LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮ್ಮಂತೆಯೇ ಸೀರೆಯುಟ್ಟು ಭರ್ಜರಿ ಲೂಟಿಗೆ ಇಳಿದಿದ್ದ ಪುರುಷರ ಅಸಲಿ ಮುಖವಾಡ ಕಳಚಿದ ಅಸಲಿ ಮಂಗಳಮುಖಿಯರು: ವಿಡಿಯೋ ವೈರಲ್

ಛಿಂದ್ವಾರ : ಮದುವೆ ಹಾಗೂ ಇತರೆ ಶುಭ ಸಮಾರಂಭಗಳಲ್ಲಿ ಮಂಗಳಮುಖಿಯರು (ತೃತೀಯ ಲಿಂಗಿಗಳು) ಬಂದು ನವಜೋಡಿಯನ್ನು ಹರಸಿ, ತಮಗಿಷ್ಟ ಬಂದಷ್ಟು ಹಣ ಅಥವಾ ಉಡುಗೊರೆ ಪಡೆದು ಹೋಗುವುದು ನಮ್ಮಲ್ಲಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ಒಂದು ಸಾಂಪ್ರದಾಯಿಕ ನಂಬಿಕೆ. ಆದರೆ, ಇಲ್ಲೊಂದು ಕಿಲಾಡಿ ಯುವಕರ ಗ್ಯಾಂಗ್, ಇದೇ ಸಾಂಪ್ರದಾಯಿಕ ಭಾವನೆಗಳನ್ನು ಬಂಡವಾಳ ಮಾಡಿಕೊಂಡು ಲೂಟಿಗೆ ಇಳಿದಿತ್ತು ಮಂಗಳಮುಖಿಯರಂತೆ ವೇಷ ಧರಿಸಿ ಮದುವೆ ಮನೆಯಲ್ಲಿ ಭಾರಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಈ ನಕಲಿ ಗ್ಯಾಂಗ್‌ನ ಮುಖವಾಡ ಕಳಚಿ, ಮಹಿಳೆಯರು ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿರುವ ವಿಲಕ್ಷಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಛಿಂದ್ವಾರಾ ಜಿಲ್ಲೆಯ ಪರಸಿಯಾ ಪ್ರದೇಶದ ದರ್ಬಾಯ್ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಜಾಗರೂಕ ನಾಗರಿಕರು ಈ ವಂಚಕ ಜಾಲವನ್ನು ಅತ್ಯಂತ ಜಾಣಾಕ್ಷತನದಿಂದ ಪತ್ತೆಹಚ್ಚಿದ್ದು, ಇದರ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ಅನುಮಾನ ಮೂಡಿಸಿದ ಅತಿಯಾದ ನೇಗ್ ಬೇಡಿಕೆ

ದರ್ಬಾಯ್ ಗ್ರಾಮದಲ್ಲಿ ವೈಭವದ ಮದುವೆ ಸಮಾರಂಭ ನಡೆಯುತ್ತಿದ್ದಾಗ, ಮಂಗಳಮುಖಿಯರಂತೆ ಸೀರೆ ಉಟ್ಟು, ಮೇಕಪ್ ಮಾಡಿಕೊಂಡಿದ್ದ ಪುರುಷರ ಗುಂಪೊಂದು ಮಂಟಪಕ್ಕೆ ಎಂಟ್ರಿ ಕೊಟ್ಟಿದೆ. ಅಲ್ಲಿಗೆ ಬಂದವರು ವಧು-ವರರ ಕುಟುಂಬಸ್ಥರ ಬಳಿ ಸಾಂಪ್ರದಾಯಿಕ ಉಡುಗೊರೆ ಹಾಗೂ ನೇಗ್ (ಶುಭ ಶಕುನದ ಹಣ) ರೂಪದಲ್ಲಿ ಭಾರಿ ದೊಡ್ಡ ಮೊತ್ತದ ಹಣವನ್ನು ನೀಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ, ಇವರ ಧ್ವನಿ, ಅಸಹಜ ವರ್ತನೆ ಮತ್ತು ಅತಿಯಾದ ಒತ್ತಾಯವನ್ನು ಕಂಡು ಅಲ್ಲಿದ್ದ ಗ್ರಾಮಸ್ಥರಿಗೆ ಸಣ್ಣದೊಂದು ಅನುಮಾನ ಮೂಡಿದೆ.

ಅಸಲಿ ಮಂಗಳಮುಖಿಯರು ಎಂಟ್ರಿ ಕೊಡ್ತಿದ್ದಂತೆ ಗೇಮ್ ಓವರ್

ಗ್ರಾಮಸ್ಥರು ಸಮಯಪ್ರಜ್ಞೆ ಮೆರೆದು ತಕ್ಷಣವೇ ಸ್ಥಳೀಯ ಮಂಗಳಮುಖಿ ಸಮುದಾಯದ ಮುಖಂಡರಿಗೆ ಫೋನ್ ಮೂಲಕ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿದ ನೈಜ ತೃತೀಯ ಲಿಂಗಿ ಸಮುದಾಯದ ಸದಸ್ಯರು ಈ ಅಪರಿಚಿತ ವೇಷಧಾರಿಗಳ ಐಡೆಂಟಿಟಿಯನ್ನು ಪರಿಶೀಲಿಸಲು ಶುರು ಮಾಡಿದ್ದಾರೆ. ಅವರ ತನಿಖೆಯ ವೇಳೆ, ಮಂಗಳಮುಖಿಯರ ಸೀರೆಯುಟ್ಟಿದ್ದವರು ಬೇರೆ ಯಾರೂ ಅಲ್ಲ, ಹಣದ ಆಸೆಗೆ ವೇಷ ಧರಿಸಿದ್ದ ಅದೇ ಭಾಗದ ಯುವಕರು ಎಂಬ ಹಸಿಬಿಸಿ ಸತ್ಯ ಸಂಪೂರ್ಣವಾಗಿ ಜಗಜ್ಜಾಹೀರಾಗಿದೆ

ಧಾರ್ಮಿಕ ನಂಬಿಕೆ ಹಾಗೂ ಸಾಂಪ್ರದಾಯಿಕ ಭಾವನೆಗಳನ್ನು ದುರುಪಯೋಗಪಡಿಸಿಕೊಂಡು ಮೋಸ ಮಾಡಲು ಬಂದಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮದುವೆ ಮನೆಯಲ್ಲಿದ್ದ ಮಹಿಳೆಯರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಆ ವೇಷಧಾರಿ ಯುವಕರನ್ನು ಹಿಡಿದು ನಡುರಸ್ತೆಯಲ್ಲೇ ಅವರ ಸೀರೆ, ವಿಗ್‌ಗಳನ್ನು ಎಳೆದೊಗೆದಿದ್ದಾರೆ. ಅಷ್ಟಕ್ಕೇ ನಿಲ್ಲಿಸದ ಮಹಿಳೆಯರು, ಆ ನಕಲಿ ವ್ಯಕ್ತಿಗಳಿಗೆ ಕಪಾಳಮೋಕ್ಷ ಮಾಡಿ, ಚಪ್ಪಲಿಯಿಂದ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.ಅಲ್ಲಿದ್ದ ಸಾರ್ವಜನಿಕರು ಈ ಕಂಪ್ಲೀಟ್ ಹೈ-ವೋಲ್ಟೇಜ್ ಡ್ರಾಮಾವನ್ನು ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದು, ಸದ್ಯ ಈ ವಿಡಿಯೋ ಇಂಟರ್ನೆಟ್‌ನಲ್ಲಿ ತಲ್ಲಣ ಮೂಡಿಸಿದೆ.

ಇದೇ ಮೊದಲಲ್ಲ, ಇದು ಈ ಗ್ಯಾಂಗ್‌ನ ಹಳೇ ಚಾಳಿ

ಸ್ಥಳೀಯ ನಿವಾಸಿಗಳ ಪ್ರಕಾರ, ಈ ನಕಲಿ ಯುವಕರ ಗ್ಯಾಂಗ್ ಇಂತಹ ಕೆಲಸ ಮಾಡಿ ಸಿಕ್ಕಿಬೀಳುತ್ತಿರುವುದು ಇದೇ ಮೊದಲಲ್ಲವಂತೆ. ಈ ಹಿಂದೆಯೂ ಈ ಭಾಗದಲ್ಲಿ ನಡೆದ ಹಲವು ಮದುವೆಗಳು, ಮಗುವಿನ ಜನನ ಹಾಗೂ ಗೃಹಪ್ರವೇಶದಂತಹ ಆಚರಣೆಗಳಿಗೆ ಇದೇ ರೀತಿ ಮಂಗಳಮುಖಿಯರಂತೆ ನಟಿಸುತ್ತಾ ನುಗ್ಗಿ, ಅಮಾಯಕ ಕುಟುಂಬಗಳಿಂದ ಸಾವಿರಾರು ರೂಪಾಯಿಗಳನ್ನು ದೋಚುತ್ತಿದ್ದರು ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲವಾದರೂ, ಸಾರ್ವಜನಿಕರಲ್ಲಿ ಇಂತಹ ವಂಚಕರ ಬಗ್ಗೆ ಜಾಗೃತಿ ಮೂಡಿಸಲು ಈ ವಿಡಿಯೋ ನೆರವಾಗುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್