LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಸ್ಲಿಂ ಮಹಿಳೆಯಿಂದ ದಸರಾ ಉದ್ಘಾಟನೆ ಮಾಡಿಸಿದ್ದಕ್ಕೆ ಸಿದ್ದು ಮೇಲೆ ಚಾಮುಂಡೇಶ್ವರಿಯ ಸೇಡು: ಅದಕ್ಕೆ ಸಿಎಂ ಪೋಸ್ಟ್ ಹೊಗೆಯಂತೆ!

ಮೊನ್ನೆ ( ಮೇ 28 ) ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಮಹತ್ವದ ದಿನವಾಗಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯ ಬಿರುಗಾಳಿಯೇ ಬೀಸಿತು. ಹಲವು ದಿನಗಳಿಂದ ವದಂತಿ ಎಂದೇ ಕರೆಸಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಬದಲಾವಣೆ ವಿಚಾರ ಸತ್ಯವಾಗಿದ್ದು, ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡಿದ್ದಾರೆ.

ರಾಜ್ಯವನ್ನು ದೇವರಾಜು ಅರಸು ಬಳಿಕ ಅತಿಹೆಚ್ಚು ಕಾಲ ಆಳಿದ ಸಿದ್ದರಾಮಯ್ಯ ಹೈಕಮಾಂಡ್ ಸೂಚನೆ ಮೇರೆಗೆ ರಾಜೀನಾಮೆ ನೀಡಿದ್ದೇನೆ ಎಂದು ಘೋಷಣೆ ಮಾಡಿದರು. ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುತ್ತಿದ್ದಂತೆ ಅವರ ಸಿದ್ಧಾಂತ ಹಾಗೂ ತತ್ವಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡ ಸಾಮಾನ್ಯ ಜನರು ಕೋಮುಗಲಭೆ ವಿರುದ್ಧ ಸದಾ ಹೋರಾಡಿ, ಸರ್ವರೂ ಸಮಾನರು ಎಂಬ ತತ್ವವನ್ನು ಪಾಲಿಸಿ ಬಡವರ ಪರ ಕೆಲಸ ಮಾಡಿದ ಸಿಎಂ ಎಂದು ಕೊಂಡಾಡಿದರು.

ಒಂದೆಡೆ ಸಮಾನತೆಯ ಕೂಗು ಕೇಳಿಬಂದರೆ ಮತ್ತೊಂದೆಡೆ ಇದೇ ವೇಳೆ ಕೋಮುಗಲಭೆ ಪ್ರಿಯರು ಸಿದ್ದರಾಮಯ್ಯ ರಾಜೀನಾಮೆಯನ್ನು ಸಂಭ್ರಮಿಸಿದರು. ಸಾವನ್ನೇ ಸಂಭ್ರಮಿಸುವ ಕಾಲದಲ್ಲಿ ಮುಖ್ಯಮಂತ್ತಿ ನಿವೃತ್ತಿ ಸಂಭ್ರಮಾಚರಣೆ ಆಶ್ಚರ್ಯವೇನಲ್ಲ. ಆದರೆ ಅದಕ್ಕೆ ಬಳಸಿರುವ ವಿಷಯ ಆ‍ಶ್ಚರ್ಯ ಹಾಗೂ ಕೋಮು ವಿಷ ಬೀಜ ಅವರ ಮನಸ್ಸಿನಲ್ಲಿ ಯಾವ ಮಟ್ಟಿಗೆ ನಾಟಿದೆ ಎಂಬುದಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ವಿಜಯ್ ಸಾಯಿ ಎಂಬ ಬಳಕೆದಾರ ಕಳೆದ ಬಾರಿ ದಸರಾವನ್ನು ಮಹಾನ್ ಸಾಧಕಿ, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಉದ್ಘಾಟಿಸಿದ ವಿಷಾರವನ್ನು ಎಳೆತಂದು ಸಿದ್ದು ರಾಜೀನಾಮೆ ಸಂಭ್ರಮಿಸಿದ್ದಾನೆ. ಬಾನು ಮುಷ್ತಾಕ್ ಹಾಗೂ ಸಿದ್ದರಾಮಯ್ಯ ದಸರಾ ಉದ್ಘಾಟಿಸುತ್ತಿರುವ ಫೋಟೊ ಹಂಚಿಕೊಂಡಿರುವ ಈತ ‘ನೀವು ಯಾರೇ ಆಗಿರಿ. ದೇವಿ ಚಾಮುಂಡೇಶ್ವರಿ ಹಾಗೂ ಅವಳ ಸಾಮ್ರಾಜ್ಯದ ಜತೆ ಆಟ ಆಡಿ ತಪ್ಪಿಸಿಕೊಳ್ಳಲು ಆಗಲ್ಲ. ನಿಮ್ಮ ಕಥೆ ಎಲ್ಲಿ ಮುಗಿಯಬೇಕೋ ಅಲ್ಲೇ ಮುಗಿಯುತ್ತೆ’ ಎಂದು ಬರೆದುಕೊಂಡಿದ್ದಾನೆ.

ಈ ಮೂಲಕ ಹಿಂದೂ ದೇವರ ಹಬ್ಬವನ್ನು ಮುಸ್ಲಿಂ ಮಹಿಳೆಯಿಂದ ಉದ್ಘಾಟನೆ ಮಾಡಿಸಿದ್ದಕ್ಕೆ ಸ್ವತಃ ಚಾಮುಂಡೇಶ್ವರಿಯೇ ಏಳೆಂಟು ತಿಂಗಳ ಸಮಯ ತೆಗೆದುಕೊಂಡು ಸೇಡು ತೀರಿಸಿಕೊಂಡಿದ್ದಾಳೆ ಎಂದು ಈತ ಬರೆದುಕೊಂಡಿದ್ದಾನೆ. ಈ ಪೋಸ್ಟ್‌ಗೆ ಹಲವರು ಪ್ರತಿಕ್ರಿಯೆಯನ್ನು ನೀಡಿದ್ದು, ಬಳಕೆದಾರನ ನೀಚ ಮನಸ್ಥಿತಿಗೆ ತಿರುಗೇಟು ಕೊಟ್ಟಿದ್ದಾರೆ ಹಾಗೂ ಅನಕ್ಷರಸ್ಥ ಎಂದು ಹೀಯಾಳಿಸಿದ್ದಾರೆ.

ಸೇಡು ತೀರಿಸಿಕೊಳ್ಳುವುದು ದೇವರ ಗುಣವಲ್ಲ ಎಂಬ ದೊಡ್ಡ ಮಾತನ್ನು ಓರ್ವ ಬಳಕೆದಾರ ಆಡಿದ್ದು, ಎಂಟು ವರ್ಷಗಳ ಕಾಲ ಸಿಎಂ ಆಗಿ ಮೆರೆದವರ ಕುರಿತು ಇಂತಹ ಪೋಸ್ಟ್ ಹಾಕುವುದು ಅರ್ಥಹೀನ ಎಂದಿದ್ದಾರೆ. ಅಲ್ಲದೇ ಸಿದ್ದು ಎರಡು ಬಾರಿ ಸಿಎಂ ಆಗಿದ್ದಾರೆ, ಸೇಡು ತೀರಿಸಿಕೊಳ್ಳಲು ಇಷ್ಟು ದಿನ ಬೇಕಿತ್ತಾ ಎಂದೆಲ್ಲ ಪಾಠ ಮಾಡಿದ್ದಾರೆ.

ಒಟ್ಟಿನಲ್ಲಿ ಎಲ್ಲರೂ ಒಂದೇ ಎನ್ನುವ ಮನಸ್ಥಿತಿ ಇರುವ ವ್ಯಕ್ತಿ ಕುರಿತು ಜಾತಿ ಹಾಗೂ ಧರ್ಮದ ಮದ ಏರಿರುವ ಕ್ರಿಮಿಗಳು ಏನೇ ಆದರೂ ಮಾತನಾಡುವುದನ್ನು ಬಿಡುವುದಿಲ್ಲ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್