LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? ಫಲಾನುಭವಿಗಳನ್ನು ಕಡಿಮೆ ಮಾಡುವ ಪ್ಲಾನ್: ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ಗೃಹಲಕ್ಷ್ಮೀ ಯೋಜೆನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯಿಂದ ಹೊರಗಿಡುವ ಪ್ರಕ್ರಿಯೆ ಆರಂಭವಾಗಿದ್ದು, ಈ ಬಗ್ಗೆ ವಿಪಕ್ಷ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಅಂದು ಕಾಕಾ ಪಾಟೀಲ್ ನಿಂಗೂ ಫ್ರೀ, ಜಮೀರ್ ಅಹ್ಮದ್ ನಿಂಗೂ ಫ್ರೀ, ಮಹದೇವಪ್ಪ ನಿಂಗೂ ಫ್ರೀ ಎಂದು ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯನವರು ಘೋಷಿಸಿದ್ದರು. ಈಗ ಏನಾಯ್ತು? 10 ಕೆಜಿ ಅಕ್ಕಿ ಕೊಟ್ಟಿದ್ದೀರಾ? ಮೋದಿಯವರು 5 ಕೆಜಿ ಅಕ್ಕಿ ಕೊಡದೇ ಇದ್ದರೆ, ನಿಮ್ಮನ್ನೇ ನಂಬಿದ್ದರೆ ಜನರು ಖಾಲಿ ಹೊಟ್ಟೆಯಲ್ಲಿ ನೀರು ಕುಡಿದು ಮಲಗಬೇಕಿತ್ತು ಎಂದು ಕಿಡಿಕಾರಿದರು.

ನಿಮ್ಮ ಕಂಡಿಷನ್ ಯಾಕೆ, ಖಜಾನೆ ಖಾಲಿಯಾಗಿದೆ ಎಂಬುದು ಜನರಿಗೆ ಗೊತ್ತಿದೆ ಎಂದು ತಿಳಿಸಿದರು. ಫಲಾನುಭವಿ ಜನರನ್ನು ಕಡಿಮೆ ಮಾಡಲು ಕಂಡಿಷನ್ ಹಾಕುತ್ತೀರಿ. ನಿಮ್ಮ ಹಳೆ ಭಾಷಣವನ್ನು ಜನರು ಕೇಳಿಸಿಕೊಳ್ಳುತ್ತಾರೆ ಎಂದರು.

ಇದಕ್ಕೆ ಸೂಕ್ತ ಸಮಯದಲ್ಲಿ ಜನರು ಉತ್ತರ ಕೊಡುತ್ತಾರೆ. ನಮಗೂ ಗ್ಯಾರಂಟಿ ಯೋಜನೆಗಳಿಗೂ ಸಂಬಂಧ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದರೆ, ನಾವು ಪ್ರಶ್ನೆ ಮಾಡುವುದಿಲ್ಲ ಎಂದು ಸವಾಲು ಹಾಕಿದರು.

ಗೃಹಲಕ್ಷ್ಮಿ ಕೊಡಬೇಕಾಗುತ್ತದೆ ಎಂದು ಹೊಸ ಬಿಪಿಎಲ್ ಕಾರ್ಡ್ ಕೊಡುವುದನ್ನೂ ನಿಲ್ಲಿಸಿದ್ದಾರೆ. ಇದರಿಂದಾಗಿ ಅರ್ಹ ಫಲಾನುಭವಿಗಳು ಬಿಪಿಎಲ್ ಕಾರ್ಡ್‌ನಿಂದಲೂ ವಂಚಿತರಾಗಿದ್ದಾರೆ. ಇದು ಸರಿಯಲ್ಲ ಎಂದು ಗುಡುಗಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ