LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಐಎಡಿಬಿಯಲ್ಲಿ ಮಹತ್ವದ ಬದಲಾವಣೆ: ಭೂಸ್ವಾಧೀನದಿಂದ ಇ-ಖಾತಾವರೆಗೆ ಎಲ್ಲವೂ ಡಿಜಿಟಲ್!

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯ (ಕೆಐಎಡಿಬಿ) ಮೂಲಕ ನಡೆಯುವ ಭೂಸ್ವಾಧೀನ ಮತ್ತು ನಿವೇಶನ ಮಂಜೂರಾತಿಯವರೆಗಿನ ಪ್ರತಿಯೊಂದು ಪ್ರಕ್ರಿಯೆಯೂ ಇನ್ನು ಮುಂದೆ ಡಿಜಿಟಲ್ ರೂಪದಲ್ಲಿ ನಡೆಯಲಿದೆ. ಇದರಿಂದ ರೈತರು ಮತ್ತು ಉದ್ಯಮಿಗಳು ಸೇರಿದಂತೆ ಎಲ್ಲರಿಗೂ ಅನುಕೂಲವಾಗಲಿದೆ.

ಈ ಸಂಬಂಧದ ಕೆಲಸಗಳನ್ನು ಮುಂದಿನ ನೂರು ದಿನಗಳಲ್ಲಿ ಮುಗಿಸಬೇಕು ಎಂದು ಬೃಹತ್ ಕೈಗಾರಿಕಾ ಸಚಿವ M. B. Patil ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

100 ದಿನಗಳ ಗಡುವು: ಇಲಾಖೆಗೆ ಸ್ಪಷ್ಟ ನಿರ್ದೇಶನ

ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಅವರು ಖನಿಜ ಭವನದಲ್ಲಿ ಬುಧವಾರ ತಮ್ಮ ಇಲಾಖೆಯ ಎರಡನೇ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ಅವರು ನೂರು ದಿನಗಳಲ್ಲಿ ಮಾಡಬೇಕಾದ ಕೆಲಸಗಳೇನು ಎಂದು ಸ್ಪಷ್ಟಪಡಿಸಿದರು.

ಸಭೆಯ ಬಗ್ಗೆ ಮಾತನಾಡಿದ ಅವರು, ಸರ್ಕಾರದ ಇ-ಗವರ್ನೆನ್ಸ್ ಇಲಾಖೆಯು ಏಕೀಕೃತ ಭೂ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ. ಇದರ ಅಡಿಯಲ್ಲೇ ಈಗ ರಾಜ್ಯದ ಹಳೆಯ ಮತ್ತು ಹೊಸ ಕೈಗಾರಿಕಾ ಪ್ರದೇಶಗಳಲ್ಲಿನ ನಿವೇಶನಗಳ ಪ್ರತಿಯೊಂದು ವಿವರವನ್ನೂ ಡಿಜಿಟಲೀಕರಣ ಮಾಡಲಾಗುವುದು.

ಇದರಲ್ಲಿ ಪ್ರತೀ ನಿವೇಶನಕ್ಕೆ ಸಂಬಂಧಿಸಿದಂತೆ ಒಟ್ಟು 77 ಕಾಲಂಗಳಲ್ಲಿ ಮಾಹಿತಿ ಇರಲಿದೆ ಎಂದು ತಿಳಿಸಿದ್ದಾರೆ.

ಒಂದು ಕ್ಲಿಕ್‌ನಲ್ಲಿ 77 ರೀತಿಯ ಮಾಹಿತಿ ಲಭ್ಯ

ಕೈಗಾರಿಕಾ ನಿವೇಶನದ ಮಂಜೂರಾತಿ, ಅದರ ಸ್ಥಿತಿಗತಿ, ಅಲ್ಲಿರುವ ಕೈಗಾರಿಕೆ, ಮಾಡಿರುವ ಹೂಡಿಕೆ, ಆಗಿರುವ ಉದ್ಯೋಗಸೃಷ್ಟಿ, ಸಂತ್ರಸ್ತ ರೈತರಿಗೆ ಕೊಟ್ಟಿರುವ ಪರಿಹಾರ, ಕೋರ್ಟ್ ಕೇಸಿನ ವಿವರಗಳು, ಹೂಡಿಕೆದಾರರಿಗೆ ಕೊಟ್ಟಿರುವ ಕಾಲಾವಕಾಶ ಮುಂತಾದ ವಿವರಗಳು ಡಿಜಿಟಲೀಕರಣದಿಂದ ಕ್ಷಣಾರ್ಧದಲ್ಲಿ ಸಿಗಲಿವೆ.

ಬಹಳ ಹಿಂದಿನ ದಾಖಲೆಗಳನ್ನು ಕಾಪಾಡುವ ಕಷ್ಟವೂ ಇದರಿಂದ ತಪ್ಪಲಿದ್ದು, ಪ್ರತಿಯೊಂದು ಮಾಹಿತಿಯೂ ಶಾಶ್ವತವಾಗಿ ಉಳಿಯಲಿದೆ ಎಂದು ಅವರು ವಿವರಿಸಿದ್ದಾರೆ.

ಡಬಲ್ ಪರಿಹಾರ, ದಾಖಲೆ ಸಮಸ್ಯೆಗೆ ಬ್ರೇಕ್

ಹಿಂದೆ ಎಷ್ಟೋ ಪ್ರಕರಣಗಳಲ್ಲಿ ದಾಖಲೆಗಳು ಸರಿಯಾಗಿಲ್ಲದೆ ಒಂದೊಂದೇ ಜಮೀನಿಗೆ ಎರಡೆರಡು ಬಾರಿ ಪರಿಹಾರ ಕೊಟ್ಟಿರುವ ಪ್ರಕರಣಗಳು ಕೂಡ ಸಂಭವಿಸಿವೆ.

ಹೊಸ ವ್ಯವಸ್ಥೆಯಿಂದ ಸಂಪೂರ್ಣ ಪಾರದರ್ಶಕತೆ ಬರಲಿದ್ದು, ಹೂಡಿಕೆದಾರರು ತಾವು ಇರುವಲ್ಲಿಂದಲೇ ತಮಗೆ ಬೇಕಾದ ಮಾಹಿತಿ ಪಡೆದುಕೊಳ್ಳಬಹುದು. ಇಲ್ಲಿ ಮಧ್ಯವರ್ತಿಗಳ ಕಾಟ ಇರುವುದಿಲ್ಲ ಎಂದು ಅವರು ನುಡಿದಿದ್ದಾರೆ.

224 ಕೈಗಾರಿಕಾ ಪ್ರದೇಶಗಳ ಮಾಹಿತಿ ಡಿಜಿಟಲ್ ಭದ್ರತೆಗೆ

ರಾಜ್ಯದಲ್ಲಿ ಈಗ 224 ಕೈಗಾರಿಕಾ ಪ್ರದೇಶಗಳಿವೆ. ಇಲ್ಲಿರುವ ಸಾವಿರಾರು ನಿವೇಶನಗಳ ಸ್ಥಿತಿಗತಿ ಎಲ್ಲವೂ ಸದ್ಯದಲ್ಲೇ ಸ್ಕ್ಯಾನ್ ಆಗಿ, ಸುರಕ್ಷಿತವಾಗಲಿದೆ.

ಕೈಗಾರಿಕಾ ಇಲಾಖೆಯಲ್ಲಿ ಜನಸ್ನೇಹಿ ಸುಧಾರಣೆಗಳನ್ನು ತರಬೇಕು ಎನ್ನುವ ಉದ್ದೇಶದಿಂದ ಡಿಜಿಟಲೀಕರಣವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಪಾಟೀಲ ಹೇಳಿದ್ದಾರೆ.

ಒಂದು ತಿಂಗಳಲ್ಲಿ ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಳಿಸಲು ಸೂಚನೆ

ಹಳೆಯ ಕೈಗಾರಿಕಾ ಪ್ರದೇಶಗಳಲ್ಲಿನ ನಿವೇಶನಗಳ ಹಂಚಿಕೆ ಮಾಹಿತಿಯನ್ನು ಸ್ಕ್ಯಾನ್ ಮಾಡುವ ಪ್ರಕ್ರಿಯೆಯನ್ನು ಒಂದು ತಿಂಗಳಲ್ಲಿ ಮಾಡಬೇಕು.

ಬಳಿಕ ಆ ದತ್ತಾಂಶವನ್ನು ಇ-ಆಡಳಿತ ಇಲಾಖೆ ಜತೆ ಹಂಚಿಕೊಂಡು ಕೆಐಎಡಿಬಿಗೆ ಬೇಕಾಗುವ ಹಾಗೆ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲಾಗುವುದು.

ನಂತರ ಅದನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಜತೆ ಜೋಡಣೆ ಮಾಡಲಾಗುತ್ತದೆ.

ಇ-ಖಾತಾ ಸೇರಿದಂತೆ ಹಲವು ಸೇವೆಗಳು ಸುಲಭ

ಆ ಮೂಲಕ ಇ-ಖಾತಾ ಕೊಡುವುದು ಸೇರಿದಂತೆ ಇತರ ಪ್ರಕ್ರಿಯೆಗಳಿಗೂ ಅನುಕೂಲ ಆಗಲಿದೆ ಎಂದು ಸಚಿವರು ಹೇಳಿದರು.

ಹೊಸ ವ್ಯವಸ್ಥೆಯಿಂದ ಭೂಸ್ವಾಧೀನ, ಪರಿಹಾರ ವಿತರಣೆ, ನಿವೇಶನ ಹಂಚಿಕೆ, ಹೂಡಿಕೆದಾರರ ಮಾಹಿತಿ ನಿರ್ವಹಣೆ ಸೇರಿದಂತೆ ಎಲ್ಲ ಪ್ರಕ್ರಿಯೆಗಳು ಒಂದೇ ಡಿಜಿಟಲ್ ವೇದಿಕೆಯಲ್ಲಿ ಲಭ್ಯವಾಗಲಿದ್ದು, ಪಾರದರ್ಶಕತೆ ಮತ್ತು ಕಾರ್ಯಕ್ಷಮತೆ ಹೆಚ್ಚುವ ನಿರೀಕ್ಷೆ ಇದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಆಡಳಿತ ಯಂತ್ರಕ್ಕೆ ಮತ್ತಷ್ಟು ವೇಗ ನೀಡಿದ ಡಿ.ಕೆ. ಶಿವಕುಮಾರ್: ಮುಖ್ಯಮಂತ್ರಿಯಾದ ಒಂದೇ ವಾರಕ್ಕೆ ಮಹತ್ವದ ಸಭೆರಸ್ತೆಯಲ್ಲಿ ಉಗುಳಬೇಡಿ ಎಂದು ಹೇಳಿದ ವೃದ್ಧನ ಮೇಲೆ ಕ್ಯಾಬ್ ಚಾಲಕನಿಂದ ಅಮಾನುಷ ಹಲ್ಲೆ | VIDEOಎರಡೂವರೆ ತಿಂಗಳಲ್ಲಿ ರಾಷ್ಟ್ರೀಯ ಗ್ರಿಡ್‌ಗೆ 423 ಕೋಟಿ ರೂಪಾಯಿ ಮೌಲ್ಯದ ವಿದ್ಯುತ್ ಮಾರಾಟ; ಕೆಜೆ ಜಾರ್ಜ್ ಮಾಹಿತಿ44ನೇ ವಯಸ್ಸಿನಲ್ಲಿ 193 ಕಿ.ಮೀ/ಗಂ ವೇಗ: ಸೆರೆನಾ ವಿಲಿಯಮ್ಸ್‌ನ ಟೆನಿಸ್ ಪುನರಾಗಮನ ಎಲ್ಲರನ್ನೂ ನಿಬ್ಬೆರಗಾಗಿಸಿತು140 ಕೋಟಿ ಭಾರತೀಯರ ಆಕಾಂಕ್ಷೆಗಳು ಖಂಡಿತ ಈಡೇರುತ್ತವೆ: NDA ಸಮಾವೇಶದಲ್ಲಿ ಪ್ರಧಾನಿ ಮೋದಿBREAKING: ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ, ಅರ್ಹ ಫಲಾನುಭವಿಗಳಿಗೆ ಹಣ: ಸಿಎಂ ಡಿ.ಕೆ. ಶಿವಕುಮಾರ್5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಕಡ್ಡಾಯ ಲಸಿಕೆ ಹಾಕಿಸಲು ಜೂ. 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕೆಐಎಡಿಬಿಯಲ್ಲಿ ಮಹತ್ವದ ಬದಲಾವಣೆ: ಭೂಸ್ವಾಧೀನದಿಂದ ಇ-ಖಾತಾವರೆಗೆ ಎಲ್ಲವೂ ಡಿಜಿಟಲ್!ಉಡುಪಿ ಕೃಷ್ಣ ಮಠದ ಬಳಿ ತೆಲಂಗಾಣ ಕುಟುಂಬದ ಮೇಲೆ ಹಲ್ಲೆ: ಆರೋಪಿ ಅರೆಸ್ಟ್ಒಂದು ಕಾಲದಲ್ಲಿ ನಾನು ಮೋದಿಯನ್ನು ಕಟುವಾಗಿ ಟೀಕಿಸಿದ್ದೆ; ಪತ್ರಿಕಾಗೋಷ್ಟಿಯಲ್ಲಿ ದೇವೇಗೌಡ ಓಪನ್ ಟಾಕ್