LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೇಜಸ್ವಿ ಸೂರ್ಯ ಪತ್ನಿ, ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಗೆ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರನ್ನು ಸಂಗೀತ ನಾಟಕ ಅಕಾಡೆಮಿಯ 2025 ನೇ ಸಾಲಿನ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

2024 ಮತ್ತು 25ನೇ ಸಾಲಿಗೆ ಒಟ್ಟು 106 ಕಲಾವಿದರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಸಂಗೀತ ನೃತ್ಯ ಸೇರಿದಂತೆ ವಿವಿಧ ಕಲೆಯಲ್ಲಿ ಸೇವೆ ಸಲ್ಲಿಸುವ ಯುವ ಕಲಾವಿದರಿಗೆ ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಸ್ಮರಣಾರ್ಥ ಯುವ ಪುರಸ್ಕಾರ ಪ್ರಶಸ್ತಿ ನೀಡಲಾಗುವುದು.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಶಿವಶ್ರೀ ಕಂದ ಪ್ರಸಾದ್, ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರಕ್ಕೆ ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ದೇವರಿಗೆ ಗುರುಗಳಿಗೆ ಗೌರವ ಸಮರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಖ್ಯಾತ ಕರ್ನಾಟಕ ಶಾಸ್ತ್ರೀಯ ಸಂಗೀತಗಾರ್ತಿ ಮತ್ತು ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ (Sivasri Skandaprasad) ಅವರು ಪ್ರತಿಷ್ಠಿತ ಸಂಗೀತ ನಾಟಕ ಅಕಾಡೆಮಿಯ ‘ಯುವ ಪುರಸ್ಕಾರ’ (Yuva Puraskar) ಗೌರವಕ್ಕೆ ಭಾಜನರಾಗಿದ್ದಾರೆ。

ಭಾರತೀಯ ಶಾಸ್ತ್ರೀಯ ಸಂಗೀತ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಘೋಷಿಸಿದೆ. ಶಿವಶ್ರೀ ಅವರು ಸಂಗೀತ ಮತ್ತು ನಾಮಸಂಕೀರ್ತನೆ ಸಂಪ್ರದಾಯದ ಕುಟುಂಬದಿಂದ ಬಂದವರು. ಶಿವಶ್ರೀ ಅವರು ಬಾಲ್ಯದಿಂದಲೂ ಸಂಗೀತ ಹಾಗೂ ನೃತ್ಯ ಅಭ್ಯಾಸವನ್ನು ನಡೆಸುತ್ತಾ ಬಂದಿದ್ದಾರೆ. ಕರ್ನಾಟಕ ಸಂಗೀತದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದು, ತಮ್ಮ ಸಂಸ್ಥೆಯ ಮೂಲಕ ಭಾರತೀಯ ಶಾಸ್ತ್ರೀಯ ಸಂಗೀತ ಮತ್ತು ಭರತನಾಟ್ಯವನ್ನು ಕಲಿಸುತ್ತಿದ್ದಾರೆ.

ಸಂಗೀತ ನಾಟಕ ಅಕಾಡೆಮಿಯ ಯುವ ಪುರಸ್ಕಾರವು ಭಾರತೀಯ ಯುವ ಕಲಾವಿದರಿಗೆ ದೊರೆಯುವ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದೆ. ಇದರ ಜೊತೆಗೆ ಇವರು ಸಂಗೀತ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಸುಬ್ಬುಲಕ್ಷ್ಮಿ ಪ್ರಶಸ್ತಿ ಮತ್ತು ಫೆಲೋಶಿಪ್ ಹಾಗೂ ಸಂಗೀತ ಶಿರೋಮಣಿ ಪುರಸ್ಕಾರವನ್ನೂ ಪಡೆದುಕೊಂಡಿದ್ದಾರೆ.

https://www.facebook.com/artsivasri?cft[0]=AZbNsU9cHa8X0TwE4A3AQoI2G2Iq3AnlNpgtBbyB3tZYZnGXcOEkD4FinXBb71MCH7oDlIjCNkIGCKfZrP8rlRZ5l4PAwCtGB_gaA4cgT042YWvJXERV5SwPYve8KaeXvyJjv_PXFWiJhTwFRmSV2INPfasacNUCREnqiEmunwSTCmVUj4XYFJId9CNWelgSMUY&tn=-]C%2CP-R

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ