LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ ; ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಇಲಾಖಾ ವೆಬ್‍ಸೈಟ್ w.w.w.ssp.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ದಾಖಲಾತಿಗಳೊಂದಿಗೆ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಮೆಟ್ರಿಕ್ ಪೂರ್ವ ಆದಾಯ ಮಿತಿ 1 ರಿಂದ 8 ತರಗತಿಗೆ 6 ಲಕ್ಷ ಮತ್ತು 9 ರಿಂದ 10ನೇ ತರಗತಿಗೆ 2.50 ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್‍ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದು). ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ), ಇತ್ತೀಚಿನ ಭಾವಚಿತ್ರ, ತಂದೆ/ತಾಯಿ/ಪೆÇೀಷಕರ ಆಧಾರ್ ದಾಖಲಾತಿ ಪ್ರತಿ,

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬೇಕಾದ ಇಲಾಖಾ ವೆಬ್‍ಸೈಟ್ w.w.w.ssp.karnataka.gov.in. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 080-44554455 ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ ಅವರ ಕಚೇರಿ ದೂ.ಸಂ. 9480843156, 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

2026-27ನೇ ಸಾಲಿನ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ (ssp.postmatric karnataka.gov.in) ನಲ್ಲಿ ಅರ್ಜಿ ಸಲ್ಲಿಸಲು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ದಾಖಲಾತಿಗಳೊಂದಿಗೆ ವೆಬ್‍ಸೈಟ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಆದಾಯ ಮಿತಿ 2.50 ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್‍ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದು), ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ), ಹಿಂದಿನ ವರ್ಷದ ಮಾಕ್ರ್ಸ್ ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಅಧ್ಯಯನ/ಬೋನಾಫೈಡ್ ಪ್ರಮಾಣ ಪತ್ರ, (ಮೆಟ್ರಿಕ್ ನಂತರದ ಕೋರ್ಸ್‍ಗಳಿಗೆ), ಶುಲ್ಕ ರಶೀದಿ(ಮೆಟ್ರಿಕ್ ನಂತರದ ಕೋರ್ಸ್‍ಗಳಿಗೆ), ತಂದೆ/ತಾಯಿ/ಪೆÇೀಷಕರ ಆಧಾರ್ ಪ್ರತಿ, ಆದಾಯ ಮಿತಿ 2.50 ಲಕ್ಷಕ್ಕಿಂತ ಒಳಗಿರುವ ಸಿಇಟಿ ಮೂಲಕ ಎಂಬಿಬಿಎಸ್, ಬಿಡಿಎಸ್, ಬಿಇ, ಬಿಟೆಕ್, ಬಿ.ಆರ್‍ಕೆ ಕೋರ್ಸ್‍ಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳು ಮಾತ್ರ ಸರ್ಕಾರಿ, ಅನುದಾನಿತ, ಅನುದಾನರಹಿತ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾನಿಲಯದ ಕಾಲೇಜು/ಸಂಸ್ಥೆಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಶೇ.100 ರಷ್ಟು ಆಯಾಯ ಸಂಸ್ಥೆಗಳಿಗೆ ನಿಗದಿಪಡಿಸಿದ ಶುಲ್ಕ ಪಡೆಯಲು ಅರ್ಹರಿರುತ್ತಾರೆ.

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ (ssp.postmatric.karnataka.gov.in). ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 080-44554455 ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆರವರ ಕಚೇರಿ ದೂರವಾಣಿ 9480843156, 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ