LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಅನ್ನಭಾಗ್ಯ ಯೋಜನೆಯಡಿ ಮೇ ಮತ್ತು ಜೂನ್-2026ರ ಎರಡು ಮಾಹೆಗಳ ಆಹಾರಧಾನ್ಯವನ್ನು ಜೂನ್-2026ರ ಮಾಹೆಯಲ್ಲಿ ವಿತರಿಸಲು ಸರ್ಕಾರ ನಿರ್ದೇಶನ ನೀಡಿದೆ.

ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರಧಾನ್ಯವನ್ನು ಬಯೋಮೆಟ್ರಿಕ್(ಬೆರಳುಚ್ಚು) ನೀಡಿ ಪಡೆದುಕೊಳ್ಳಬಹುದು.

ಮೇ-2026 ಮತ್ತು ಜೂನ್-2026ರ ಎರಡು ಮಾಹೆಗಳ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ 04 ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ, 05 ಸದಸ್ಯರಿಗೆ 30 ಕೆ.ಜಿ, 06 ಸದಸ್ಯರಿಗೆ 50 ಕೆ.ಜಿ, 07 ಸದಸ್ಯರಿಗೆ 70 ಕೆ.ಜಿ., 08 ಸದಸ್ಯರಿಗೆ 90 ಕೆ.ಜಿ , 09 ಸದಸ್ಯರಿಗೆ 110 ಕೆ.ಜಿ, 10 ಸದಸ್ಯರಿಗೆ 130 ಕೆ.ಜಿ ಅಕ್ಕಿ ಉಚಿತ ಪಡೆದುಕೊಳ್ಳಬೇಕು. 10 ಕ್ಕಿಂತ ಮೇಲ್ಪಟ್ಟ ಪಡಿತರ ಚೀಟಿಗೆ ಇದೇ ಅನುಪಾತದಂತೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ.

01 ರಿಂದ 03 ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳಿಗೆ ಪ್ರತಿ ಸದಸ್ಯರಿಗೆ 10 ಕೆ.ಜಿ.ಯಂತೆ ಈಗಾಗಲೇ ಎನ್.ಎಫ್.ಎಸ್.ಎ ಯೋಜನೆಯಡಿ ಮೇ-2026ರಲ್ಲಿ 35 ಕೆ.ಜಿ ಮತ್ತು ಜೂನ್-2026ರಲ್ಲಿ 35 ಕೆ.ಜಿ ಸೇರಿ ಒಟ್ಟು 70 ಕೆ.ಜಿ ಅಕ್ಕಿ ಹಾಗೂ ರಾಗಿ  ಆಹಾರಧಾನ್ಯಗಳನ್ನು ಮೇ-2026ರ ಮಾಹೆಯಲ್ಲೇ ವಿತರಣೆ ಮಾಡಲಾಗಿರುತ್ತದೆ. ಆದ್ದರಿಂದ ಇವರಿಗೆ ಜೂನ್-2026ರ ಮಾಹೆಯಲ್ಲಿ ಹಂಚಿಕೆ ಇರುವುದಿಲ್ಲ.

ಕೇಂದ್ರ ಮತ್ತು ರಾಜ್ಯ ಆದ್ಯತಾ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ದೊರೆಯಲಿದೆ. ಯಾವುದೇ ನ್ಯಾಯಬೆಲೆ ಅಂಗಡಿ ಕಾರ್ಯದರ್ಶಿ ಅಥವಾ ಮಾಲೀಕರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದಲ್ಲಿ ಅಥವಾ ಹಣ ಕೇಳಿದಲ್ಲಿ ರಾಜ್ಯ ಸಹಾಯವಾಣಿ ಸಂಖ್ಯೆ 1967 ಹಾಗೂ ಜಂಟಿ ನಿರ್ದೇಶಕರ ಕಚೇರಿ ಅಥವಾ ತಹಶೀಲ್ದಾರ್ ಕಚೇರಿಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ ಎಂದು ಆಹಾರ ಜಂಟಿ ನಿರ್ದೇಶಕ ಸಿದ್ರಾಮ ಮಾರಿಹಾಳ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BIG NEWS: ಇನ್ನು ಎಲ್ಲ ಬಾರ್, ಪಬ್‌, ಕ್ಲಬ್‌, ರೆಸ್ಟೋರೆಂಟ್ ಪ್ರವೇಶಕ್ಕೆ ವಯಸ್ಸಿನ ಪುರಾವೆ ಕಡ್ಡಾಯ: ಅಪ್ರಾಪ್ತರಿಗೆ ಮದ್ಯ ಮಾರಾಟ ನಿಷೇಧBREAKING: ಉಜ್ವಲ ಯೋಜನೆ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್: ಸಬ್ಸಿಡಿ LPG ಸಿಲಿಂಡರ್‌ ವರ್ಷಕ್ಕೆ 9 ರಿಂದ 4ಕ್ಕೆ ಇಳಿಕೆವೈಜಾಗ್ ಉಕ್ಕಿನ ಸ್ಥಾವರ ಸ್ಫೋಟ: ಕಾದ ಕಬ್ಬಿಣ ಸೋರಿಕೆಯಾಗಿ 8 ಕಾರ್ಮಿಕರು ಸಾವು: ಪ್ರಧಾನಿ ಮೋದಿ ಪರಿಹಾರ ಘೋಷಣೆಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಬರಲಿದೆ ಸ್ಮಾರ್ಟ್ ಕಾರ್ಡ್BREAKING: ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು ಕಿವಿಯ ಬಳಿ ಮೊಬೈನ್ ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರುಮುಡಾ ಹೂಡಿಕೆ ವಿವಾದ :ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ ಅರ್ಜಿ ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿದ ಪತಿಗೆ ಜೈಲು ಶಿಕ್ಷೆ, ದಂಡಏಯ್ ಯಾವ್ ಡಿ ಬಾಸೂ ಇಲ್ಲ ಸುಮ್ನೆ ಇರಿ, ಪೊಲೀಸರಿಂದ ಲಾಠಿ ಏಟೇ; ದರ್ಶನ್ ರಿಲೀಸ್ ಮಾಡಿಸಿ ಎಂದ ಫ್ಯಾನ್ಸ್‌ಗೆ ಸಿಎಂ ಡಿಕೆಯಿಂದ ಭಾರೀ ಅವಮಾನ!