LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು ದೇವರಂತೆ ರಕ್ಷಿಸಿದ ಕೆಎಸ್‌ಆರ್‌ಟಿಸಿ ಡ್ರೈವರ್ ವಿಡಿಯೋ ವೈರಲ್

ನೆರೆರಾಜ್ಯ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಒಂದು ಮೈ ನಡುಗಿಸುವ ರೋಮಾಂಚನಕಾರಿ ಘಟನೆ ನಡೆದಿದೆ ಬಿಡುವಿಲ್ಲದ ಹೆದ್ದಾರಿಯ ಮಧ್ಯೆ ಒಂಟಿಯಾಗಿ ಕುಳಿತಿದ್ದ ಪುಟಾಣಿ ಕಂದಮ್ಮನನ್ನು ಖಾಸಗಿ ಬಸ್ಸೊಂದರ ಸಿಬ್ಬಂದಿ ತಮ್ಮ ಪ್ರಾಣದ ಹಂಗು ತೊರೆದು ಸಿನಿಮೀಯ ಶೈಲಿಯಲ್ಲಿ ರಕ್ಷಿಸಿದ್ದಾರೆ. ಚಾಲಕ ಹಾಗೂ ನಿರ್ವಾಹಕನ ಈ ಅದ್ಭುತ ಸಮಯಪ್ರಜ್ಞೆಯಿಂದಾಗಿ ಕಣ್ಣು ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ಸಂಭವಿಸಬಹುದಾಗಿದ್ದ ಭೀಕರ ರಸ್ತೆ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ

ಕೇರಳದ ಮಲಪ್ಪುರಂ ಜಿಲ್ಲೆಯ ಕೊಂಡೊಟ್ಟಿ ಸಮೀಪದ ಪುಲಿಕ್ಕಲ್ನ ಕಿನಾರಪಡಿ ಬಳಿಯ ಒಲವತ್ತೂರು-ಫಾರೂಕ್ ಪಿಡಬ್ಲ್ಯೂಡಿ ರಸ್ತೆಯಲ್ಲಿ ಬೆಳಗ್ಗೆ ಸುಮಾರು 8.30ಕ್ಕೆ ಈ ಘಟನೆ ಸಂಭವಿಸಿದೆ. ಒಲವತ್ತೂರಿನಿಂದ ಫಾರೂಕ್ಗೆ ಸಫಾ ಮರ್ವಾ ಎಂಬ ಖಾಸಗಿ ಬಸ್ ಸಂಚರಿಸುತ್ತಿತ್ತು. ಆ ಸಮಯದಲ್ಲಿ ಲಘು ಮಳೆಯಾಗುತ್ತಿತ್ತು ಮತ್ತು ರಸ್ತೆಯ ತಿರುವಿನಲ್ಲಿ ದೃಷ್ಟಿ ಗೋಚರತೆ ಅತ್ಯಂತ ಕಡಿಮೆ ಇತ್ತು.

ದೇವದೂತರಾದ ಚಾಲಕ-ಕಂಡಕ್ಟರ್:

ಬಸ್ ವೇಗವಾಗಿ ತಿರುವಿನಲ್ಲಿ ಬರುತ್ತಿದ್ದಂತೆ, ಚಾಲಕ ರಾಮಚಂದ್ರನ್ ಅವರಿಗೆ ರಸ್ತೆಯ ಮಧ್ಯದಲ್ಲಿ ಏನೋ ಒಂದು ಮಗು ಒಂಟಿಯಾಗಿ ಕುಳಿತಿರುವುದು ತಕ್ಷಣವೇ ಕಣ್ಣಿಗೆ ಬಿದ್ದಿದೆ. ಜಾಗರೂಕರಾಗಿದ್ದ ಚಾಲಕ ಕ್ಷಣಾರ್ಧದಲ್ಲಿ ಭೀಕರ ಬ್ರೇಕ್ ಹಾಕಿ ಬಸ್ಸನ್ನು ಮಗುವಿನ ಅತ್ಯಂತ ಹತ್ತಿರದಲ್ಲಿ ಸುರಕ್ಷಿತವಾಗಿ ನಿಲ್ಲಿಸಿದ್ದಾರೆ

ಕಂಡಕ್ಟರ್ ಮ್ಯಾರಥಾನ್ ರನ್: ಬಸ್ ನಿಲ್ಲುತ್ತಿದ್ದಂತೆ ಸೀಟಿನಿಂದ ಜಿಗಿದ ನಿರ್ವಾಹಕ (ಕಂಡಕ್ಟರ್) ನವಾಸ್ ಅಲಿ, ರಸ್ತೆಗೆ ಓಡಿಹೋಗಿ ಮಗುವನ್ನು ಎತ್ತಿಕೊಂಡು ಮುದ್ದಾಡಿ, ಸುರಕ್ಷಿತವಾಗಿ ಅವರ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.

ರಕ್ಷಿಸಲ್ಪಟ್ಟ ಈ ಅದೃಷ್ಟವಂತ ಮಗು ರಮೀಸ್ ಎಂಬುವವರ ಮಗಳಾಗಿದ್ದು, ಇನ್ನು ಒಂದು ವರ್ಷ ಕೂಡ ತುಂಬಿಲ್ಲ ಮನೆಯ ಕಂಪೌಂಡ್ ಗೇಟ್ ತೆರೆದಿದ್ದರಿಂದ ಪೋಷಕರ ಕಣ್ಣು ತಪ್ಪಿಸಿ ಸದ್ದಿಲ್ಲದೆ ತೆವಳುತ್ತಾ ಹೆದ್ದಾರಿಯ ಮಧ್ಯಕ್ಕೆ ಬಂದು ಕುಳಿತಿತ್ತು. ಆ ಸಮಯದಲ್ಲಿ ಪೋಷಕರು ವರಂಡಾದಲ್ಲಿ ಕೂತು ಪತ್ರಿಕೆ ಓದುವುದರಲ್ಲಿ ಮಗ್ನರಾಗಿದ್ದರು ಎನ್ನಲಾಗಿದೆ. ಬಸ್ ಸಿಬ್ಬಂದಿ ಮಗುವನ್ನು ಮರಳಿ ಮನೆಗೆ ತಂದು ಒಪ್ಪಿಸಿದಾಗಲೇ ಪೋಷಕರಿಗೆ ಅಸಲಿ ವಿಷಯ ಗೊತ್ತಾಗಿದ್ದು

ಸಕಾಲದಲ್ಲಿ ಮಗುವಿನ ಪ್ರಾಣ ಉಳಿಸಿದ ಬಸ್ ಚಾಲಕ ಮತ್ತು ನಿರ್ವಾಹಕನ ಸಾಹಸಕ್ಕೆ ಇಡೀ ದೇಶವೇ ಸೆಲ್ಯೂಟ್ ಹೊಡೆಯುತ್ತಿದೆ. ಕೇರಳದ ಸಾರಿಗೆ ಸಚಿವರು ಹಾಗೂ ಕಾರ್ಮಿಕ ಸಚಿವರು ಖುದ್ದಾಗಿ ಚಾಲಕ ರಾಮಚಂದ್ರನ್ ಹಾಗೂ ಕಂಡಕ್ಟರ್ ನವಾಸ್‌ಗೆ ಫೋನ್ ಮಾಡಿ ಅಭಿನಂದಿಸಿದ್ದಾರೆ. ಇತ್ತ ಮೋಟಾರು ವಾಹನ ಇಲಾಖೆ (MVD) ತನ್ನ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದೆ

“ವಾಹನ ಚಾಲನೆ ಮಾಡುವಾಗ ‘ಯಾವಾಗ ಏನು ಬೇಕಾದರೂ ಸಂಭವಿಸಬಹುದು’ ಎಂಬ ಜಾಗರೂಕತೆಯನ್ನು ಚಾಲಕರು ಹೊಂದಿರಬೇಕು. ಯಾವುದೇ ಅಪಘಾತಕ್ಕೆ ಆಸ್ಪದ ನೀಡದೆ ಬಸ್ ನಿಲ್ಲಿಸಿ, ಮಗುವಿನ ಜೀವ ಉಳಿಸಿದ ರಾಮಚಂದ್ರನ್ ಮತ್ತು ನವಾಸ್ ಅವರ ಸಮಯಪ್ರಜ್ಞೆಗೆ ನಮ್ಮ ಅಭಿನಂದನೆಗಳು.” ಎಂದು ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್