LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿರುಗಾಳಿ ಸಹಿತ ಭಾರಿ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಗಳು ಉಪಕರಣಗಳು ಡಿಕ್ಕಿ: ಮೂರು ಏರ್ ಇಂಡಿಯಾ ವಿಮಾನಗಳು ಜಖಂ

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಕಾಏಕಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಮೂರು ಏರ್ ಇಂಡಿಯಾ ವಿಮಾನಗಳು ಹಾನಿಯಾಗಿವೆ.

ಬಿರುಗಾಳಿ ಹೊಡೆತಕ್ಕೆ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿಯಾದ ಪರಿಣಾಮ ಏರ್ ಇಂಡಿಯಾ ಸಂಸ್ಥೆಯ ಮೂರು ವಿಮಾನಗಳು ಜಖಂಗೊಂಡಿವೆ ಎಂದು ತಿಳಿದುಬಂದಿದೆ.

ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿ ಹೊಡೆದಿವೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಳಿಕ ಜಖಂಗೊಂಡಿರುವ ಮೂರೂ J320 (ವಿಮಾನ ಸಂಖ್ಯೆ) ಮಾದರಿಯ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸದ್ಯ ವಿಮಾನಗಳ ರಿಪೇರಿ ಕೆಲಸ ನಡೆಯುತ್ತಿದೆ. ಇವುಗಳಲ್ಲಿ ಎರಡು ವಿಮಾನಗಳು ಕೆಲವೇ ದಿನಗಳಲ್ಲಿ ಪುನಃ ಹಾರಾಟಕ್ಕೆ ಸಿದ್ಧವಾಗಲಿವೆ. ಆದರೆ ಮತ್ತೊಂದು ವಿಮಾನ ತೀವ್ರ ಹಾನಿಗೊಳಗಾಗಿರುವುದರಿಂದ ಅದರ ರಿಪೇರಿಗೆ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಏರ್ ಟ್ರಾಫಿಕ್ ಕಂಟ್ರೋಲ್‌ನಿಂದ ಹವಾಮಾನ ವೈಪರೀತ್ಯದ ಬಗ್ಗೆ ಯಾವುದೇ ಮುನ್ಸೂಚನೆ ಸಿಗದೇ ಇದ್ದುದರಿಂದ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಆದ್ದರಿಂದ ಘಟನೆ ಸಂಭವಿಸಿದೆ ಎಂದು ವಿಮಾನ ನಿಲ್ದಾಣದ ಆಡಳಿತ ಮಂಡಳಿ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BIG NEWS: ಇನ್ನು ಎಲ್ಲ ಬಾರ್, ಪಬ್‌, ಕ್ಲಬ್‌, ರೆಸ್ಟೋರೆಂಟ್ ಪ್ರವೇಶಕ್ಕೆ ವಯಸ್ಸಿನ ಪುರಾವೆ ಕಡ್ಡಾಯ: ಅಪ್ರಾಪ್ತರಿಗೆ ಮದ್ಯ ಮಾರಾಟ ನಿಷೇಧBREAKING: ಉಜ್ವಲ ಯೋಜನೆ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್: ಸಬ್ಸಿಡಿ LPG ಸಿಲಿಂಡರ್‌ ವರ್ಷಕ್ಕೆ 9 ರಿಂದ 4ಕ್ಕೆ ಇಳಿಕೆವೈಜಾಗ್ ಉಕ್ಕಿನ ಸ್ಥಾವರ ಸ್ಫೋಟ: ಕಾದ ಕಬ್ಬಿಣ ಸೋರಿಕೆಯಾಗಿ 8 ಕಾರ್ಮಿಕರು ಸಾವು: ಪ್ರಧಾನಿ ಮೋದಿ ಪರಿಹಾರ ಘೋಷಣೆಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಬರಲಿದೆ ಸ್ಮಾರ್ಟ್ ಕಾರ್ಡ್BREAKING: ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು ಕಿವಿಯ ಬಳಿ ಮೊಬೈನ್ ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರುಮುಡಾ ಹೂಡಿಕೆ ವಿವಾದ :ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ ಅರ್ಜಿ ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿದ ಪತಿಗೆ ಜೈಲು ಶಿಕ್ಷೆ, ದಂಡಏಯ್ ಯಾವ್ ಡಿ ಬಾಸೂ ಇಲ್ಲ ಸುಮ್ನೆ ಇರಿ, ಪೊಲೀಸರಿಂದ ಲಾಠಿ ಏಟೇ; ದರ್ಶನ್ ರಿಲೀಸ್ ಮಾಡಿಸಿ ಎಂದ ಫ್ಯಾನ್ಸ್‌ಗೆ ಸಿಎಂ ಡಿಕೆಯಿಂದ ಭಾರೀ ಅವಮಾನ!