LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಮಾರಕೃಪಾ ಕಟ್ಟಡದ ವಾಸ್ತು ಬದಲಿಸಲು ಮುಂದಾದ ಸಿಎಂ ಡಿಕೆಶಿ ಗಾಂಧೀಜಿ ನಡೆದ ಜಾಗದಲ್ಲಿ ಡಿಕೆಶಿ ದರ್ಪದ ಹೆಜ್ಜೆ ಎಂದು ಜೆಡಿಎಸ್ ಭಾರಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಹೊಸದೊಂದು ಭಾರಿ ವಿವಾದಕ್ಕೆ ಸಿಲುಕಿದ್ದಾರೆ ಬೆಂಗಳೂರಿನ ಹೆಮ್ಮೆಯ ಅಸ್ಮಿತೆಯಾಗಿರುವ, ಬರೋಬ್ಬರಿ 160 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಮಾರಕೃಪಾ (Kumarakrupa) ಪಾರಂಪರಿಕ ಅತಿಥಿ ಗೃಹವನ್ನು ತಮ್ಮ ಗೃಹ ಕಚೇರಿಯನ್ನಾಗಿ ಪರಿವರ್ತಿಸಲು ಸಿಎಂ ನಿರ್ಧರಿಸಿದ್ದಾರೆ. ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರವನ್ನು ಅತಿಯಾಗಿ ನಂಬುವ ಡಿಕೆಶಿ, ಈ ಐತಿಹಾಸಿಕ ಕಟ್ಟಡದ ಒಳಾಂಗಣವನ್ನು ತಮಗೆ ಬೇಕಾದ ರೀತಿಯಲ್ಲಿ ಬದಲಾಯಿಸಲು ಮುಂದಾಗಿದ್ದು, ಲೋಕೋಪಯೋಗಿ ಇಲಾಖೆ ಈಗಾಗಲೇ ನವೀಕರಣ ಕಾಮಗಾರಿ ಆರಂಭಿಸಿದೆ. ಈ ನಡೆಗೆ ಪ್ರಾದೇಶಿಕ ಪಕ್ಷ ಜೆಡಿಎಸ್ (JDS) ಅತ್ಯಂತ ಕಟುವಾದ ಪದಗಳಲ್ಲಿ ಕಿಡಿಕಾರಿದೆ

ಗಾಂಧೀಜಿ ನಡೆದ ಜಾಗದಲ್ಲಿ ದರ್ಪದ ಹೆಜ್ಜೆ ಜೆಡಿಎಸ್ ಭಾರಿ ಆಕ್ರೋಶ

ಪಾರಂಪರಿಕ ಕಟ್ಟಡಕ್ಕೆ ಧಕ್ಕೆ ಗಾಂಧೀಜಿ ನಡೆದ ಜಾಗದಲ್ಲಿ ಈಗ ಡಿಕೆಶಿ ದರ್ಪದ ಹೆಜ್ಜೆʼ ಎಂಬ ಕಟು ಶೀರ್ಷಿಕೆಯೊಂದಿಗೆ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಜೆಡಿಎಸ್, ಸಿಎಂ ನಡೆಯನ್ನು ತೀವ್ರವಾಗಿ ಖಂಡಿಸಿದೆ

“ರಾಜ್ಯದಲ್ಲಿ ಮುಖ್ಯಮಂತ್ರಿಗಳಿಗಾಗಿ ಕಾವೇರಿ, ಅನುಗ್ರಹದಂತಹ ಭವ್ಯ ನಿವಾಸಗಳಿದ್ದರೂ ಇತಿಹಾಸವನ್ನು ಧ್ವಂಸಗೊಳಿಸಲು ಹೊರಟಿರುವ ಈ ನಡೆ ಉದ್ಧಟತನ ಅಷ್ಟೇ ಅಲ್ಲ, ಮೂರ್ಖತನದ ಪರಮಾವಧಿ” ಎಂದು ಜೆಡಿಎಸ್ ಕಿಡಿಕಾರಿದೆ.

ಇತಿಹಾಸಕ್ಕೆ ಮಹಾದ್ರೋಹ:

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ತಂಗಿದ್ದ, ದಿವಾನ್‌ ಕೆ. ಶೇಷಾದ್ರಿ ಅಯ್ಯರ್ ಅವರ ನೆನಪಿನ ಕುಮಾರಕೃಪ ಕಟ್ಟಡವನ್ನು ಕೇವಲ ವೈಯಕ್ತಿಕ ತೆವಲಿಗಾಗಿ, ಗೃಹ ಕಚೇರಿ ಮಾಡಿಕೊಳ್ಳಲು ಮಾರ್ಪಾಡು ಮಾಡುತ್ತಿರುವುದು ಇತಿಹಾಸಕ್ಕೆ ಬಗೆಯುವ ಮಹಾದ್ರೋಹ ಎಂದಿದೆ.

ಯಾರ ವೈಯಕ್ತಿಕ ಆಸ್ತಿಯೂ ಅಲ್ಲ:

“ಕುಮಾರ ಕೃಪ ಯಾರ ವೈಯಕ್ತಿಕ ಆಸ್ತಿಯೂ ಅಲ್ಲ, ಅದು ಇತಿಹಾಸದ ಹೆಗ್ಗುರುತು. ಪಾರಂಪರಿಕ ಕಟ್ಟಡಗಳ ರಕ್ಷಣೆ ಮಾಡಬೇಕಾದವರೇ ಅದರ ವಿನಾಶಕ್ಕೆ ನಿಂತಿರುವುದು ವಿಪರ್ಯಾಸ. ಗೃಹ ಕಚೇರಿ ನೆಪದಲ್ಲಿ ಅದರ ಮೂಲ ಸ್ವರೂಪಕ್ಕೆ ಧಕ್ಕೆ ತರುತ್ತಿರುವುದು ಅಕ್ಷಮ್ಯ. ಪಾರಂಪರಿಕ ಕಟ್ಟಡಗಳಿಗೆ ಕೈ ಹಾಕಬೇಡಿ ಈ ಕೂಡಲೇ ನವೀಕರಣ ಕಾಮಗಾರಿಯನ್ನು ನಿಲ್ಲಿಸಿ” ಎಂದು ಜೆಡಿಎಸ್ ಆಗ್ರಹಿಸಿದೆ.

ವಾಸ್ತು ಲೆಕ್ಕಾಚಾರ: ರೂಮ್ ನಂಬರ್ 1 ಸಂಪೂರ್ಣ ನೆಲಸಮ

ವಿಶ್ವಾಸಾರ್ಹ ಮೂಲಗಳ ಪ್ರಕಾರ, ಸಿಎಂ ಡಿಕೆ ಶಿವಕುಮಾರ್ ಅವರಿಗಾಗಿ ಈ ಪಾರಂಪರಿಕ ಕಟ್ಟಡದ ಒಳಾಂಗಣ ವಿನ್ಯಾಸವೇ ಸಂಪೂರ್ಣ ಬದಲಾಗುತ್ತಿದೆ.

ಕಟ್ಟಡದಲ್ಲಿರುವ ಕೊಠಡಿ ನಂಬರ್ 1 ಅನ್ನು ಸಂಪೂರ್ಣವಾಗಿ ನೆಲಸಮಗೊಳಿಸಲಾಗುತ್ತಿದ್ದು, ಸಂಪೂರ್ಣ ವಾಸ್ತು ಪ್ರಕಾರವೇ ನವೀಕರಣಗೊಳಿಸಲಾಗುತ್ತಿದೆ

ಮುರಿದುಬಿದ್ದ ಹಳೇ ಸಂಪ್ರದಾಯ: ಇದುವರೆಗೆ ಕುಮಾರಕೃಪಾ ರಸ್ತೆಯಲ್ಲಿರುವ ಕೃಷ್ಣಾ ಕಟ್ಟಡವೇ ಮುಖ್ಯಮಂತ್ರಿಗಳ ಅಧಿಕೃತ ಗೃಹ ಕಚೇರಿಯಾಗಿತ್ತು. ಆದರೆ ನೂತನ ಸಿಎಂ ಡಿಕೆಶಿ ಈ ಹಳೇ ಸಂಪ್ರದಾಯವನ್ನು ಮುರಿದು, ಕುಮಾರಕೃಪಾ ಗೆಸ್ಟ್‌ಹೌಸ್ ಅನ್ನು ಗೃಹ ಕಚೇರಿ ಮಾಡಲು ತೀರ್ಮಾನಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಏನಿದು ಕುಮಾರಕೃಪಾ ಕಟ್ಟಡದ ಅಸಲಿ ಮಹತ್ವ?

1856ರ ಇತಿಹಾಸ: ಕುಮಾರಕೃಪಾ ಅತಿಥಿಗೃಹದ ಮುಖ್ಯ ಕಲ್ಲಿನ ಕಟ್ಟಡ ನಿರ್ಮಾಣವಾಗಿದ್ದು ಬರೋಬ್ಬರಿ 1856ರಲ್ಲಿ (160 ವರ್ಷಗಳ ಹಿಂದೆ). ಇನ್ನು ಅದಕ್ಕೆ ಹೊಂದಿಕೊಂಡಿರುವ ಕಟ್ಟಡದ ಕಾಮಗಾರಿ 1960ರಲ್ಲಿ ಪೂರ್ಣಗೊಂಡಿತು.

ಮಹಾತ್ಮ ಗಾಂಧೀಜಿ ವಾಸ್ತವ್ಯ: ಈ ಮುಖ್ಯ ಕಟ್ಟಡದಲ್ಲಿ ಒಟ್ಟು 12 ಐಷಾರಾಮಿ ಕೊಠಡಿಗಳಿವೆ. ಅತ್ಯಂತ ಪ್ರಮುಖವಾದ ವಿಷಯವೆಂದರೆ, ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಬೆಂಗಳೂರಿಗೆ ಬಂದಾಗ ಇದೇ ಐತಿಹಾಸಿಕ ಕಟ್ಟಡದಲ್ಲಿ ತಂಗಿದ್ದರು ಎನ್ನುತ್ತದೆ ಇತಿಹಾಸ!

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್