ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಪತ್ನಿ ನೇಣಿಗೆ ಶರಣಾಗಿದ್ದಾರೆ. ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೆಚ್ಎಎಲ್ ಪೊಲೀಸ್ ಠಾಣೆಯ ಕಾನ್ಸ್ ಸ್ಟೆಬಲ್ ರಾಜೇಶ್ ಆರಾಧ್ಯ ಪತ್ನಿ ಲಕ್ಷ್ಮಿಪ್ರಿಯಾ(27) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ರಾಜೇಶ್ -ಲಕ್ಷ್ಮಿಪ್ರಿಯಾ ದಂಪತಿಗೆ ಎಂಟು ತಿಂಗಳ ಮಗುವಿದೆ.
ತಂದೆ, ತಾಯಿಗೆ ಮರ್ಯಾದೆ ಕೊಡಲ್ಲವೆಂದು ಪತ್ನಿಗೆ ರಾಜೇಶ್ ಬೈದಾಡಿದ್ದ. ಇದೇ ಕಾರಣಕ್ಕೆ ಪತಿ ಕೆಲಸಕ್ಕೆ ತೆರಳಿದ್ದಾಗ ಲಕ್ಷ್ಮಿಪ್ರಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಆರ್ ಪುರಂ ಠಾಣೆಯಲ್ಲಿ ಪತಿ ರಾಜೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಲಕ್ಷ್ಮಿ ಪ್ರಿಯ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಕೇಸು ದಾಖಲಾಗಿದೆ.
ಪತಿ ರಾಜೇಶ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪದಡಿ ದೂರು ನೀಡಲಾಗಿದೆ. 2023ರಲ್ಲಿ ಮೈಸೂರಿನಲ್ಲಿ ಮದುವೆಯಾಗಿತ್ತು. ಪತಿ ರಾಜೇಶ್ ಮತ್ತು ಕುಟುಂಬ ಸದಸ್ಯರು ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಲಕ್ಷ್ಮಿ ಪ್ರಿಯಾಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಪತಿ ರಾಜೇಶ್ ಆರಾಧ್ಯ ಮತ್ತು ಕುಟುಂಬ ಸದಸ್ಯರ ವಿರುದ್ಧ ಠಾಣೆಗೆ ದೂರು ನೀಡಲಾಗಿದೆ. ಲಕ್ಷ್ಮಿಪ್ರಿಯಾ ಪೋಷಕರು ನೀಡಿದ ದೂರಿನ ಅನ್ವಯ ಕೆಆರ್ ಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.