LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಕ್ರಿಮಿನಲ್ ಗಂಡ ದರ್ಶನ್ ಜೈಲಿನಲ್ಲಿದ್ದರೆ ಹೆಂಡತಿ ಬಾಯ್‌ಫ್ರೆಂಡ್ ಧನ್ವೀರ್ ಜತೆ ಸುತ್ತಾಟ’ ಎಂದು ವಿಡಿಯೊ ಹಂಚಿಕೊಂಡ ‘ಜಲಗಾರ ಯೂನಿವರ್ಸಿಟಿ’; ವಿಜಯಲಕ್ಷ್ಮಿಯಿಂದ ದೂರು!

ಚಿತ್ರದುರ್ಗದ ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಮಾಡಿದ ಕಾರಣ ಆತನನ್ನು ದರ್ಶನ್ ಅಂಡ್ ಗ್ಯಾಂಗ್ ಕೊಲೆ ಮಾಡಿದೆ ಎಂಬ ಆರೋಪದಡಿ ಬಂಧಿಸಲಾಗಿದ್ದು, ಸದ್ಯ ಅವರೆಲ್ಲ ಜೈಲಿನಲ್ಲಿದ್ದಾರೆ.

ಇನ್ನೂ ಸಹ ಪ್ರಕರಣದ ಟ್ರಯಲ್ ಹಂತದಲ್ಲಿದ್ದು, ದರ್ಶನ್‌ಗೆ ಮುಂದಿನ ವರ್ಷದಲ್ಲಿ ಶಿಕ್ಷೆನಾ ಅಥವಾ ಅವರದ್ದು ಯಾವುದೇ ತಪ್ಪಿಲ್ಲ ಎಂದು ಬಿಡುಗಡೆ ಏನಾದರೂ ಆಗ್ತಾರಾ ಎಂಬ ಪ್ರಶ್ನೆ ಮೂಡಿದೆ.

ದರ್ಶನ್ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಬಿಡುಗಡೆಯಾಗಲಿ ಎಂದು ಪ್ರಾರ್ಥನೆ ಮಾಡುತ್ತಿದ್ದರೆ, ಪತ್ನಿ ವಿಜಯಲಕ್ಷ್ಮಿ ಇಂತಹ ಕೆಟ್ಟ ಸಂದರ್ಭದಲ್ಲೂ ಪತಿಯ ಪರ ಹೋರಾಟ ನಡೆಸುತ್ತಿದ್ದಾರೆ. ವಿಜಯಲಕ್ಷ್ಮಿ ಅವರ ಈ ಪ್ರಯತ್ನಕ್ಕೆ ದರ್ಶನ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ ಪೋಸ್ಟ್ ಹಂಚಿಕೊಂಡು ತಮ್ಮ ಅಭಿಮಾನ ಹೊರಹಾಕಿದ್ದಾರೆ.

ಹೀಗೆ ಒಂದೆಡೆ ದರ್ಶನ್ ಪರ ನಿಂತಿದ್ದಕ್ಕೆ ಅಭಿಮಾನಿಗಳ ಕಡೆಯಿಂದ ಮೆಚ್ಚುಗೆ ದೊರೆತರೆ ಇನ್ನೊಂದು ಕಡೆ ವಿರೋಧಿಗಳಿಂದ ಟ್ರೋಲ್ ಸಹ ವ್ಯಕ್ತವಾಗುತ್ತಿದೆ. ಈ ಹಿಂದೆ ಹಲವಾರು ಬಾರಿ ವಿಜಯಲಕ್ಷ್ಮಿ ದರ್ಶನ್ ಅವರನ್ನು ಹೀನಾಯವಾಗಿ ಟ್ರೋಲ್ ಮಾಡಲಾಗಿದ್ದು, ಈಗಲೂ ಸಹ ಅದು ಮುಂದುವರಿದ ಕಾರಣ ವಿಜಯಲಕ್ಷ್ಮಿ ದರ್ಶನ್ ಸೈಬರ್ ಪೊಲೀಸರ ಮೊರೆ ಹೋಗಿದ್ದಾರೆ.

‘ಜಲಗಾರ ಯೂನಿವರ್ಸಿಟಿ’ ಎಂಬ ಹೆಸರಿನಲ್ಲಿ ಕಿಡಿಗೇಡಿಯೊಬ್ಬ ನಕಲಿ ಖಾತೆ ತೆರೆದಿದ್ದು, ಖಾತೆಯಲ್ಲಿ ಸತತವಾಗಿ ದರ್ಶನ್ ಹಾಗೂ ಕುಟುಂಬದ ವಿರುದ್ಧ ಕೆಟ್ಟ ಪೋಸ್ಟ್ ಹರಡುತ್ತಾ ಬಂದಿದ್ದಾನೆ. ಸದ್ಯ ಆತ ಹಂಚಿಕೊಂಡ ಪೋಸ್ಟ್‌ನಲ್ಲಿ ವಿಜಯಲಕ್ಷ್ಮಿ ಅವರ ಕುರಿತು ಅಶ್ಲೀಲವಾಗಿ ಬರೆದುಕೊಂಡಿದ್ದು, ನಟ ಧನ್ವೀರ್ ಜತೆ ಸಂಬಂಧ ಹೊಂದಿದ್ದಾರೆ ಎಂದು ಹೀನಾಯವಾಗಿ ಬರೆದುಕೊಂಡಿದ್ದಾನೆ.

ಇವರೇ ನೋಡಿ ಕ್ರಿಮಿನಲ್ ದರ್ಶನ್ ಹೆಂಡತಿ, ಗಂಡ ಜೈಲಿನಲ್ಲಿದ್ದರೆ ಈಕೆ ಬಾಯ್‌ಫ್ರೆಂಡ್ ಜತೆ ಸುತ್ತಾಟ ನಡೆಸುತ್ತಿದ್ದಾಳೆ ಎಂದು ಬರೆದುಕೊಂಡು ಅನೇಕ ಅಶ್ಲೀಲ ಪದಗಳನ್ನು ಬಳಸಿ ವಿಜಯಲಕ್ಷ್ಮಿ ಮಗನ ಕುರಿತೂ ಸಹ ವಿಕೃತಿ ಮೆರೆದಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ತನ್ನನ್ನು ಬಾಯಿ ತುಂಬಾ ಅತ್ತಿಗೆ ಎಂದೇ ಕರೆಯುವ ಧನ್ವೀರ್ ಜತೆ ಚಿತ್ರ ವೀಕ್ಷಣೆಯೊಂದಕ್ಕೆ ತೆರಳಿದ್ದ ವಿಡಿಯೊವನ್ನು ಇಲ್ಲಿ ಬಳಸಿಕೊಂಡು ಹೀನಾಯ ಮನಸ್ಥಿತಿ ಪ್ರದರ್ಶಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ