LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಸಭೆಗೆ ಬಿಜೆಪಿ ಪರಿಗಣಿಸದ ಬಗ್ಗೆ ರಾಜಕೀಯದಲ್ಲಿ ಭಾರಿ ಚರ್ಚೆ: ವದಂತಿಗಳಿಗೆ ತೆರೆ ಎಳೆಯಲು ಇಂದು ದೇವೇಗೌಡರಿಂದ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು: ರಾಜ್ಯಸಭೆಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಹೆಸರನ್ನು ಮೈತ್ರಿ ಪಕ್ಷ ಬಿಜೆಪಿ ಪರಿಗಣಿಸದ ಬಗ್ಗೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೇ ವೇಳೆ ಇಂದು ದೇವೇಗೌಡರು ಪತ್ರಿಕಾಗೋಷ್ಠಿ ಕರೆದಿರುವುದು ಕುತೂಹಲ ಮೂಡಿಸಿದೆ.

ಬೆಳಿಗ್ಗೆ 11:30ಕ್ಕೆ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ದೇವೇಗೌಡರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ರಾಜ್ಯಸಭೆಗೆ ತಮ್ಮನ್ನು ಪರಿಗಣಿಸದಿರುವ ಕುರಿತು ಕೇಳಿ ಬರುತ್ತಿರುವ ವದಂತಿ ಮತ್ತು ಊಹಾಪೋಹಗಳಿಗೆ ತೆರೆ ಎಳೆಯುವ ಸಾಧ್ಯತೆ ಇದೆ.

ರಾಜ್ಯಸಭೆಗೆ ದೇವೇಗೌಡರ ಹೆಸರನ್ನು ಪರಿಗಣಿಸದಿರುವ ಬಗ್ಗೆ ಕಾಂಗ್ರೆಸ್ ನಾಯಕರು ಬಿಜೆಪಿಯನ್ನು ಟೀಕಿಸಿ ದೇವೇಗೌಡರ ಬಗ್ಗೆ ಕಾಳಜಿಯ ಮಾತುಗಳನ್ನು ಆಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇವೇಗೌಡರು ಸುದ್ದಿಗೋಷ್ಠಿಯಲ್ಲಿ ಎಲ್ಲಾ ವಿಚಾರಗಳಿಗೆ ಉತ್ತರಿಸಿ ಗೊಂದಲಕ್ಕೆ ತೆರೆಯಲಿದ್ದಾರೆ.

ರಾಜ್ಯಸಭೆಗೆ ಸ್ಪರ್ಧಿಸಲು ಜೆಡಿಎಸ್ ಬಳಿ ಸಂಖ್ಯಾಬಲವಿಲ್ಲ. ಮೈತ್ರಿ ಪಕ್ಷ ಬಿಜೆಪಿಗೆ ಒಂದು ಸ್ಥಾನ ಗೆಲ್ಲಲು ಅಗತ್ಯವಿರುವ ಮತಗಳಿವೆ. ಅಂತೆಯೇ ಅವರು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ. ರಾಜ್ಯಸಭೆ ಸದಸ್ಯ ಸ್ಥಾನ ಬಿಟ್ಟು ಕೊಡುವಂತೆ ಮೈತ್ರಿ ಪಕ್ಷ ಬಿಜೆಪಿಯನ್ನು ಜೆಡಿಎಸ್ ಕೇಳಿಲ್ಲ. ಹೀಗಾಗಿ ತಮಗೆ ಅನ್ಯಾಯವಾಗಿಲ್ಲ. ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಬಾಂಧವ್ಯವಿದೆ. ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲವೆಂದು ದೇವೇಗೌಡರು ಸ್ಪಷ್ಟಪಡಿಸುವ ಸಾಧ್ಯತೆ ಇದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ