LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿರುಗಾಳಿ ಸಹಿತ ಭಾರಿ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಗಳು ಉಪಕರಣಗಳು ಡಿಕ್ಕಿ: ಮೂರು ಏರ್ ಇಂಡಿಯಾ ವಿಮಾನಗಳು ಜಖಂ

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಕಾಏಕಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಮೂರು ಏರ್ ಇಂಡಿಯಾ ವಿಮಾನಗಳು ಹಾನಿಯಾಗಿವೆ.

ಬಿರುಗಾಳಿ ಹೊಡೆತಕ್ಕೆ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿಯಾದ ಪರಿಣಾಮ ಏರ್ ಇಂಡಿಯಾ ಸಂಸ್ಥೆಯ ಮೂರು ವಿಮಾನಗಳು ಜಖಂಗೊಂಡಿವೆ ಎಂದು ತಿಳಿದುಬಂದಿದೆ.

ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿ ಹೊಡೆದಿವೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಳಿಕ ಜಖಂಗೊಂಡಿರುವ ಮೂರೂ J320 (ವಿಮಾನ ಸಂಖ್ಯೆ) ಮಾದರಿಯ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸದ್ಯ ವಿಮಾನಗಳ ರಿಪೇರಿ ಕೆಲಸ ನಡೆಯುತ್ತಿದೆ. ಇವುಗಳಲ್ಲಿ ಎರಡು ವಿಮಾನಗಳು ಕೆಲವೇ ದಿನಗಳಲ್ಲಿ ಪುನಃ ಹಾರಾಟಕ್ಕೆ ಸಿದ್ಧವಾಗಲಿವೆ. ಆದರೆ ಮತ್ತೊಂದು ವಿಮಾನ ತೀವ್ರ ಹಾನಿಗೊಳಗಾಗಿರುವುದರಿಂದ ಅದರ ರಿಪೇರಿಗೆ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಏರ್ ಟ್ರಾಫಿಕ್ ಕಂಟ್ರೋಲ್‌ನಿಂದ ಹವಾಮಾನ ವೈಪರೀತ್ಯದ ಬಗ್ಗೆ ಯಾವುದೇ ಮುನ್ಸೂಚನೆ ಸಿಗದೇ ಇದ್ದುದರಿಂದ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಆದ್ದರಿಂದ ಘಟನೆ ಸಂಭವಿಸಿದೆ ಎಂದು ವಿಮಾನ ನಿಲ್ದಾಣದ ಆಡಳಿತ ಮಂಡಳಿ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ