LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪರೂಪದ ಘಟನೆ: ನ್ಯಾಯಾಧೀಶರ ಎದುರಲ್ಲೇ ವಿಚ್ಛೇದನದ ಅರ್ಜಿ ಹರಿದು ಹಾಕಿ ಪತಿಯನ್ನು ತಬ್ಬಿಕೊಂಡ ಪತ್ನಿ: ನಿಬ್ಬೆರಗಾದ ವಕೀಲರು

ನವದೆಹಲಿ: ಕೌಟುಂಬಿಕ ಬಿಕ್ಕಟ್ಟಿನಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಕೊನೇ ಕ್ಷಣದಲ್ಲಿ ಕೋರ್ಟ್ ಆವರಣದಲ್ಲಿ ನ್ಯಾಯಾಧೀಶಮುಂದೆ ಅರ್ಜಿ ಹರಿದುಹಾಕಿ ಒಂದಾದ ಅಪರೂಪದ ಘಟನೆ ನವದೆಹಲಿಯಲ್ಲಿ ನಡೆದಿದೆ.

ಮಾವನ ಅನಾರೋಗ್ಯ ಸಂದರ್ಭದಲ್ಲಿ ಅಳಿಯ ತೋರಿದ ಪ್ರೀತಿ ಮತ್ತು ಕಾಳಜಿಯಿಂದಾಗಿ ಮನಸ್ಸು ಕರಗಿದ್ದು, ದಂಪತಿ ಮತ್ತೆ ಒಂದಾಗಿದ್ದಾರೆ. ನ್ಯಾಯಾಧೀಶರ ಎದುರೇ ಹೆಂಡತಿ ವಿಚ್ಛೇದನ ಪತ್ರಗಳನ್ನು ಹರಿದು ಗಂಡನನ್ನು ಅಪ್ಪಿಕೊಂಡಿದ್ದಾಳೆ. ಹಠ, ಅಹಂಗಿಂತ ಪ್ರೀತಿ ಸಂಬಂಧಗಳನ್ನು ಹೇಗೆ ಗಟ್ಟಿಯಾಗಿಸುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ಪರಸ್ಪರ ತಪ್ಪು ತಿಳಿವಳಿಕೆ, ಮನಸ್ಥಾಪಗಳಿಂದ ಮುರಿದು ಬೀಳುವ ಹಂತ ತಲುಪಿರುವ ಸಂಬಂಧಗಳನ್ನು ಕೇವಲ ಒಂದು ಸಣ್ಣ ಘಟನೆ ಹೇಗೆ ಒಂದು ಮಾಡುತ್ತದೆ ಎಂಬುದಕ್ಕೆ ದೆಹಲಿಯ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದ ಈ ಅಪರೂಪದ ಘಟನೆಯೇ ಸಾಕ್ಷಿಯಗೈದೆ.. ವಿಚ್ಛೇದನ ನೀಡಲು ಕೋರ್ಟ್ ಮೆಟ್ಟಿಲೇರಿದ್ದ ದಂಪತಿ, ನ್ಯಾಯಾಧೀಶರ ಮುಂದೆಯೇ ಪರಸ್ಪರ ಒಂದಾಗಿದ್ದಾರೆ.

2020 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ತಿದ್ದ ದಂಪತಿ ನಡುವೆ, ಮದುವೆಯಾದ ಕೆಲವೇ ದಿನಗಳಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಭುಗಿಲೆದ್ದವು. ಜಗಳ ತಾರಕಕ್ಕೇರಿ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಕಳೆದ ಕೆಲವು ಸಮಯದಿಂದ ಇಬ್ಬರ ನಡುವೆ ತೀವ್ರ ಕಾನೂನು ಹೋರಾಟ ನಡೆಯುತ್ತಿತ್ತು. ಆದರೆ, ಮಗಳ ಸಂಸಾರ ಒಡೆದು ಹೋಗುತ್ತಿರುವುದನ್ನು ಕಂಡು ವಯಸ್ಸಾದ ತಂದೆ ತೀವ್ರವಾಗಿ ಮನನೊಂದು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಮಗಳ ದುಃಖವನ್ನು ಕಂಡು ಆಘಾತಕ್ಕೊಳಗಾಗಿದ್ದ ಅವರು ತೀವ್ರವಾಗಿ ಅಸ್ವಸ್ಥಗೊಂಡು, ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದರು.

ಮಾವನ ಅನಾರೋಗ್ಯ ಮತ್ತು ಇಡೀ ಕುಟುಂಬದ ಕಷ್ಟದ ಪರಿಸ್ಥಿತಿಯ ವಿಷಯ ತಿಳಿದ ತಕ್ಷಣ, ಅಳಿಯ ಕೋರ್ಟ್, ಕೇಸ್ ಮತ್ತು ಎಲ್ಲಾ ದ್ವೇಷಗಳನ್ನು ಸಂಪೂರ್ಣವಾಗಿ ಬದಿಗಿಟ್ಟು ಒಂದು ಕ್ಷಣವೂ ವ್ಯರ್ಥ ಮಾಡದೆ ಆಸ್ಪತ್ರೆಗೆ ಧಾವಿಸಿದ್ದಾರೆ. ಮಗನಂತೆ ಮಾವನ ಆರೈಕೆ ಮಾಡಿದ್ದಾರೆ. ಜವಾಬ್ದಾರಿಯುತ ಮಗನಂತೆ ಮಾವನನ್ನು ನೋಡಿಕೊಂಡಿದ್ದಾರೆ. ಚಿಕಿತ್ಸೆಗೆ ಅಗತ್ಯವಿದ್ದ ಭಾರಿ ಮೊತ್ತದ ಹಣವನ್ನು ತಾನೇ ಸ್ವತಃ ವ್ಯವಸ್ಥೆ ಮಾಡಿದ್ದಲ್ಲದೆ, ಹಗಲಿರುಳು ಆಸ್ಪತ್ರೆಯಲ್ಲೇ ಇದ್ದು ವೈದ್ಯರೊಂದಿಗೆ ಮಾತನಾಡಿ ಮಾವನಿಗೆ ಅತ್ಯುತ್ತಮ ಚಿಕಿತ್ಸೆ ಸಿಗುವಂತೆ ನೋಡಿಕೊಂಡರು.

ವಿಚ್ಛೇದನ ಪಡೆಯಲು ಕೋರ್ಟಿನಲ್ಲಿ ಎದುರಾಳಿಯಾಗಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ತಮ್ಮ ಪಾಲಿನ ದೇವದೂತನಂತೆ ಮಗನಾಗಿ ನಿಂತದ್ದನ್ನು ಕಂಡು ಪತ್ನಿ ಮತ್ತು ಆಕೆಯ ಕುಟುಂಬದ ಮನಸ್ಸು ಕರಗಿದೆ.

ಆಸ್ಪತ್ರೆಯ ಐಸಿಯುನಲ್ಲಿ ಬರೆಯಲಾದ ಈ ಪ್ರೀತಿಯ ಅಧ್ಯಾಯ, ಮರುದಿನ ಕೋರ್ಟ್ ರೂಮಿನಲ್ಲಿ ಒಂದು ಅದ್ಭುತ ದೃಶ್ಯಕ್ಕೆ ಕಾರಣವಾಯಿತು. ಪ್ರಕರಣದ ಮುಂದಿನ ವಿಚಾರಣೆಗಾಗಿ ನ್ಯಾಯಾಧೀಶರ ಮುಂದೆ ಫೈಲ್ ಬಂದಾಗ, ವಕೀಲರು ತಮ್ಮ ವಾದ ಮಂಡಿಸಲು ಸಿದ್ಧರಾಗುತ್ತಿದ್ದಂತೆಯೇ, ಮಹಿಳೆ ಇದ್ದಕ್ಕಿದ್ದಂತೆ ಮುಂದೆ ಬಂದು, ತನ್ನ ಕೈಯಲ್ಲಿದ್ದ ವಿಚ್ಛೇದನ ಅರ್ಜಿ ಪತ್ರಗಳನ್ನು ಎಲ್ಲರ ಮುಂದೆಯೇ ಹರಿದು ಹಾಕಿ, ಕೋರ್ಟ್ ಹಾಲ್ ನಲ್ಲಿದ್ದ ಪತಿಯನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾಳೆ. ಪತಿ ಕೂಡ ಪತ್ನುಯನ್ನು ಸಂತೈಸಿದ್ದಾನೆ. ಈ ಘಟನೆ ಕಂಡು ಇಡೀ ಕೋರ್ಟ್ ಬೆಕ್ಕಸ ಬೆರಗಾಗಿದೆ. ವಿಚ್ಛೇದನದ ಹಂತ ತಲುಪಿದ್ದ ಪತಿ ಪತ್ನಿ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆಯೇ ಒಂದಾಗಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್