LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀರಾಮ ದಶರಥನಿಗೆ ಹುಟ್ಟಿದ ಮಗನಲ್ಲ: ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ.ಕೆ.ಎಸ್.ಭಗವಾನ್

ದಾವಣಗೆರೆ: ಸದಾಕಾಲ ವಿವಾದಗಳಿಂದಲೇ ಹೆಸರುವಾಸಿಯಾಗಿರುವ ಪ್ರೊ.ಕೆ.ಎಸ್.ಭಗವಾನ್ ಈಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಮರ್ಯಾದಾ ಪುರುಷೋತ್ತಮ, ಹಿಂದೂಗಳ ಆರಾಧ್ಯ ದೈವ ಶ್ರೀರಾಮಚಂದ್ರರ ಬಗ್ಗೆ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೀವು ಪೂಜೆ ಮಾಡುವ ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಗವಾನ್​​, ಶ್ರೀರಾಮನ ತಂದೆ ದಶರಥ ಪುತ್ರ ಕಾಮೇಷ್ಠಿ ಪೂಜೆ ಮಾಡ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಪೂರೋಹಿತರ ಜೊತೆ ರಾಣಿ ರಾತ್ರಿ ಕಳೆದಿದ್ದಾಳೆ ಎಂದರೆ ಅರ್ಥ ಮಾಡಿಕೊಳ್ಳಿ. ಇದನ್ನು ರಾಮ ಮಂದಿರ ಏಕೆ ಬೇಕು ಎನ್ನುವ ಪುಸ್ತಕದಲ್ಲಿ ನಾನು ಬರೆದಿದ್ದು, ವಾಲ್ಮೀಕಿ ರಾಮಾಯಣದಲ್ಲಿ ಇದರ ಬಗ್ಗೆ ಉಲ್ಲೇಖಿಸಿರೋದಾಗಿ ಹೇಳಿದ್ದಾರೆ.

ಶೂದ್ರನಾದ ಶಂಭೂಕ, ಪತ್ನಿ ಸೀತೆ, ಸಹೋದರ ಲಕ್ಷ್ಮಣನನ್ನೇ ರಾಮ ಸಾಯಿಸಿದ್ದಾನೆ. ಇಂಥವರು ನಮಗೆ ಅದರ್ಶ ಆಗಬೇಕಾ? ಪಂಚಾಂಗವನ್ನು ಕೇಳೋದು ಮೊದಲು ಬಿಟ್ಟು ಬಿಡಿ, ಮೊದಲು ನಿಮ್ಮ ಮೇಲೆ‌ ನೀವು ನಂಬಿಕೆ ಬೆಳಸಿಕೊಳ್ಳುವುದನ್ನು ಅಭ್ಯಾಸ ಮಾಡಿ ಎಂದಿದ್ದಾರೆ. ಶೂದ್ರರೆಲ್ಲರೂ ಬ್ರಾಹ್ಮಣರ ಗುಲಾಮರು ಎಂದು ಮನಸ್ಮೃತಿ ಹೇಳುತ್ತೆ. ಗಾಂಧೀಜಿ ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದ್ದರೆ, ಡಾ. ಬಾಬಾ ಸಾಹೇಬ್​​ ಅಂಬೇಡ್ಕರ್​​ ಅವರು ಈ ಗುಲಾಮಗಿರಿಯಿಂದ ಜನತೆಗೆ ಮುಕ್ತಿ ಕೊಡಿಸಿದ್ದಾರೆ ಎಂದಿದ್ದಾರೆ.

ಇನ್ನು ಮದುವೆ ಸಂದರ್ಭದಲ್ಲಿ ಪುರೋಹಿತರು ಹೇಳುವ ಮಂತ್ರದ ಅರ್ಥ ನಿಮಗೆ ಗೊತ್ತಿಲ್ಲ. ಅದು ಗೊತ್ತಾಗಿಯೇ ನನ್ನ ಮದುವೆಗೆ ಯಾವುದೇ ಪುರೋಹಿತರನ್ನು ಕರೆಸದಂತೆ ತಂದೆಯವರಿಗೆ ಹೇಳಿದ್ದೆ. ಪಠ್ಯ ಪುಸ್ತಕಗಳು ಈಗ ಸತ್ಯ ಇಲ್ಲದೆ ತನ್ನ ಸತ್ವವನ್ನು ಕಳೆದುಕೊಂಡಿವೆ. ಸ್ವಾಮಿ ವಿವೇಕಾನಂದರು ತಾವು ಬೌದ್ಧ ಧರ್ಮಕ್ಕೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ.

ಬೌದ್ಧ ಧರ್ಮ ಅತ್ಯಂತ ಮಾನವೀಯವಾದ ಧರ್ಮ, ವೈಜ್ಞಾನಿಕ ಧರ್ಮವಾಗಿದೆ. ನನ್ನ ಮಾತಿನ ಬಗ್ಗೆ ಯಾರಾದರೂ ಕೇಸ್ ಹಾಕಬೇಕು ಎಂದುಕೊಂಡರೆ ಎಲ್ಲ ಮಾಹಿತಿ ತಿಳಿದುಕೊಂಡು ಕೇಸ್ ಹಾಕಿ ಎಂದು ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊನ್ನಾಳಿ ದುರ್ಗಿಗುಡಿ ಓಂ ಗಣಪತಿಗೆ 1.5 ಕೆ.ಜಿ. ಬೆಳ್ಳಿ ಕಿರೀಟ ಸಮರ್ಪಣೆ: ಬರಗಾಲದ ಹಿನ್ನೆಲೆ ಅದ್ದೂರಿತನಕ್ಕೆ ಬ್ರೇಕ್ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್‌ ಕಡಿಮೆಯಾಗುತ್ತಾ? ನಿಜಕ್ಕೂ ಇದರಿಂದ ಎಷ್ಟು ಪ್ರಯೋಜನ?ಸೌದಿ ಅರೇಬಿಯಾ ಮದೀನಾದಲ್ಲಿ 110 ಮಿಲಿಯನ್ ಟನ್ ಅಪರೂಪದ ಖನಿಜಗಳು, ಯುರೇನಿಯಂ ನಿಕ್ಷೇಪ ಪತ್ತೆಕೇವಲ ₹600ಕ್ಕೆ ನೀರಿನಿಂದಲೇ ಉರಿಯುವ ಒಲೆ; 16 ವರ್ಷದ ವಿದ್ಯಾರ್ಥಿಯ ಅದ್ಭುತ ಆವಿಷ್ಕಾರ!ನಟ ಯಶ್ ಅಭಿನಯದ ‘ಟಾಕ್ಸಿಕ್’ OTT ಬಿಡುಗಡೆ ದಿನಾಂಕ ಫಿಕ್ಸ್? ಯಾವಾಗ, ಎಲ್ಲಿ ಸ್ಟ್ರೀಮಿಂಗ್?ದಿಶಾ ಸಾಲಿಯನ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; CBI FIRನಲ್ಲಿ ಉದ್ಧವ್, ಆದಿತ್ಯ ಠಾಕ್ರೆ ಸೇರಿ ಕೆಲವು ಬಾಲಿವುಡ್ ನಟರ ಹೆಸರು!ಇದು ಸಿದ್ಧಿ-ಬುದ್ಧಿ ಗಣೇಶನ ಕಥೆ; ತಪ್ಪದೇ ಓದಿ, ನಿಮ್ಮ ಕಷ್ಟ ನಿವಾರಣೆಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ದಾರುಣ ಸಾವುBREAKING : ಮಂಗಳೂರಿನಲ್ಲಿ ಸೆ.18ರಂದು ರಾಜ್ಯ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ : ಸಿಎಂ ಡಿ.ಕೆ. ಶಿವಕುಮಾರ್ ವಿಡಿಯೋ ಸಂದೇಶ | WATCH VIDEOBREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಹಾಲಿನ ಟ್ಯಾಂಕರ್ ಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವು.!