LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಬುರುಡೆ ಕೇಸ್: ಪ್ರಕಾಶ್ ರಾಜ್ ವಿರುದ್ಧದ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಬೆಂಗಳೂರು: ಧರ್ಮಸ್ಥಳ ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ, ಮಾಸ್ಕ್​ಮ್ಯಾನ್ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾಗಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯೆ ನೀಡಿದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಚಿನ್ನಯ್ಯನ ಮಾತಿನ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ. ಎಷ್ಟು ಸತ್ಯ ಹೇಳುತ್ತಿದ್ದಾರೆ, ಎಷ್ಟು ಸುಳ್ಳಿದೆ ಗೊತ್ತಿಲ್ಲ ಎಂದಿದ್ದಾರೆ.

ಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ ನ್ಯಾಯಾಲಯದಲ್ಲಿದೆ. ವಿಶೇಷ ತನಿಖಾ ದಳ (ಎಸ್ಐಟಿ)ಗೆ ಕೋರ್ಟ್ ಕೆಲವು ಪ್ರಶ್ನೆಗಳನ್ನು ಕೇಳಿದೆ. ಎಸ್ಐಟಿ ಮುಖ್ಯಸ್ಥರು ಆ ಪ್ರಶ್ನೆಗಳಿಗೆ ನ್ಯಾಯಾಲಯಕ್ಕೆ ಉತ್ತರ ನೀಡುತ್ತಾರೆ. ಅದನ್ನು ನಾವು ಸಾರ್ವಜನಿಕವಾಗಿ ಚರ್ಚೆ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. . ನ್ಯಾಯಾಲಯಕ್ಕೆ ಉತ್ತರ ನೀಡಿದ ಬಳಿಕ ಮಾಹಿತಿ ನೀಡಲಾಗುವುದು ಎಂದರು.

ಮಾಧ್ಯಮಗಳಲ್ಲಿ ಮತ್ತು ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಮಾಹಿತಿ ಪ್ರಕಾರ 200 ಕೋಟಿ ರೂಪಾಯಿಗಳ ಆರೋಪದ ಕುರಿತು ಪ್ರಸ್ತಾಪವಾಗಿದೆ. ಇದು ಸಣ್ಣ ಮೊತ್ತವಲ್ಲ. ಆದರೆ ಅದು ಎಷ್ಟು ನಿಜವೋ ಎಷ್ಟು ಸುಳ್ಳೋ ಗೊತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಅದೇ ವ್ಯಕ್ತಿ (ಚಿನ್ನಯ್ಯ) ಹಿಂದಿನ ಮತ್ತು ಈಗಿನ ಈ ಎಲ್ಲ ಹೇಳಿಕೆಗಳನ್ನು ನೀಡಿರುವುದರಿಂದ, ಅವುಗಳಲ್ಲಿ ಎಷ್ಟು ಸತ್ಯಾಂಶವಿದೆ ಎಂಬುದನ್ನು ಪರಿಶೀಲಿಸುವುದು ಮುಖ್ಯ. ಯಾವುದೇ ಹೆಸರು ಪ್ರಸ್ತಾಪವಾದ ತಕ್ಷಣವೇ ಎಲ್ಲರೂ ಕ್ರಿಮಿನಲ್‌ಗಳಲ್ಲ. ಎಸ್ಐಟಿ ಮುಖ್ಯಸ್ಥರು ಮೊದಲು ನ್ಯಾಯಾಲಯಕ್ಕೆ ಉತ್ತರ ನೀಡಬೇಕು. ಆ ಬಗ್ಗೆ ಮಾಧ್ಯಮದಲ್ಲಿ ಚರ್ಚಿಸುವುದು ಸರಿಯಲ್ಲ ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ