LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ: ಕೇಸ್ ದಾಖಲಿಸಲು ಮುಂದಾದ ವೇಳೆ ತಾಯಿಯಿಂದಲೂ ವಿರೋಧ: ಒಂಟಿಯಾಗಿ ಕಾನೂನು ಹೋರಾಟ ಮಾಡಿ ಗೆದ್ದ ಅಪ್ರಾಪ್ತ ಸಂತ್ರಸ್ತೆ

ಬೆಂಗಳೂರು: ರಕ್ಷಕನಾಗ ಬೇಕಿದ್ದ ತಂದೆಯೇ 16 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ್ದು, ಬಾಲಕಿ ತಂದೆ ವಿರುದ್ಧ ಕೇಸ್ ದಾಖಲಿಸಿ ಕಾನೂನು ಹೋರಾಟಕ್ಕೆ ಮುಂದಾಗುತ್ತಿದ್ದಂತೆ ಹೆತ್ತ ತಾಯಿಯೂ ಮಗಳನ್ನು ಬೈದು, ಗದರಿಸಿದ್ದಾರೆ. ಆದರೂ ಧೈರ್ಯಗೆಡದ ಸಂತ್ರಸ್ತ ಬಾಲಕಿ ಕಾಮುಕ ತಂದೆಯ ವಿರುದ್ಧ ಕಾನೂನು ಸಮರ ಸಾರಿ ಒಂಟಿಯಾಗಿ ಹೋರಾಡಿ ನ್ಯಾಯ ದಕ್ಕಿಸಿಕೊಂಡ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಕುಡಿದ ನಶೆಯಲ್ಲಿ ಹೆತ್ತ ತಂದೆ ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದಾನೆ. ತಂದೆಯ ವಿರುದ್ಧವೇ ಕಾನೂನು ಹೋರಾಟ ಮಾಡಿ ಆತನಿಗೆ ಶಿಕ್ಷೆ ಕೊಡಿಸುವಲ್ಲಿ ಅಪ್ರಾಪ್ತೆ ಸಫಲವಾಗಿದ್ದಾಳೆ. 16 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ದಿನಗೂಲಿ ಕಾರ್ಮಿಕನಿಗೆ ನಗರದ ವಿಶೇಷ ನ್ಯಾಯಾಲಯವು 20 ವರ್ಷಗಳ ಸರಳ ಕಾರಾಗೃಹ ಶಿಕ್ಷೆ ವಿಧಿಸಿದೆ.

ಆರೋಪಿ ಬಿಹಾರ ಮೂಲದ ದಿನಗೂಲಿ ಕಾರ್ಮಿಕ. ಪತ್ನಿ ಹಾಗೂ ನಾಲ್ವರು ಮಕ್ಕಳೊಂದಿಗೆ ಉತ್ತರ ಬೆಂಗಳೂರಿನಲ್ಲಿ ವಾಸಿಸುತ್ತಿದ್ದ. ಸಂತ್ರಸ್ತೆ ಆತನ ಹಿರಿಯ ಮಗಳಾಗಿದ್ದು, 9ನೇ ತರಗತಿಯ ಬಳಿಕ ಶಾಲೆ ತೊರೆದಿದ್ದಳು. ತಂದೆ ಮದುವೆಗೆ ಒತ್ತಾಯಿಸುತ್ತಿದ್ದ ಕಾರಣ ಉತ್ತರ ಪ್ರದೇಶದಲ್ಲಿರುವ ಸಂಬಂಧಿಕರ ಮನೆಯಲ್ಲಿ ವಾಸಕ್ಕೆ ತೆರಳಿದ್ದಳು. ಈ ನಡುವೆ 2023ರ ಜೂನ್ 12ರಂದು ಆರೋಪಿಯ ತಾಯಿ ಬಿಹಾರದಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರೆಲ್ಲರೂ ಅಂತ್ಯಕ್ರಿಯೆಗಾಗಿ ಊರಿಗೆ ತೆರಳಿದ್ದರು. ಈ ವೇಳೆ ಮಗಳನ್ನು ಇನ್ನು ಮುಂದೆ ಮದುವೆಗೆ ಒತ್ತಾಯಿಸುವುದಿಲ್ಲ ಎಂದು ಆರೋಪಿ ಭರವಸೆ ನೀಡಿದ್ದ. ಬಳಿಕ ಆತ ಬೆಂಗಳೂರಿಗೆ ಹಿಂದಿರುಗಿದ್ದರೆ, ಮಗಳು ಕೆಲ ದಿನಗಳ ಬಳಿಕ ಬೆಂಗಳೂರಿಗೆ ವಾಪಸ್ ಆಗಿದ್ದಳು.

2023ರ ಜೂನ್ 27ರ ರಾತ್ರಿ ಆರೋಪಿ, ಮದ್ಯದ ಅಮಲಿನಲ್ಲಿದ್ದ ಉತ್ತರ ಪ್ರದೇಶದಲ್ಲಿದ್ದಾಗ ಮಗಳಿಗೆ ಪ್ರೇಮ ಸಂಬಂಧವಿತ್ತು ಎಂಬ ಅನುಮಾನ ವ್ಯಕ್ತಪಡಿಸಿ, ಆಕೆಯನ್ನು ಪರೀಕ್ಷೆ ಮಾಡಬೇಕೆಂಬ ನೆಪದಲ್ಲಿ ಅತ್ಯಾಚಾರ ಎಸಗಿದ್ದ. ರಾತ್ರಿ ವೇಳೆ ಊಟ ತರಲು ಮನೆಬಿಟ್ಟು ಹೊರಗೆ ಹೋದ ಸಂದರ್ಭದಲ್ಲಿ ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಸಮೀಪದ ಉದ್ಯಾನವನದಲ್ಲಿ ರಾತ್ರಿ ಕಳೆದಿದ್ದಳು.

ಮರುದಿನ ಬೆಳಗ್ಗೆ ಆಟೋ ರಿಕ್ಷಾ ಚಾಲಕನೊಬ್ಬನನ್ನು ಕಂಡು ಸಮೀಪದ ಪೊಲೀಸ್ ಠಾಣೆಗೆ ಕರೆದೊಯ್ಯುವಂತೆ ಮನವಿ ಮಾಡಿದ್ದಳು. ಬಳಿಕ ಆಕೆ ಪೊಲೀಸರಿಗೆ ದೂರು ನೀಡಿದ್ದಳು. ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿ ಆರೋಪಿಯನ್ನು ಬಂಧಿಸಿದ್ದರು.

ಬಾಲಕಿಯನ್ನು ರಕ್ಷಣೆಗಾಗಿ ಸರ್ಕಾರಿ ಮಹಿಳಾ ಆಶ್ರಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಪೊಲೀಸರು ತಾಯಿಯನ್ನು ಬೆಂಗಳೂರಿಗೆ ಕರೆಸಿದಾಗ, ಮಗಳಿಗೆ ಬೆಂಬಲ ನೀಡುವ ಬದಲು ತಂದೆಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಕ್ಕೆ ಆಕೆಯನ್ನು ಗದರಿಸಿದ್ದಳು ಎಂದು ತಿಳಿದುಬಂದಿದೆ. ಸಂತ್ರಸ್ತೆ ಮೂರು ವರ್ಷಗಳ ಕಾಲ ಒಬ್ಬಂಟಿಯಾಗಿ ನಿಂತು ಕಾನೂನು ಹೋರಾಟ ನಡೆಸಿದ್ದಳು.

ತಾಯಿ ಕೂಡ ಮಗಲಿಗೆ ಬೆಣ್ಬಲ ನೀಡದೇ ಆರೋಪಿ ಪತಿ ಪರ ನಿಂತಿದ್ದರು. ಅಂತಿಮವಾಗಿ ಸಂತ್ರಸ್ತೆ ಮೂರು ವರ್ಷಗಳ ಕಾನೂನು ಸಮರದ ಬಳಿಕ ಆರೋಪಿ ತಂದೆಗೆ ಶಿಕ್ಷೆ ಕೊಡಿಸಿದ್ದಾಳೆ. ನ್ಯಾಯಾಲಯ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆಯೊಂದಿಗೆ 1.10 ಲಕ್ಷ ರೂ. ದಂಡವನ್ನು ವಿಧಿಸಿದೆ.

2023ರ ಜೂನ್‌ನಲ್ಲಿ ಬಂಧನಕ್ಕೊಳಗಾದ ಆರೋಪಿಯು ಅಂದಿನಿಂದಲೂ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದ. ಪ್ರಸ್ತುತ 19 ವರ್ಷದ ಯುವತಿಯಾಗಿರುವ ಸಂತ್ರಸ್ತೆ ಟೈಲರಿಂಗ್ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಬಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್