ಸ್ಯಾಂಡಲ್ ವುಡ್ ನಲ್ಲಿ ಸದ್ಯ ಭಾರೀ ನಿರೀಕ್ಷೆ ಮೂಡಿಸಿರುವ ”ಬಲರಾಮನ ದಿನಗಳು” ಚಿತ್ರದ ಹೊಸ ಅಪ್ಡೇಟ್ ಹೊರಬಿದ್ದಿದೆ. ಸಿನಿಮಾದ ಪ್ರಮುಖ ಆಕರ್ಷಣೆಯಾಗಿರುವ ‘ಕ್ವಾರ್ಟರು’ ಹೆಸರಿನ ಸ್ಪೆಷಲ್ ಐಟಂ ಸಾಂಗ್ ಬಿಡುಗಡೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.
ಖ್ಯಾತ ಗಾಯಕಿ ಸಂಜನಾ ಕಲ್ಮಂಜೆ ಧ್ವನಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಸ್ಟಾರ್ ಸಾಹಿತಿ ಡಾಕ್ಟರ್ ವಿ ನಾಗೇಂದ್ರ ಪ್ರಸಾದ್ ಅವರು ಸಾಹಿತ್ಯ ಬರೆದಿದ್ದಾರೆ. ಸೌತ್ ಸಿನಿಪ್ರಪಂಚದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಅವರು ಈ ಸ್ಪೆಷಲ್ ಹಾಡಿಗೆ ಕ್ಯಾಚಿ ಟ್ಯೂನ್ ಹಾಕಿದ್ದು, ಭೂಷಣ್ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ಈ ಹಾಡು ಅದ್ಧೂರಿಯಾಗಿ ಮೂಡಿಬಂದಿದೆ. ಸಿನಿಮಾದ ಮಾಸ್ ಎಲಿಮೆಂಟ್ ಗಳಿಗೆ ಪೂರಕವಾಗಿರುವಂತೆ ಈ ಹಾಡನ್ನು ಕಂಪೋಸ್ ಮಾಡಲಾಗಿದೆ.
ಖ್ಯಾತ ನಿರ್ದೇಶಕ ಕೆ ಎಂ ಚೈತನ್ಯ ಕಥೆ ಬರೆದು ನಿರ್ದೇಶನ ಮಾಡಿರುವ ‘ಬಲರಾಮನ ದಿನಗಳು’ ಸಿನಿಮಾವನ್ನು ಪದ್ಮಾವತಿ ಜಯರಾಮ್ ಮತ್ತು ಶ್ರೇಯಸ್ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಇನ್ನು ಈ ಚಿತ್ರಕ್ಕೆ ಹೆಚ್ ಸಿ ವೇಣುಗೋಪಾಲ್ ಅವರ ಛಾಯಾಗ್ರಹಣ ಹಾಗೂ ಕೆಜಿಎಫ್ ಖ್ಯಾತಿಯ ಹರಿದಾಸ್ ಅವರ ಸಂಕಲನವಿದೆ. ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಮಾಡಿದ್ದು, ರವಿವರ್ಮ, ವಿಕ್ರಮ್ ಮೋರ್ ಹಾಗೂ ಯೋಗಾನಂದ್ ಸಾಹಸ ದೃಶ್ಯಗಳನ್ನು ಕಂಪೋಸ್ ಮಾಡಿದ್ದಾರೆ. ತಾಂತ್ರಿಕವಾಗಿ ಶ್ರೀಮಂತವಾಗಿ ಮೂಡಿಬಂದಿರುವ ಈ ಸಿನಿಮಾದ ಈ ಹೊಸ ಹಾಡು ಈಗ ಮಾಸ್ ಪ್ರೇಕ್ಷಕರನ್ನು ಸೆಳೆಯುತ್ತಿದೆ.