LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಅನ್ನಭಾಗ್ಯ ಯೋಜನೆಯಡಿ ಮೇ ಮತ್ತು ಜೂನ್-2026ರ ಎರಡು ಮಾಹೆಗಳ ಆಹಾರಧಾನ್ಯವನ್ನು ಜೂನ್-2026ರ ಮಾಹೆಯಲ್ಲಿ ವಿತರಿಸಲು ಸರ್ಕಾರ ನಿರ್ದೇಶನ ನೀಡಿದೆ.

ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರಧಾನ್ಯವನ್ನು ಬಯೋಮೆಟ್ರಿಕ್(ಬೆರಳುಚ್ಚು) ನೀಡಿ ಪಡೆದುಕೊಳ್ಳಬಹುದು.

ಮೇ-2026 ಮತ್ತು ಜೂನ್-2026ರ ಎರಡು ಮಾಹೆಗಳ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ 04 ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ, 05 ಸದಸ್ಯರಿಗೆ 30 ಕೆ.ಜಿ, 06 ಸದಸ್ಯರಿಗೆ 50 ಕೆ.ಜಿ, 07 ಸದಸ್ಯರಿಗೆ 70 ಕೆ.ಜಿ., 08 ಸದಸ್ಯರಿಗೆ 90 ಕೆ.ಜಿ , 09 ಸದಸ್ಯರಿಗೆ 110 ಕೆ.ಜಿ, 10 ಸದಸ್ಯರಿಗೆ 130 ಕೆ.ಜಿ ಅಕ್ಕಿ ಉಚಿತ ಪಡೆದುಕೊಳ್ಳಬೇಕು. 10 ಕ್ಕಿಂತ ಮೇಲ್ಪಟ್ಟ ಪಡಿತರ ಚೀಟಿಗೆ ಇದೇ ಅನುಪಾತದಂತೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ.

01 ರಿಂದ 03 ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳಿಗೆ ಪ್ರತಿ ಸದಸ್ಯರಿಗೆ 10 ಕೆ.ಜಿ.ಯಂತೆ ಈಗಾಗಲೇ ಎನ್.ಎಫ್.ಎಸ್.ಎ ಯೋಜನೆಯಡಿ ಮೇ-2026ರಲ್ಲಿ 35 ಕೆ.ಜಿ ಮತ್ತು ಜೂನ್-2026ರಲ್ಲಿ 35 ಕೆ.ಜಿ ಸೇರಿ ಒಟ್ಟು 70 ಕೆ.ಜಿ ಅಕ್ಕಿ ಹಾಗೂ ರಾಗಿ  ಆಹಾರಧಾನ್ಯಗಳನ್ನು ಮೇ-2026ರ ಮಾಹೆಯಲ್ಲೇ ವಿತರಣೆ ಮಾಡಲಾಗಿರುತ್ತದೆ. ಆದ್ದರಿಂದ ಇವರಿಗೆ ಜೂನ್-2026ರ ಮಾಹೆಯಲ್ಲಿ ಹಂಚಿಕೆ ಇರುವುದಿಲ್ಲ.

ಕೇಂದ್ರ ಮತ್ತು ರಾಜ್ಯ ಆದ್ಯತಾ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ದೊರೆಯಲಿದೆ. ಯಾವುದೇ ನ್ಯಾಯಬೆಲೆ ಅಂಗಡಿ ಕಾರ್ಯದರ್ಶಿ ಅಥವಾ ಮಾಲೀಕರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದಲ್ಲಿ ಅಥವಾ ಹಣ ಕೇಳಿದಲ್ಲಿ ರಾಜ್ಯ ಸಹಾಯವಾಣಿ ಸಂಖ್ಯೆ 1967 ಹಾಗೂ ಜಂಟಿ ನಿರ್ದೇಶಕರ ಕಚೇರಿ ಅಥವಾ ತಹಶೀಲ್ದಾರ್ ಕಚೇರಿಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ ಎಂದು ಆಹಾರ ಜಂಟಿ ನಿರ್ದೇಶಕ ಸಿದ್ರಾಮ ಮಾರಿಹಾಳ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ