಂಭಿಸಲು ಸಭೆಯಲ್ಲಿ ಸೂಚಿಸಿದ್ದು, ಮೊದಲ ಹಂತದ ಯಶಸ್ವಿ ಅನುಷ್ಠಾನದ ನಂತರವಷ್ಟೇ ಉದ್ಯೋಗ ಸೃಷ್ಟಿ ಮತ್ತು ಹೂಡಿಕೆ ಪ್ರಮಾಣವನ್ನು ಆಧರಿಸಿ ಎರಡನೇ ಹಂತದ ಅಭಿವೃದ್ಧಿಗೆ ಚಾಲನೆ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕೇಂದ್ರ ಸರ್ಕಾರದ ‘ಅಭಿವೃದ್ಧಿ ಬಂಡವಾಳ ಬೆಂಬಲ’ ಯೋಜನೆಯಡಿ ಒಟ್ಟು ಯೋಜನಾ ವೆಚ್ಚದ ಶೇ. 30 ರಷ್ಟು (ಗರಿಷ್ಠ ₹500 ಕೋಟಿ) ಅನುದಾನ ಲಭ್ಯವಾಗಲಿದ್ದು, ಇದನ್ನು ಎರಡು ಹಂತಗಳಲ್ಲಿ ಬಳಸಿಕೊಳ್ಳಲಾಗುವುದು. ಕೇಂದ್ರದ ಮಾರ್ಗಸೂಚಿಗಳ ಪ್ರಕಾರ, ಪಾರ್ಕ್‌ನ ಗೇಟ್‌ನಿಂದ ಹೊರಗಡೆ ನಡೆಯುವ ಬಾಹ್ಯ ಕಾಮಗಾರಿಗಳನ್ನು ಒಟ್ಟಾರೆ ಅನುದಾನದ ಅರ್ಹತೆಗಾಗಿ ಪರಿಗಣಿಸಬಹುದಾದರೂ, ಕೇಂದ್ರದ ನಿಜವಾದ ಧನಸಹಾಯವನ್ನು ಕೇವಲ ಪಾರ್ಕ್‌ನ ಒಳಗಿನ ಆಂತರಿಕ ಮೂಲಸೌಕರ್ಯಗಳಾದ ರಸ್ತೆ, ನೀರು, ವಿದ್ಯುತ್, ತ್ಯಾಜ್ಯ ನೀರು ಸಂಸ್ಕರಣಾ ಘಟಕ ಮತ್ತು ವಸತಿ ನಿಲಯಗಳಿಗಾಗಿ ಬಳಸಲಾಗುವುದು.

ಕಲಬುರಗಿ ಜಿಲ್ಲೆಯ ಆರ್ಥಿಕ ಚಿತ್ರಣವನ್ನು ಬದಲಿಸಬಲ್ಲ ಹಾಗೂ ಸಾವಿರಾರು ಜನರಿಗೆ ಉದ್ಯೋಗ ನೀಡಬಲ್ಲ ಈ ಬೃಹತ್ ಜವಳಿ ಪಾರ್ಕ್ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆಗೆ ಅನುವಾಗುವಂತೆ, ರಾಜ್ಯ ಅನುಷ್ಠಾನ ಸಂಸ್ಥೆಯು ಕನಿಷ್ಠ ₹25 ಕೋಟಿ ಹಣವನ್ನು ಭೌತಿಕ ಮೂಲಸೌಕರ್ಯಗಳಿಗಾಗಿ ವಿನಿಯೋಗಿಸುವ ಪ್ರಕ್ರಿಯೆಗೆ ಚಾಲನೆ ನೀಡಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು.

ರಾಜ್ಯದ ಟೆಕ್ಸ್ ಟೈಲ್ಸ್ ಉದ್ಯಮಕ್ಕೆ ಹೊಸ ಆಯಾಮ ನೀಡುವ ಈ ಮಹತ್ವಾಕಾಂಕ್ಷಿ ಯೋಜನೆಯ ಮೊದಲ ಹಂತವನ್ನು ಕೆಐಎಡಿಬಿ ಮೂಲಕ ಜಾರಿಗೊಳಿಸುವ ಕುರಿತು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಜೊತೆಗೆ ಯೋಜನೆಗೆ ಅಗತ್ಯವಾದ ಆಡಳಿತಾತ್ಮಕ ಅನುಮೋದನೆಗಾಗಿ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಸಹ ನಿರ್ಧರಿಸಲಾಯಿತು.

ಈ ಟೆಕ್ಸ್ ಟೈಲ್ಸ್ ಪಾರ್ಕ್ ಸ್ಥಾಪನೆಯಿಂದ ಕಲಬುರಗಿ ಭಾಗದಲ್ಲಿ ಭಾರಿ ಪ್ರಮಾಣದ ಹೂಡಿಕೆ, ಸಾವಿರಾರು ಉದ್ಯೋಗಾವಕಾಶಗಳು ಹಾಗೂ ಜವಳಿ ಕ್ಷೇತ್ರದಲ್ಲಿ ಸಮಗ್ರ ಕೈಗಾರಿಕಾ ಪರಿಸರ ನಿರ್ಮಾಣವಾಗಲಿದ್ದು, ಹೈದರಾಬಾದ್-ಕರ್ನಾಟಕ ಭಾಗದ ಆರ್ಥಿಕ ಅಭಿವೃದ್ಧಿಗೆ ಹೊಸ ಚೈತನ್ಯ ದೊರೆಯಲಿದೆ.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ