LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ

ತುಮಕೂರು: ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ 2026-27 ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರರು/ಮೀನು ಕೃಷಿಕರಿಗೆ ಸಹಾಯ ಧನ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.

ಹೊಸ ಮೀನು ಕೃಷಿ ಕೊಳ ನಿರ್ಮಾಣ(ಸಿಹಿ ನೀರಿನ ಜಲಕೃಷಿಗೆ ಹೂಡಿಕೆ ವೆಚ್ಚಗಳು ಸೇರಿದಂತೆ), ಸಿಹಿನೀರಿನ ಪ್ರದೇಶಗಳಿಗೆ ಬಯೋಫ್ಲೋಕ್ ಕೊಳಗಳ ನಿರ್ಮಾಣ(ಹೆಕ್ಟೇರಿಗೆ/4 ಲಕ್ಷ ರೂ. ಹೂಡಿಕೆ ವೆಚ್ಚ ಸೇರಿದಂತೆ), ಅಕ್ಕೇರಿಯಂ/ಅಲಂಕಾರಿಕ ಮೀನುಗಳ ಕಿಯೋಸ್ಕ್ ಸೇರಿದಂತೆ ಮೀನು ಕಿಯೋಸ್ಕ್‌ಗಳ ನಿರ್ಮಾಣ, ಶಾಖ ನಿರೋಧಕ ವಾಹನ ಹಾಗೂ ಜೀವಂತ ಮೀನು ಮಾರಾಟ ಕೇಂದ್ರ ಕಾರ್ಯಕ್ರಮಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜೂನ್ 18 ಕಡೆಯ ದಿನವಾಗಿದ್ದು, ಆಸಕ್ತ ಮೀನುಗಾರರು/ಮೀನು ಕೃಷಿಕರು ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ನಿಗದಿತ ನಮೂನೆಯ ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜೂನ್ 18ರೊಳಗೆ ಸಲ್ಲಿಸಬಹುದಾಗಿದೆ.

ಜೂ.11 ರಂದು ಡಾಕ್ ಅದಾಲತ್: ಸಾರ್ವಜನಿಕರ ಕುಂದುಕೊರತೆ ಆಲಿಕೆಗೆ ಅವಕಾಶ

ಬಳ್ಳಾರಿ :   ಬಳ್ಳಾರಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಅಂಚೆ ಕಚೇರಿಗಳಿಗೆ ಸಂಬಂಧಿಸಿದ ಸಾರ್ವಜನಿಕರ ದೂರುಗಳು ಹಾಗೂ ಕುಂದುಕೊರತೆಗಳ ನಿವಾರಣೆಗಾಗಿ ಜೂನ್ 11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಪ್ರದೇಶದಲ್ಲಿರುವ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಡಾಕ್ ಅದಾಲತ್ (ಅಂಚೆ ಅದಾಲತ್) ಹಮ್ಮಿಕೊಳ್ಳಲಾಗಿದೆ.

ಅಂಚೆ ಇಲಾಖೆಯ ಸೇವೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮಲ್ಲಿರುವ ಕುಂದುಕೊರತೆಗಳು ಅಥವಾ ದೂರುಗಳನ್ನು ಲಿಖಿತ ರೂಪದಲ್ಲಿ ಸವಿಸ್ತಾರವಾಗಿ ಬರೆದು, ಜೂನ್ 10 ರ ಸಂಜೆ 04 ಗಂಟೆಯ ಒಳಗಾಗಿ ತಲುಪುವಂತೆ ಅಂಚೆ ಅಧೀಕ್ಷಕರು, ಬಳ್ಳಾರಿ ವಿಭಾಗ, ಬಳ್ಳಾರಿ-583102 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು.

ಸಾರ್ವಜನಿಕರು ತಮ್ಮ ದೂರುಗಳನ್ನು [email protected] ಇ-ಮೇಲ್ ವಿಳಾಸಕ್ಕೂ ಸಹ ಕಳುಹಿಸಬಹುದಾಗಿದೆ. ದೂರು ಸಲ್ಲಿಸಲು ಕೊನೆಯ ದಿನಾಂಕ ಜೂನ್ 10. ದೂರು ಸಲ್ಲಿಸಿದ ಅರ್ಜಿದಾರರು ಜೂನ್ 11 ರಂದು ನಡೆಯುವ ಡಾಕ್ ಅದಾಲತ್‌ನಲ್ಲಿ ಖುದ್ದಾಗಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ