LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಲಪಾಡ್ ಬೆಂಬಿಡದ ಬಿಟ್ ಕಾಯಿನ್ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ನೀಡಿದ ಇಡಿ

ಬೆಂಗಳೂರು: ಬಿಟ್‍ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಯುವ ನಾಯಕ ಹಾಗೂ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಹಾಜರಾಗುವಂತೆ ಮೂರನೇ ಬಾರಿ ನೋಟಿಸ್ ನೀಡಲು ಮುಂದಾಗಿದೆ.

ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅವರಿಗೆ ಎರಡು ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚನೆ ನೀಡಿತ್ತು. ಆದರೆ, ನಲಪಾಡ್ ಗೈರು ಹಾಜರಾಗಿದ್ದರು. ಈ ಹಿನ್ನಲೆಯಲ್ಲಿ ಮತ್ತೊಮ್ಮೆ ನೋಟಿಸ್ ಕೊಡಲು ಸಜ್ಜಾಗಿದೆ.

ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಟ್‍ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು ತನಿಖೆಯನ್ನು ನಡೆಸುತ್ತಿದೆ.

ಈ ಪ್ರಕರಣದ ತನಿಖೆಯ ಭಾಗವಾಗಿ, ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರಿಗೆ ಇಡಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಇದು ಅವರಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಕ್ಕಿರುವ ನೋಟಿಸ್‍ಗಳಲ್ಲಿ ಒಂದಾಗಿದೆ.

ಶ್ರೀಕಿ ಸಂಪರ್ಕ, ಹಣಕಾಸು ವ್ಯವಹಾರಗಳ ಕುರಿತು ತನಿಖೆ

ಬಿಟ್‍ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆಗಿನ ಸಂಪರ್ಕ, ಆರ್ಥಿಕ ವ್ಯವಹಾರಗಳು ಮತ್ತು ಹಗರಣದಲ್ಲಿ ಭಾಗಿಯಾಗಿರುವ ಸಾಧ್ಯತೆಗಳ ಕುರಿತು ಮಾಹಿತಿ ಪಡೆಯಲು ಇಡಿ ಅವರನ್ನು ವಿಚಾರಣೆ ನಡೆಸುತ್ತಿದೆ.

ಈ ಪ್ರಕರಣದ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪಟ್ಟಿ (ಚಾರ್ಜ್‍ಶೀಟ್) ನಲ್ಲಿ ಮೊಹಮ್ಮದ್ ನಲಪಾಡ್ ಅವರ ಹೆಸರನ್ನು ಪ್ರಸ್ತಾಪಿಸಿದೆ. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಚಾರ್ಜ್‌ಶೀಟ್‌ನಲ್ಲಿ ಏನಿದೆ?

ಬಿಟ್ ಕಾಯಿನ್ ಹಗರಣ ಸಂಬಂಧ ಪ್ರಕರಣದ ಆರೋಪಿಗಳಾದ ಶ್ರೀಕಿ, ರಾಬಿನ್ ಖಂಡೇವಾಲ, ಮೊಹಮ್ಮದ್ ನಲಪಾಡ್ ಸೇರಿ ಇತರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಚಾರ್ಜ್ ಶೀಟ್‍ನಲ್ಲಿ ನಲಪಾಡ್‍ಗೆ ಹಣ ಸಂದಾಯದ ಬಗ್ಗೆ ಉಲ್ಲೇಖ ಮಾಡಿದೆ.

ಬಿಟ್ ಕಾಯಿನ್ ನಗದೀಕರಣಕ್ಕೆ ಶ್ರೀಕಿ ಎಂಬಾತ ನಲಪಾಡ್ ಸಂಪರ್ಕ ಮಾಡಿದ್ದನಂತೆ. ನಲಪಾಡ್ ತನ್ನ ಸ್ನೇಹಿತರ ಮೂಲಕ ಹಣ ನಗದೀಕರಣ ಮಾಡಿದ್ದಾರೆ ಎನ್ನುವ ಆರೋಪವಿದ್ದು, ಈ ಬಗ್ಗೆ ಚಾರ್ಜ್ ಶೀಟ್‍ನಲ್ಲೂ ಉಲ್ಲೇಖ ಮಾಡಲಾಗಿದೆ.

ಮುಂಬೈ ಮೂಲದ ಸ್ನೇಹಿತನ ಮೂಲಕ ಹವಾಲ ರೂಪದಲ್ಲಿ ನಗದೀಕರಣ ಮಾಡಿದ್ದು, ಕಮಿಷನ್‍ನಲ್ಲಿ ನಲಪಾಡ್‍ಗೂ ಪಾಲು ತಲುಪಿದೆ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.

ಇಡಿ ದಾಳಿ, ಬಂಧನ ಮತ್ತು ವಿಚಾರಣೆ

ಸದ್ಯ ಇದೇ ಪ್ರಕರಣ ಸಂಬಂಧ ಇಡಿ ಕೂಡ ತನಿಖೆ ನಡೆಸಿದ್ದು, ಇತ್ತೀಚೆಗೆ ನಲಪಾಡ್, ಶ್ರೀಕಿ ಸೇರಿ ಕೆಲವರ ಮನೆ ಮೇಲೆ ದಾಳಿ ನಡೆಸಿತ್ತು.

ಶ್ರೀಕಿ, ಸುಖೇಶ್ ಹೆಗ್ಡೆ, ರಾಬಿನ್ ಖಂಡೇವಾಲರನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು, ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ.

ನಂತರ ನಲಪಾಡ್‍ಗೆ ಎರಡು ಬಾರಿ ಇಡಿ ನೋಟಿಸ್ ನೀಡಿದ್ದು, ನೆಪ ಹೇಳಿ ಮೊಹಮ್ಮದ್ ನಲಪಾಡ್ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ. ಇದೀಗ ನಲಪಾಡ್‍ಗೆ ಮೂರನೇ ನೋಟಿಸ್ ನೀಡಲು ಇಡಿ ತಯಾರಾಗಿದ್ದು, ಶಾಸಕ ಹ್ಯಾರೀಸ್ ಪುತ್ರ ನಲಪಾಡ್‌ಗೆ ಬ್ಯಾಕ್ ಟು ಬ್ಯಾಕ್ ಶಾಕ್ ಎದುರಾಗಿದೆ.

ನಲಪಾಡ್ ಪಾತ್ರದ ಬಗ್ಗೆ ಗಂಭೀರ ಉಲ್ಲೇಖ

ಬಿಟ್‍ಕಾಯಿನ್ ಹ್ಯಾಕಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಲಪಾಡ್ ಅವರ ಪಾತ್ರವೇನು ಎಂಬ ಬಗ್ಗೆ ಚಾರ್ಜ್‍ಶೀಟ್‍ನಲ್ಲಿ ಕೆಲವು ಗಂಭೀರ ಅಂಶಗಳನ್ನು ಉಲ್ಲೇಖಿಸಲಾಗಿದೆ.

ಈ ಪ್ರಕರಣವು ರಾಜ್ಯದಲ್ಲಿ ಹ್ಯಾಕರ್ ಶ್ರೀಕೃಷ್ಣನ ಬಂಧನದ ನಂತರ ದೊಡ್ಡ ಮಟ್ಟದ ರಾಜಕೀಯ ತಿರುವು ಪಡೆದುಕೊಂಡಿತ್ತು.

ಈಗ ಪ್ರಕರಣವು ನ್ಯಾಯಾಲಯದ ಅಂಗಳದಲ್ಲಿರುವುದರಿಂದ, ಚಾರ್ಜ್‍ಶೀಟ್‍ನಲ್ಲಿರುವ ಸಾಕ್ಷ್ಯಗಳನ್ನು ನ್ಯಾಯಾಲಯವು ಹೇಗೆ ಪರಿಗಣಿಸುತ್ತದೆ ಎಂಬುದು ಮುಖ್ಯವಾಗಿದೆ. ತನಿಖಾ ಸಂಸ್ಥೆಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಅಥವಾ ಪೂರಕ ಚಾರ್ಜ್‍ಶೀಟ್ ಸಲ್ಲಿಸುತ್ತವೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಸುಪ್ರೀಂ ಕೋರ್ಟ್ ತೀರ್ಪು ಏನು?

ಬಿಟ್‍ಕಾಯಿನ್ ಹಗರಣದ ತನಿಖೆಯನ್ನು ಸಿಬಿಐ ಅಥವಾ ಎಸ್‍ಐಟಿ ಮೂಲಕ ನಡೆಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಅವರ ಹೆಸರೂ ಕೇಳಿಬಂದಿತ್ತು.

ಈ ಹಗರಣವು ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡಿತ್ತು. ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಎಂಬಾತನ ಹೇಳಿಕೆಗಳ ಆಧಾರದ ಮೇಲೆ, ಪ್ರಭಾವಿ ವ್ಯಕ್ತಿಗಳು ಮತ್ತು ರಾಜಕಾರಣಿಗಳ ಮಕ್ಕಳ ಹೆಸರುಗಳು ಈ ಪ್ರಕರಣದೊಂದಿಗೆ ತಳುಕು ಹಾಕಿಕೊಂಡಿದ್ದವು ಎಂದು ವರದಿಯಾಗಿತ್ತು.

ಈ ಹಿಂದೆ ಹೈಕೋರ್ಟ್ ಈ ಪ್ರಕರಣದ ತನಿಖೆಯನ್ನು ಎಸ್‌ಐಟಿ ಅಥವಾ ಸಿಬಿಐಗೆ ವಹಿಸಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಇದೀಗ ಸುಪ್ರೀಂ ಕೋರ್ಟ್ ಸಹ ಈ ಅರ್ಜಿಯನ್ನು ಪುರಸ್ಕರಿಸದ ಕಾರಣ, ಪ್ರಕರಣದ ತನಿಖೆಯಲ್ಲಿ ನಲಪಾಡ್ ಅವರಿಗೆ ಇದ್ದ ಕಾನೂನು ತೊಡಕುಗಳು ಅಥವಾ ಈ ಪ್ರಕರಣದ ಚರ್ಚೆಯು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆ

ಈ ವಿಚಾರವನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಮತ್ತು ನಲಪಾಡ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿವೆ. ಈ ವಿಷಯವು ಕಾನೂನಾತ್ಮಕ ಮತ್ತು ರಾಜಕೀಯವಾಗಿ ಎರಡೂ ರೀತಿಯಲ್ಲಿ ಮಹತ್ವ ಪಡೆದುಕೊಂಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ