LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಲಪಾಡ್ ಬೆಂಬಿಡದ ಬಿಟ್ ಕಾಯಿನ್ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ನೀಡಿದ ಇಡಿ

ಬೆಂಗಳೂರು: ಬಿಟ್‍ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಯುವ ನಾಯಕ ಹಾಗೂ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಹಾಜರಾಗುವಂತೆ ಮೂರನೇ ಬಾರಿ ನೋಟಿಸ್ ನೀಡಲು ಮುಂದಾಗಿದೆ.

ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅವರಿಗೆ ಎರಡು ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚನೆ ನೀಡಿತ್ತು. ಆದರೆ, ನಲಪಾಡ್ ಗೈರು ಹಾಜರಾಗಿದ್ದರು. ಈ ಹಿನ್ನಲೆಯಲ್ಲಿ ಮತ್ತೊಮ್ಮೆ ನೋಟಿಸ್ ಕೊಡಲು ಸಜ್ಜಾಗಿದೆ.

ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಟ್‍ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು ತನಿಖೆಯನ್ನು ನಡೆಸುತ್ತಿದೆ.

ಈ ಪ್ರಕರಣದ ತನಿಖೆಯ ಭಾಗವಾಗಿ, ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರಿಗೆ ಇಡಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಇದು ಅವರಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಕ್ಕಿರುವ ನೋಟಿಸ್‍ಗಳಲ್ಲಿ ಒಂದಾಗಿದೆ.

ಶ್ರೀಕಿ ಸಂಪರ್ಕ, ಹಣಕಾಸು ವ್ಯವಹಾರಗಳ ಕುರಿತು ತನಿಖೆ

ಬಿಟ್‍ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆಗಿನ ಸಂಪರ್ಕ, ಆರ್ಥಿಕ ವ್ಯವಹಾರಗಳು ಮತ್ತು ಹಗರಣದಲ್ಲಿ ಭಾಗಿಯಾಗಿರುವ ಸಾಧ್ಯತೆಗಳ ಕುರಿತು ಮಾಹಿತಿ ಪಡೆಯಲು ಇಡಿ ಅವರನ್ನು ವಿಚಾರಣೆ ನಡೆಸುತ್ತಿದೆ.

ಈ ಪ್ರಕರಣದ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪಟ್ಟಿ (ಚಾರ್ಜ್‍ಶೀಟ್) ನಲ್ಲಿ ಮೊಹಮ್ಮದ್ ನಲಪಾಡ್ ಅವರ ಹೆಸರನ್ನು ಪ್ರಸ್ತಾಪಿಸಿದೆ. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಚಾರ್ಜ್‌ಶೀಟ್‌ನಲ್ಲಿ ಏನಿದೆ?

ಬಿಟ್ ಕಾಯಿನ್ ಹಗರಣ ಸಂಬಂಧ ಪ್ರಕರಣದ ಆರೋಪಿಗಳಾದ ಶ್ರೀಕಿ, ರಾಬಿನ್ ಖಂಡೇವಾಲ, ಮೊಹಮ್ಮದ್ ನಲಪಾಡ್ ಸೇರಿ ಇತರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಚಾರ್ಜ್ ಶೀಟ್‍ನಲ್ಲಿ ನಲಪಾಡ್‍ಗೆ ಹಣ ಸಂದಾಯದ ಬಗ್ಗೆ ಉಲ್ಲೇಖ ಮಾಡಿದೆ.

ಬಿಟ್ ಕಾಯಿನ್ ನಗದೀಕರಣಕ್ಕೆ ಶ್ರೀಕಿ ಎಂಬಾತ ನಲಪಾಡ್ ಸಂಪರ್ಕ ಮಾಡಿದ್ದನಂತೆ. ನಲಪಾಡ್ ತನ್ನ ಸ್ನೇಹಿತರ ಮೂಲಕ ಹಣ ನಗದೀಕರಣ ಮಾಡಿದ್ದಾರೆ ಎನ್ನುವ ಆರೋಪವಿದ್ದು, ಈ ಬಗ್ಗೆ ಚಾರ್ಜ್ ಶೀಟ್‍ನಲ್ಲೂ ಉಲ್ಲೇಖ ಮಾಡಲಾಗಿದೆ.

ಮುಂಬೈ ಮೂಲದ ಸ್ನೇಹಿತನ ಮೂಲಕ ಹವಾಲ ರೂಪದಲ್ಲಿ ನಗದೀಕರಣ ಮಾಡಿದ್ದು, ಕಮಿಷನ್‍ನಲ್ಲಿ ನಲಪಾಡ್‍ಗೂ ಪಾಲು ತಲುಪಿದೆ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.

ಇಡಿ ದಾಳಿ, ಬಂಧನ ಮತ್ತು ವಿಚಾರಣೆ

ಸದ್ಯ ಇದೇ ಪ್ರಕರಣ ಸಂಬಂಧ ಇಡಿ ಕೂಡ ತನಿಖೆ ನಡೆಸಿದ್ದು, ಇತ್ತೀಚೆಗೆ ನಲಪಾಡ್, ಶ್ರೀಕಿ ಸೇರಿ ಕೆಲವರ ಮನೆ ಮೇಲೆ ದಾಳಿ ನಡೆಸಿತ್ತು.

ಶ್ರೀಕಿ, ಸುಖೇಶ್ ಹೆಗ್ಡೆ, ರಾಬಿನ್ ಖಂಡೇವಾಲರನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು, ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ.

ನಂತರ ನಲಪಾಡ್‍ಗೆ ಎರಡು ಬಾರಿ ಇಡಿ ನೋಟಿಸ್ ನೀಡಿದ್ದು, ನೆಪ ಹೇಳಿ ಮೊಹಮ್ಮದ್ ನಲಪಾಡ್ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ. ಇದೀಗ ನಲಪಾಡ್‍ಗೆ ಮೂರನೇ ನೋಟಿಸ್ ನೀಡಲು ಇಡಿ ತಯಾರಾಗಿದ್ದು, ಶಾಸಕ ಹ್ಯಾರೀಸ್ ಪುತ್ರ ನಲಪಾಡ್‌ಗೆ ಬ್ಯಾಕ್ ಟು ಬ್ಯಾಕ್ ಶಾಕ್ ಎದುರಾಗಿದೆ.

ನಲಪಾಡ್ ಪಾತ್ರದ ಬಗ್ಗೆ ಗಂಭೀರ ಉಲ್ಲೇಖ

ಬಿಟ್‍ಕಾಯಿನ್ ಹ್ಯಾಕಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಲಪಾಡ್ ಅವರ ಪಾತ್ರವೇನು ಎಂಬ ಬಗ್ಗೆ ಚಾರ್ಜ್‍ಶೀಟ್‍ನಲ್ಲಿ ಕೆಲವು ಗಂಭೀರ ಅಂಶಗಳನ್ನು ಉಲ್ಲೇಖಿಸಲಾಗಿದೆ.

ಈ ಪ್ರಕರಣವು ರಾಜ್ಯದಲ್ಲಿ ಹ್ಯಾಕರ್ ಶ್ರೀಕೃಷ್ಣನ ಬಂಧನದ ನಂತರ ದೊಡ್ಡ ಮಟ್ಟದ ರಾಜಕೀಯ ತಿರುವು ಪಡೆದುಕೊಂಡಿತ್ತು.

ಈಗ ಪ್ರಕರಣವು ನ್ಯಾಯಾಲಯದ ಅಂಗಳದಲ್ಲಿರುವುದರಿಂದ, ಚಾರ್ಜ್‍ಶೀಟ್‍ನಲ್ಲಿರುವ ಸಾಕ್ಷ್ಯಗಳನ್ನು ನ್ಯಾಯಾಲಯವು ಹೇಗೆ ಪರಿಗಣಿಸುತ್ತದೆ ಎಂಬುದು ಮುಖ್ಯವಾಗಿದೆ. ತನಿಖಾ ಸಂಸ್ಥೆಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಅಥವಾ ಪೂರಕ ಚಾರ್ಜ್‍ಶೀಟ್ ಸಲ್ಲಿಸುತ್ತವೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಸುಪ್ರೀಂ ಕೋರ್ಟ್ ತೀರ್ಪು ಏನು?

ಬಿಟ್‍ಕಾಯಿನ್ ಹಗರಣದ ತನಿಖೆಯನ್ನು ಸಿಬಿಐ ಅಥವಾ ಎಸ್‍ಐಟಿ ಮೂಲಕ ನಡೆಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಅವರ ಹೆಸರೂ ಕೇಳಿಬಂದಿತ್ತು.

ಈ ಹಗರಣವು ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡಿತ್ತು. ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಎಂಬಾತನ ಹೇಳಿಕೆಗಳ ಆಧಾರದ ಮೇಲೆ, ಪ್ರಭಾವಿ ವ್ಯಕ್ತಿಗಳು ಮತ್ತು ರಾಜಕಾರಣಿಗಳ ಮಕ್ಕಳ ಹೆಸರುಗಳು ಈ ಪ್ರಕರಣದೊಂದಿಗೆ ತಳುಕು ಹಾಕಿಕೊಂಡಿದ್ದವು ಎಂದು ವರದಿಯಾಗಿತ್ತು.

ಈ ಹಿಂದೆ ಹೈಕೋರ್ಟ್ ಈ ಪ್ರಕರಣದ ತನಿಖೆಯನ್ನು ಎಸ್‌ಐಟಿ ಅಥವಾ ಸಿಬಿಐಗೆ ವಹಿಸಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಇದೀಗ ಸುಪ್ರೀಂ ಕೋರ್ಟ್ ಸಹ ಈ ಅರ್ಜಿಯನ್ನು ಪುರಸ್ಕರಿಸದ ಕಾರಣ, ಪ್ರಕರಣದ ತನಿಖೆಯಲ್ಲಿ ನಲಪಾಡ್ ಅವರಿಗೆ ಇದ್ದ ಕಾನೂನು ತೊಡಕುಗಳು ಅಥವಾ ಈ ಪ್ರಕರಣದ ಚರ್ಚೆಯು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆ

ಈ ವಿಚಾರವನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಮತ್ತು ನಲಪಾಡ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿವೆ. ಈ ವಿಷಯವು ಕಾನೂನಾತ್ಮಕ ಮತ್ತು ರಾಜಕೀಯವಾಗಿ ಎರಡೂ ರೀತಿಯಲ್ಲಿ ಮಹತ್ವ ಪಡೆದುಕೊಂಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್