LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಬರಲಿದೆ ಸ್ಮಾರ್ಟ್ ಕಾರ್ಡ್

ಬೆಂಗಳೂರು: ರಾಜ್ಯದ ನೂತನ ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅವರು ವಿಧಾನಸೌಧದ ಕೊಠಡಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಸಾರಿಗೆ ಇಲಾಖೆಯ ಮಹತ್ವದ ಯೋಜನೆಗಳ ಬಗ್ಗೆ ಘೋಷಣೆ ಮಾಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಗೆ ಭೇಟಿ ನೀಡಿ ಕೆಎಸ್ಸಾರ್ಟಿಸಿ, ಬಿಎಂಟಿಸಿ, ಕೆಕೆಆರ್ ಟಿಸಿ ಮತ್ತು ವಾಯವ್ಯ ಸಾರಿಗೆ ನಿಗಮಗಳ ಮುಖ್ಯಸ್ಥರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಲಾಖೆಗಳ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ ಜನತೆಯ ಬದುಕು ಹಸನಾಗುವಂತೆ ಮಾಡಲಾಗಿದೆ. ಶಕ್ತಿ ಯೋಜನೆಯನ್ನು ಕೋಟ್ಯಂತರ ಮಹಿಳೆಯರು ಸದುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಯೋಜನೆ ಜಾರಿಯಾದ ಬಳಿಕ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.40 ರಷ್ಟು ಹೆಚ್ಚಳವಾಗಿದೆ ಎಂದರು.

ಶಕ್ತಿ ಯೋಜನೆಗೆ ಬರಲಿದೆ ಸ್ಮಾರ್ಟ್ ಕಾರ್ಡ್:
ಈ ಶಕ್ತಿ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ಉದ್ದೇಶದಿಂದ ರಾಜ್ಯದ ಮಹಿಳೆಯರಿಗೆ ಸಾರಿಗೆ ನಿಗಮಗಳ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಸ್ಮಾರ್ಟ್ ಕಾರ್ಡ್ ಗಳನ್ನು ವಿತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದ ಮೂರು ಕೋಟಿಗೂ ಅಧಿಕ ಜನರಿಗೆ ಈ ಸ್ಮಾರ್ಟ್ ಕಾರ್ಡನ್ನು ವಿತರಿಸುವ ನಿರೀಕ್ಷೆಯಿದೆ. ಮಹಿಳೆಯರಿಗೆ ಉಚಿತವಾಗಿ ಸ್ಮಾರ್ಟ್ ಕಾರ್ಡ್ ಸಿಗಲಿದ್ದು, ಪುರುಷರು ಮೆಟ್ರೋ ಕಾರ್ಡ್ ರೀತಿಯಲ್ಲಿ ಹಣ ಪಾವತಿಸಿ ಸ್ಮಾರ್ಟ್ ಕಾರ್ಡನ್ನು ಪಡೆದುಕೊಳ್ಳಬಹುದಾಗಿದೆ. ಈ ಕಾರ್ಡನ್ನು ಅದರಲ್ಲಿ ಹಣ ಖಾಲಿಯಾದ ನಂತರ ರೀಚಾರ್ಜ್ ಮಾಡಬೇಕಾಗುತ್ತದೆ.

ಸುಮಾರು 3 ಕೋಟಿ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸುವ ಅಗತ್ಯವಿರುವುದರಿಂದ ಸ್ಮಾರ್ಟ್ ಕಾರ್ಡ್ ಸಿದ್ಧಪಡಿಸಲು ಜಾಗತಿಕ ಟೆಂಡರ್ ಕರೆದು ಸದ್ಯದಲ್ಲಿಯೇ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಪೈಲಟ್ ಯೋಜನೆಯಡಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

1000 ಬಸ್ ಖರೀದಿ:
ರಾಜ್ಯ ಸರ್ಕಾರದ ಅನುದಾನದಡಿಯಲ್ಲಿ 1000 ಸಾವಿರ ಬಸ್ ಗಳನ್ನು ಖರೀದಿಸಲಾಗುತ್ತದೆ. ಇದೇ ವೇಳೆ, ಕೇಂದ್ರ ಸರ್ಕಾರದ ಅನುದಾನದಲ್ಲಿ 4 ಸಾವಿರ ಎಲೆಕ್ಟ್ರಿಕ್ ಬಸ್ ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಹಂತಹಂತವಾಗಿ ಬಸ್ ಗಳನ್ನು ಖರೀದಿಸಿ ನಾಲ್ಕೂ ನಿಗಮಗಳಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ಬೈರತಿ ಸುರೇಶ್ ಹೇಳಿದರು.

ಮಹಿಳೆಯರ ಸುರಕ್ಷತೆಗೆ ಆದ್ಯತೆ:
ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಸುರಕ್ಷತೆಗೆ ಆದ್ಯತೆಯನ್ನು ನೀಡಲಾಗುತ್ತಿದೆ. ಖಾಸಗಿ ಪ್ರಯಾಣಿಕರ ವಾಹನಗಳು ಅಂದರೆ, ವಾಣಿಜ್ಯ ಕಾರುಗಳು, ಟ್ಯಾಕ್ಸಿಗಳು ಸೇರಿದಂತೆ ಇನ್ನಿತರೆ ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಅಳವಡಿಕೆಯನ್ನು ಕ್ಷಿಪ್ರಗತಿಯಲ್ಲಿ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದುವರೆಗೆ 1 ಲಕ್ಷಕ್ಕೂ ಅಧಿಕ ವಾಹನಗಳಿಗೆ ಈ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಇನ್ನುಳಿದ 4-5 ಲಕ್ಷ ವಾಹನಗಳಿಗೆ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಅಳವಡಿಸಬೇಕೆಂದು ಅಧಿಕಾರಿಗಳಿಗೆ ಆದೇಶ ನೀಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ