LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫಿಟ್ ಆದರೂ ಕೊಹ್ಲಿ ತಂಡಕ್ಕೆ ಬೇಡ ಎಂದ ಆಯ್ಕೆಗಾರರು; ಸಚಿನ್ ದಾಖಲೆ ಉಳಿಸಲು ಎಲ್ಲರೂ ಬೇಕಂತಲೇ ನಡೆಸುತ್ತಿರುವ ಷಡ್ಯಂತ್ರ ಎಂದು ಕಿಡಿಕಾರಿದ ಫ್ಯಾನ್ಸ್!

ಇತ್ತೀಚೆಗಷ್ಟೆ ಯಶಸ್ವಿಯಾಗಿ ಮುಕ್ತಾಯವಾದ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಬಳಿಕ ಭಾರತದ ಕ್ರಿಕೆಟಿಗರು ಇದೀಗ ಅಂತಾರಾಷ್ಟ್ರೀಯ ಪಂದ್ಯಗಳತ್ತ ಮುಖ ಮಾಡಿದ್ದು, ಮೊದಲಿಗೆ ಅಫ್ಘಾನಿಸ್ತಾನದ ವಿರುದ್ಧ ಒಂದು ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.

ಜೂನ್ 6ರಂದು ಮೊದಲ ಟೆಸ್ಟ್ ಪಂದ್ಯ ಆರಂಭಗೊಂಡರೆ, ಜೂನ್ 13, 17 ಹಾಗೂ 20ರಂದು ಏಕದಿನ ಪಂದ್ಯಗಳು ಜರುಗಲಿವೆ. ಇನ್ನು ಈ ಪಂದ್ಯಗಳಿಗೆ ಈಗಾಗಲೇ ಭಾರತ ತಂಡ ಪ್ರಕಟವಾಗಿದ್ದು, ಎಲ್ಲರೂ ವಿರಾಟ್ ಕೊಹ್ಲಿಯನ್ನು ಹಲವು ದಿನಗಳ ಬಳಿಕ ಭಾರತದ ಜೆರ್ಸಿಯಲ್ಲಿ ನೋಡಲು ಕಾತರರಾಗಿದ್ದರು.

ಆದರೆ ಪ್ರಕಟವಾದ ತಂಡ ಕಂಡು ಕೊಹ್ಲಿ ಅಭಿಮಾನಿಗಳು ಬೇಸರಕ್ಕೊಳಗಾಗಿದ್ದು, ಕೊಹ್ಲಿಗೆ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಇತ್ತೀಚೆಗಷ್ಟೆ ಚೆನ್ನಾಗಿ ಐಪಿಎಲ್ ಆಡಿ ಮುಗಿಸಿದ ಕೊಹ್ಲಿಗೆ ತಂಡದಲ್ಲಿ ಅವಕಾಶ ಏಕೆ ನೀಡಿಲ್ಲ ಎಂದು ನಿರಾಸೆಗೊಳಗಾಗಿದ್ದಾರೆ. ಇನ್ನು ಇದಕ್ಕೆ ಕಾರಣ ಬಹಿರಂಗವಾಗಿದ್ದು, ಕೊಹ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ಗಾಯಕ್ಕೊಳಗಾಗಿದ್ದಾರೆ ಎನ್ನಲಾಗಿದೆ.

ಈ ಗಾಯದ ಸಮಸ್ಯೆಯಿಂದ ಕೊಹ್ಲಿ ಎರಡು ವಾರ ವಿಶ್ರಾಂತಿ ಪಡೆದುಕೊಳ್ಳಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಹೀಗೆ ಎರಡು ವಾರ ವಿಶ್ರಾಂತಿ ಅಗತ್ಯವಿರುವ ಕೊಹ್ಲಿ 20ರಂದು ನಡೆಯಲಿರುವ ಕೊನೆಯ ಏಕದಿನ ಪಂದ್ಯದಷ್ಟರಲ್ಲಿ ಗಾಯದಿಂದ ಸುಧಾರಿಸಿಕೊಳ್ಳಲಿದ್ದಾರೆ ಎನ್ನಲಾದರೂ ಬಿಸಿಸಿಐ ಆಯ್ಕೆಗಾರರು ಆ ಪಂದ್ಯಕ್ಕೂ ಸಹ ಕೊಹ್ಲಿ ಬೇಡ, ಚೆನ್ನಾಗಿ ವಿಶ್ರಾಂತಿ ಪಡೆದು ಸುಧಾರಿಸಿಕೊಳ್ಳಲಿ ಎಂದು ಸಲಹೆ ನೀಡಿದೆ ಎಂದು ಎಕ್ಸ್‌ಪ್ರೆಸ್ ಸ್ಪೋರ್ಟ್ಸ್ ವರದಿ ಮಾಡಿದೆ.

ಈ ವರದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಬಿಸಿಸಿಐ ಬೇಕಂತಲೇ ಕೊಹ್ಲಿಯನ್ನು ಕಡೆಗಣಿಸುತ್ತಿದೆ ಎಂದಿದ್ದಾರೆ. ಇನ್ನೂ ಕೆಲ ಕೊಹ್ಲಿ ಅಭಿಮಾನಿಗಳು ಈ ವಿಶ್ರಾಂತಿ ಎಲ್ಲ ನಾಟಕ, ಕೊಹ್ಲಿ ಸಚಿನ್‌ರ 100 ಶತಕ ದಾಖಲೆಯನ್ನು ಮುರಿದುಬಿಡುತ್ತಾರೆ ಎಂಬ ಕಾರಣಕ್ಕೆ ವಿಶ್ರಾಂತಿ ನೀಡುವ ನಾಟಕ ಮಾಡುತ್ತಿದ್ದಾರೆ ಎಂದು ಕಾಮೆಂಟ್ ಹಾಕಿದ್ದಾರೆ.

ಇನ್ನೂ ಕೆಲವರು ವಯಸ್ಸಾದ ಕೊಹ್ಲಿಯ ಅವಶ್ಯಕತೆ ತಂಡಕ್ಕಿಲ್ಲ, ಹೀಗಾಗಿ ಬೇಕಂತಲೇ ಫಿಟ್ ಆದರೂ ಕೊನೆಯ ಪಂದ್ಯಕ್ಕೂ ಸಹ ಕೊಹ್ಲಿಯನ್ನು ಆಯ್ಕೆಗಾರರು ಬೇಡ ಎನ್ನುತ್ತಿದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ