LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ಬದಲಾವಣೆ: ಪರ್ಯಾಯ ಮಾರ್ಗದ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ದಲಿತ ಸಂಘಟನೆಗಳ ಸಮಿತಿಯಿಂದ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

ಫ್ರೀಡಂ ಪಾರ್ಕ್‌ನಲ್ಲಿ ಇಂದು ಕರ್ನಾಟಕ ದಲಿತ ಸಂಘಟನೆಗಳ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದ್ದು, ಸುಗಮ ವಾಹನ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕ ಸಂಚಾರ ನಿರ್ಬಂಧ ಹಾಗೂ ಸಂಚಾರಕ್ಕೆ ಪರ್ಯಾಯ ಮಾರ್ಗಗಳಳನ್ನು ಸೂಚಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ

ಪ್ರತಿಭಟನೆಯಲ್ಲಿ ಭಾಗವಹಿಸುವ ಸಾರ್ವಜನಿಕರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ಸಿಟಿ ರೈಲ್ವೆ ನಿಲ್ದಾಣದಿಂದ ಫ್ಲೈಓವರ್ ರಸ್ತೆಯ ಮೂಲಕ ಫ್ರೀಡಂ ಪಾರ್ಕ್ ಕಡೆಗೆ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಖೋಡೆ ಜಂಕ್ಷನ್‌ನಿಂದ ಕೆಆರ್ ಸರ್ಕಲ್ ಕಡೆಗೆ ಸಂಚರಿಸುವ ವಾಹನ ಸವಾರರು ಸಂಚಾರ ದಟ್ಟಣೆಯನ್ನು ತಪ್ಪಿಸಲು ಹಳೇ ಜೆಡಿಎಸ್ ಕಚೇರಿ ರಸ್ತೆಯನ್ನು ಬಳಸುವಂತೆ ಸೂಚಿಸಲಾಗಿದೆ.

ಮೈಸೂರು ಬ್ಯಾಂಕ್ ವೃತ್ತದಿಂದ ಕೆ.ಜಿ. ರಸ್ತೆ ಮೂಲಕ ಫ್ರೀಡಂ ಪಾರ್ಕ್ ಕಡೆಗೆ ಬರುವ ವಾಹನಗಳು ಕಡ್ಡಾಯವಾಗಿ ಬಲತಿರುವು ಪಡೆದು, ಮಹಾರಾಣಿ ಅಂಡರ್‌ಪಾಸ್ ರಸ್ತೆ ಹಾಗೂ ಪ್ಯಾಲೇಸ್ ಕ್ರಾಸ್ ರಸ್ತೆ ಮೂಲಕ ಮುಂದೆ ಸಾಗಬೇಕು ಎಂದು ತಿಳಿಸಲಾಗಿದೆ.

ಪ್ರತಿಭಟನೆಯ ತೀವ್ರತೆಯ ಕಾರಣದಿಂದಾಗಿ ಫ್ರೀಡಂ ಪಾರ್ಕ್ ಜಂಕ್ಷನ್‌ನಿಂದ ಕನಕದಾಸ ವೃತ್ತದ ನಡುವಿನ ರಸ್ತೆಯಲ್ಲಿ ಎರಡೂ ಕಡೆಯಿಂದಲೂ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇನ್ನು ಗಾಂಧಿನಗರದ ಕಡೆಗೆ ತೆರಳುವ ಸವಾರರ ಅನುಕೂಲಕ್ಕಾಗಿ, ಸಾಮಾನ್ಯವಾಗಿ ಒನ್‌ವೇ (ಏಕಮುಖ ಸಂಚಾರ) ಆಗಿರುತ್ತಿದ್ದ ಸುಬ್ಬಣ್ಣ ಜಂಕ್ಷನ್‌ನಿಂದ ಎಂಟಿಆರ್ ಜಂಕ್ಷನ್ ವರೆಗಿನ ರಸ್ತೆಯನ್ನು ಇಂದು ತಾತ್ಕಾಲಿಕವಾಗಿ ಟೂ-ವೇ ಮಾರ್ಗವಾಗಿ ಪರಿವರ್ತಿಸಲಾಗಿದೆ.

ಸಂಚಾರಕ್ಕೆ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸರು, ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ವಾಹನ ನಿಲ್ಲಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ. ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್‌ವರೆಗೆ, ವಿ. ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಪ್ಯಾಲೇಸ್ ರಸ್ತೆ ಹಾಗೂ ಕೆ.ಜಿ. ರಸ್ತೆಯಲ್ಲಿ ಯಾವುದೇ ರೀತಿಯ ವಾಹನಗಳ ಪಾರ್ಕಿಂಗ್ ಮಾಡುವಂತಿಲ್ಲ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ