LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಅರ್ಜಿ ಸಲ್ಲಿಕೆ ಆರಂಭ: ಈ ದಾಖಲೆಗಳು ಕಡ್ಡಾಯ

ಬೆಂಗಳೂರು: ಇಂದಿನಿಂದ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳೇನು? ಅರ್ಜಿ ಸಲ್ಲಿಸುವುವುದು ಹೇಗೆ ಎಂಬ ಬಗ್ಗೆ ಮುಖ್ಯ ಮಾಹಿತಿ ಇಲ್ಲಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಈ ಕುರಿತು ಸಾರಿಗೆ ಇಲಾಖೆಯು ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜೂನ್ 12ರಿಂದಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಅಡಿಯಲ್ಲಿ ಈಗಾಗಲೇ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಇರುವುದರಿಂದ ಹೆಣ್ಣು ಮಕ್ಕಳು ಪ್ರತ್ಯೇಕವಾಗಿ ಬಸ್ ಪಾಸ್ ಪಡೆಯುವ ಅವಶ್ಯಕತೆ ಇರುವುದಿಲ್ಲ. ಮುಖ್ಯಮಂತ್ರಿಗಳು ಘೋಷಣೆ ಮಾಡಿರುವ ಈ ನೂತನ ಉಚಿತ ಬಸ್ ಪಾಸ್ ಸೌಲಭ್ಯವು ಕೇವಲ ಗಂಡು ಮಕ್ಕಳಿಗೆ (ವಿದ್ಯಾರ್ಥಿಗಳಿಗೆ) ಅನ್ವಯಿಸಲಿದ್ದು, ಅವರು ಕಡ್ಡಾಯವಾಗಿ ಅರ್ಜಿ ಸಲ್ಲಿಸಿ ಪಾಸ್ ಪಡೆದುಕೊಳ್ಳಬೇಕಾಗುತ್ತದೆ. ಸೇವಾ ಸಿಂಧು ಆಪ್ ಮೂಲಕ ಅರ್ಜಿ ಸಲ್ಲಿಸಬಹುದು.

ಈಗಾಗಲೇ ಹಣ ನೀಡಿ ಪಾಸ್ ಪಡೆದುಕೊಂಡಿರುವ ವಿದ್ಯಾರ್ಥಿಗಳಿಗೆ ಮುಂದಿನ 15 ದಿನಗಳಲ್ಲಿ ಹಣ ಮರುಪಾವತಿ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ. ಇದಕ್ಕಾಗಿ ಸರ್ಕಾರ ಒಟ್ಟು 86,86,25,000 ಕೋಟಿ ರೂ. ಹಣವನ್ನು ನಾಲ್ಕು ಸಾರಿಗೆ ನಿಗಮಗಳಿಗೆ ಬಿಡುಗಡೆ ಮಾಡಿದೆ.

ವಿದ್ಯಾರ್ಥಿಗಳು ತಮ್ಮ ಮೊಬೈಲ್, ಯಾವುದೇ ಸೈಬರ್ ಸೆಂಟರ್, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ನಾಡಕಚೇರಿಗಳ ಮೂಲಕ ‘ಸೇವಾಸಿಂಧು (Seva Sindhu)’ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅಗತ್ಯ ದಾಖಲೆಗಳು:
ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಕಡ್ಡಾಯವಾಗಿರುತ್ತವೆ.

ವಿದ್ಯಾರ್ಥಿಯ ಆಧಾರ್ ಕಾರ್ಡ್
ಶಾಲಾ/ಕಾಲೇಜು ಪ್ರವೇಶಾತಿ ರಶೀದಿ
ವಿದ್ಯಾರ್ಥಿಯ ಇತ್ತೀಚಿನ 2 ಪಾಸ್‌ಪೋರ್ಟ್ ಅಳತೆಯ ಫೋಟೋಗಳು
ಮುಖ್ಯವಾಗಿ, ಆನ್‌ಲೈನ್ ಅರ್ಜಿಯ ಪ್ರತಿಯಲ್ಲಿ ವಿದ್ಯಾರ್ಥಿ ಓದುತ್ತಿರುವ ವಿದ್ಯಾಸಂಸ್ಥೆಯ ಮುಖ್ಯಸ್ಥರಿಂದ (Principal/Head Master) ಕಡ್ಡಾಯವಾಗಿ ಸಹಿ ಮತ್ತು ಅಧಿಕೃತ ಸೀಲ್ ಹಾಕಿಸಿಕೊಂಡಿರಬೇಕು.

ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಆಯಾ ಅರ್ಜಿಗಳನ್ನು ಬಿಎಂಟಿಸಿ , ಕೆಎಸ್‌ಆರ್‌ಟಿಸಿ, ವಾಯುವ್ಯ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ಪಾಸ್ ವಿಭಾಗದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ. ವಿದ್ಯಾರ್ಥಿಯ ಶಾಲಾ-ಕಾಲೇಜಿನ ಮಾಹಿತಿ ನಿಖರವಾಗಿದ್ದಲ್ಲಿ ಅರ್ಜಿಯನ್ನು ಅನುಮೋದಿಸಲಾಗುತ್ತದೆ. ಅರ್ಜಿ ಅನುಮೋದನೆಗೊಂಡ ತಕ್ಷಣ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಗೆ ಸಂದೇಶ ಬರಲಿದ್ದು, ಆ ಬಳಿಕ ನಿಗದಿಪಡಿಸಿದ ಕೌಂಟರ್‌ಗಳಲ್ಲಿ ಪಾಸ್ ಪಡೆಯಬಹುದು.

ಬೆಂಗಳೂರಿನ ಮೆಜೆಸ್ಟಿಕ್, ಕೆಂಗೇರಿ, ಶಾಂತಿನಗರ, ಎಲೆಕ್ಟ್ರಾನಿಕ್ ಸಿಟಿ, ಹೊಸಕೋಟೆ, ಆನೇಕಲ್ ಸೇರಿದಂತೆ ಪ್ರಮುಖ ಆರು ಟಿಟಿಎಂಸಿ ಕೇಂದ್ರಗಳಲ್ಲಿ ಹಾಗೂ ರಾಜ್ಯದ ಎಲ್ಲಾ ಪ್ರಮುಖ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ವಿದ್ಯಾರ್ಥಿಗಳು ಭೌತಿಕ ಪಾಸ್‌ಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಸಾಅರಿಗೆ ಇಲಾಖೆ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ