LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೊಡ್ಡಆಲಹಳ್ಳಿಯ ಸಾಮಾನ್ಯ ಹುಡುಗ ಇಂದು ಕರ್ನಾಟಕದ ಕಿಂಗ್ ಮೇಕರ್: ಡಿ.ಕೆ. ಶಿವಕುಮಾರ್ ರಾಜಕೀಯ ಸಾಮ್ರಾಜ್ಯದ ಕಂಪ್ಲೀಟ್ ಸ್ಟೋರಿ

ಬೆಂಗಳೂರು: ಕನಕಪುರ ತಾಲೂಕಿನ ಸಣ್ಣ ಗ್ರಾಮವೊಂದರಲ್ಲಿ ಜನಿಸಿ, ಇಂದು ಕರ್ನಾಟಕ ರಾಜಕಾರಣದ ದಿಕ್ಸೂಚಿಯನ್ನು ಬದಲಿಸುವಷ್ಟರ ಮಟ್ಟಿಗೆ ಬೆಳೆದು ನಿಂತಿರುವ ನಾಯಕ ಡಿ.ಕೆ. ಶಿವಕುಮಾರ್. ರಾಜಕೀಯದಲ್ಲಿ ಸೋಲು-ಗೆಲುವು, ಏಳು-ಬೀಳು, ಜೈಲು-ಅಧಿಕಾರ ಎಲ್ಲವನ್ನೂ ಹತ್ತಿರದಿಂದ ನೋಡಿರುವ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ವಿದ್ಯಾರ್ಥಿ ನಾಯಕನಾಗಿ ರಾಜಕೀಯ ಪ್ರವೇಶ
ಜನನ ಹಾಗೂ ಹಿನ್ನೆಲೆ: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ಅವರ ಮೊದಲ ಪುತ್ರನಾಗಿ ಶಿವಕುಮಾರ್ ಜನಿಸಿದರು.

ಆರಂಭಿಕ ದಿನಗಳು: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘದ (ಎನ್‌ಎಸ್‌ಯುಐ) ಬೆಂಗಳೂರು ಘಟಕದ ಅಧ್ಯಕ್ಷರಾಗುವ ಮೂಲಕ ವಿದ್ಯಾರ್ಥಿ ನಾಯಕನಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದರು.

ದೇವೇಗೌಡರ ವಿರುದ್ಧವೇ ರಾಜಕೀಯ ಫೈಟ್
ಮೊದಲ ಸೆಣಸಾಟ: ಕೇವಲ ೨೩ನೇ ವಯಸ್ಸಿನಲ್ಲಿಯೇ ಸಾತನೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಭಾವಿ ನಾಯಕ ಎಚ್‌.ಡಿ. ದೇವೇಗೌಡ ವಿರುದ್ಧ ಅಖಾಡಕ್ಕಿಳಿದರು.

ಗಮನ ಸೆಳೆದ ಸೋಲು: ಈ ಚುನಾವಣೆಯಲ್ಲಿ 15 ,000 ಮತಗಳ ಅಂತರದಿಂದ ಸೋತರೂ, ದೈತ್ಯ ನಾಯಕನಿಗೆ ಪ್ರಬಲ ಸ್ಪರ್ಧೆ ಒಡ್ಡಿದ ಕಾರಣಕ್ಕೆ ಕಾಂಗ್ರೆಸ್ ಹಿರಿಯ ನಾಯಕರ ಗಮನ ಸೆಳೆದರು.

ಮುಂದಿನ ಹೆಜ್ಜೆ: ಬಳಿಕ ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆಯಾದರು.

ಮೊದಲ ಬಾರಿ ಶಾಸಕ, 30ಕ್ಕೇ ಸಚಿವ ಗರಿ
ಮೊದಲ ಗೆಲುವು (1989): ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಿ ಜನತಾ ಪಕ್ಷದ ಅಭ್ಯರ್ಥಿ ವಿರುದ್ಧ 30.945ಮತಗಳ ಭಾರಿ ಅಂತರದಿಂದ ಗೆದ್ದು, ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.

ಕಿರಿಯ ಸಚಿವ: ಅಂದಿನ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಅವರ ಸಂಪುಟದಲ್ಲಿ ಬಂದಿಖಾನೆ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಈ ಮೂಲಕ ೩೦ನೇ ವಯಸ್ಸಿಗೇ ಸಚಿವರಾದ ಹೆಗ್ಗಳಿಕೆ ಇವರದ್ದಾಯಿತು.

ಬಂಡಾಯದ ಗೆಲುವು (1994): ಕಾಂಗ್ರೆಸ್‌ನಿಂದ ಟಿಕೆಟ್‌ ನಿರಾಕರಿಸಲ್ಪಟ್ಟಾಗ ಧೃತಿಗೆಡದೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದರು.

ಕುಮಾರಸ್ವಾಮಿ ವಿರುದ್ಧ ಗೆಲುವು & ಕೃಷ್ಣ ಸಂಪುಟದಲ್ಲಿ ಸಚಿವ
ಎಚ್‌ಡಿಕೆ ವಿರುದ್ಧ ಜಯ (1999): ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಸಾತನೂರಿನಲ್ಲಿ ಸ್ಪರ್ಧಿಸಿ ಭಾರಿ ಅಂತರದ ಗೆಲುವು ದಾಖಲಿಸಿದರು.

ಪ್ರಭಾವಿ ಖಾತೆಗಳು: ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಸಂಪುಟದಲ್ಲಿ ನಗರಾಭಿವೃದ್ಧಿ ಮತ್ತು ಸಹಕಾರ ಸಚಿವರಾಗಿ ಪ್ರಮುಖ ಜವಾಬ್ದಾರಿ ನಿಭಾಯಿಸಿದರು.

ರಣತಂತ್ರ ಮತ್ತು ಹೈಕಮಾಂಡ್ ಮೆಚ್ಚಿದ ಚಾಣಕ್ಯತನ
ಸಂಪುಟದಿಂದ ಹೊರಕ್ಕೆ (2004): ಶಾಸಕನಾಗಿ ಚುನಾಯಿತರಾದರೂ ಕಾಂಗ್ರೆಸ್‌ಗೆ ಅಲ್ಪಮತ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಆದರೆ ರಾಜಕೀಯ ಕಾರಣಗಳಿಗಾಗಿ ಸಚಿವ ಸಂಪುಟದಿಂದ ಹೊರಗುಳಿಯಬೇಕಾಯಿತು.

ದೇವೇಗೌಡರಿಗೆ ಶಾಕ್ (2004ಲೋಕಸಭೆ): ಲೋಕಸಭಾ ಚುನಾವಣೆಯಲ್ಲಿ ಎಚ್‌.ಡಿ. ದೇವೇಗೌಡರ ವಿರುದ್ಧ ಪತ್ರಕರ್ತೆ ತೇಜಸ್ವಿನಿಗೌಡ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಸಿ, ಗೆಲ್ಲಿಸುವ ಮೂಲಕ ತಮ್ಮ ರಾಜಕೀಯ ರಣತಂತ್ರ ಏನೆಂಬುದನ್ನು ಹೈಕಮಾಂಡ್‌ಗೆ ಸಾಬೀತುಪಡಿಸಿದರು.

ಕನಕಪುರದ ನಾಯಕ (2008-2012): ಕನಕಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಆದರೆ, ಆರಂಭದಲ್ಲಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ. ಬಳಿಕ ೨೦೧೪ರಲ್ಲಿ ಇಂಧನ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.

ಐಟಿ-ಇಡಿ ದಾಳಿ ಮತ್ತು ತಿಹಾರ್ ಜೈಲು ವಾಸ
ಸರಣಿ ದಾಳಿಗಳು: ಇಂಧನ ಸಚಿವರಾಗಿದ್ದ ಅವಧಿಯಲ್ಲಿ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳಿಂದ ಶಿವಕುಮಾರ್‌ ಮತ್ತು ಅವರ ಆಪ್ತರ ಮನೆಗಳ ಮೇಲೆ ಭಾರಿ ದಾಳಿ ನಡೆಯಿತು. ಐಟಿ ದಾಳಿಯ ಆಧಾರದಲ್ಲಿ ಜಾರಿ ನಿರ್ದೇಶನಾಲಯದಿಂದಲೂ (ED) ಪ್ರಕರಣ ದಾಖಲಾಗಿ ವಿಚಾರಣೆ ಎದುರಿಸಿದರು.

ಮೈತ್ರಿ ಸರ್ಕಾರದಲ್ಲಿ ಸಚಿವ (೨೦೧೮): ಜೆಡಿಎಸ್‌–ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಬೃಹತ್‌ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದರು.

ಬಂಧನ ಮತ್ತು ಸೆರೆವಾಸ (2019): ಸೆಪ್ಟೆಂಬರ್ ೩ರಂದು ಹಣ ಅಕ್ರಮ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾದರು. ದೆಹಲಿಯ ಪ್ರಸಿದ್ಧ ತಿಹಾರ್‌ ಜೈಲಿನಲ್ಲಿ 50 ದಿನಗಳ ಕಾಲ ಸೆರೆವಾಸ ಅನುಭವಿಸಿ, ಅಕ್ಟೋಬರ್ ೨೩ರಂದು ಜಾಮೀನಿನ ಮೇಲೆ ಬಿಡುಗಡೆಯಾದರು.

ಕೆಪಿಸಿಸಿ ಸಾರಥ್ಯ ಮತ್ತು ಉಪಮುಖ್ಯಮಂತ್ರಿ ಪಟ್ಟ
ಪಕ್ಷ ಸಂಘಟನೆ: ಜೈಲಿನಿಂದ ಬಂದ ಬಳಿಕ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್, ಇಡೀ ರಾಜ್ಯಾದ್ಯಂತ ಮಿಂಚಿನ ಸಂಚಾರ ನಡೆಸಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದರು.

ಕಾಂಗ್ರೆಸ್ ದಿಗ್ವಿಜಯ (2023): ಇವರ ಚುನಾವಣಾ ತಯಾರಿ ಮತ್ತು ಕಠಿಣ ಪರಿಶ್ರಮದ ಫಲವಾಗಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತು.

ಡಿಸಿಎಂ ಪಟ್ಟ: ಶಾಸಕರ ಗೆಲುವಿನ ಬಳಿಕ ಮುಖ್ಯಮಂತ್ರಿ ಹುದ್ದೆಗಾಗಿ ತೀವ್ರ ಪಟ್ಟು ಹಿಡಿದರಾದರೂ, ಹೈಕಮಾಂಡ್ ಸೂಚನೆಗೆ ತಲೆಬಾಗಿ ಸದ್ಯ ಉಪ ಮುಖ್ಯಮಂತ್ರಿ ಹುದ್ದೆ ಹಾಗೂ ಪ್ರಭಾವಿ ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್