LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಾದ್ಯಂತ ಆರಂಭದಲ್ಲೇ ಕೈಕೊಟ್ಟ ಮುಂಗಾರು; ರೈತರನ್ನು ಕಾಡುತ್ತಿರುವ ಎಲ್ ನಿನೋ ಎಂದರೇನು?

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯು ಕೃಷಿ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್ ನಿನೋ!

ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯು ನಿರೀಕ್ಷಿತ ಪ್ರಮಾಣಕ್ಕಿಂತ ಕೊಂಚ ಕಡಿಮೆಯಾಗುವ ಸಾಧ್ಯತೆಯಿದೆ.

ಜೂನ್ ತಿಂಗಳಲ್ಲಿ ಮಳೆಯ ಪ್ರಮಾಣ ತಗ್ಗಲು ಎಲ್ ನಿನೋ ಪ್ರಭಾವವೇ ಮುಖ್ಯ ಕಾರಣ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದು ಮುಂಗಾರಿನ ಮೇಲೆ ನಕಾರಾತಕ ಪರಿಣಾಮ ಬೀರಿದ್ದು, ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅದರಲ್ಲೂ ಮುಖ್ಯವಾಗಿ ರೈತರಿಗೆ ಮುಂಗಾರು ಕೈಕೊಟ್ಟಿರುವುದರಿಂದ ಬೆಳೆ ಬಗ್ಗೆ ಚಿಂತೆ ಹೆಚ್ಚಾಗಿದೆ.

ಆರಂಭದಲ್ಲಿ ಮಳೆ ಬಾರದಿರುವುದರಿಂದ ರೈತರು ಬಿತ್ತನೆ ಮಾಡಲು ಸಾಧ್ಯವಾಗದೆ ಸಂಕಷ್ಟಕ್ಕಿ?ಡಾಗಿದ್ದಾರೆ. ಬೆಳೆ ಚಕ್ರವು ತಪ್ಪಿಹೋಗಿದ್ದು, ಭವಿಷ್ಯದ ಇಳುವರಿಯ ಮೇಲೆ ನೇರ ಪರಿಣಾಮ ಬೀರಲಿದೆ. ಮಳೆಯ ಕೊರತೆಯಿಂದ ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದೆ. ಇದು ಕೇವಲ ಕೃಷಿಗೆ ಮಾತ್ರವಲ್ಲದೆ, ಕುಡಿಯುವ ನೀರಿಗೂ ಭವಿಷ್ಯದಲ್ಲಿ ತೊಂದರೆ ಉಂಟುಮಾಡುವ ಸಾಧ್ಯತೆಯಿದೆ.

ಈಗಾಗಲೇ ಬೀಜ, ರಸಗೊಬ್ಬರ ಮತ್ತು ಉಳುಮೆಗೆ ಹಣ ಹೂಡಿರುವ ರೈತರು, ಮಳೆಯಿಲ್ಲದೆ ಬೆಳೆ ಬಾರದಿದ್ದರೆ ಸಾಲದ ಸುಳಿಗೆ ಸಿಲುಕುವ ಭೀತಿಯಲ್ಲಿದ್ದಾರೆ. ಮೇವು ಮತ್ತು ನೀರಿನ ಲಭ್ಯತೆಯು ಕಡಿಮೆಯಾಗುತ್ತಿರುವುದರಿಂದ ಪಶುಪಾಲನೆ ಮಾಡುತ್ತಿರುವ ರೈತರು ತಮ ಜಾನುವಾರುಗಳನ್ನು ನಿರ್ವಹಿಸುವುದು ಕಷ್ಟಕರವಾಗಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುತ್ತಿದ್ದರೆ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಅನಿಶ್ಚಿತವಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿ ಮತ್ತು ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಹವಾಮಾನ ಇಲಾಖೆಯು ಈ ವರ್ಷದ ಒಟ್ಟಾರೆ ಮಳೆಯ ಪ್ರಮಾಣವನ್ನು ದೀರ್ಘಾವಧಿ ಸರಾಸರಿಯ ಶೇ. 90ಕ್ಕೆ ಪರಿಷ್ಕರಿಸಿದೆ. ಮಳೆ ಕೊರತೆಯು ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ವ್ಯಕ್ತವಾಗಿದೆ.

ಎಲ್ ನೀನೋ ಎನ್ನುವುದು ಸಮುದ್ರ ಮತ್ತು ವಾತಾವರಣದಲ್ಲಿ ಆಗುವ ಒಂದು ವಿಶೇಷ ನೈಸರ್ಗಿಕ ಹವಾಮಾನ ವ್ಯವಸ್ಥೆ. ಸಾಮಾನ್ಯವಾಗಿ ಪ್ರತಿ 4 ವರ್ಷಗಳಿಗೊಮೆ ಇದು ಉಂಟಾಗುತ್ತದೆ. ಈ ಪರಿಣಾಮವಾಗಿ ಈ ಬಾರಿ ಮುಂಗಾರು ಕ್ಷೀಣಿಸುತ್ತಿದೆ ಎಂದು ಹೇಳಲಾಗಿದೆ. ಸಮುದ್ರದ ಮೇಲೆ ಉಷ್ಣಾಂಶ ಅತಿಯಾಗಿ ಹೆಚ್ಚಾದಾಗ ಎಲ್ ನೀನೋ ಸ್ಥಿತಿ ನಿರ್ಮಾಣವಾಗುತ್ತದೆ. ಉಷ್ಣಾಂಶ ಹೆಚ್ಚಾದಾಗ ಮೋಡಗಳ ರಚನೆ, ಗಾಳಿ ಸಂಚಾರ, ಮಳೆಯ ವಿತರಣೆಯಲ್ಲಿ ಬದಲಾವಣೆಗಳು ಸಂಭವಿಸುತ್ತವೆ. ಅದರ ಪರಿಣಾಮವಾಗಿ ನಮ ರಾಜ್ಯದ ಮೇಲೆ ಬೀಳಬೇಕಾದ ಮುಂಗಾರು ಮಳೆ ಕಡಿಮೆಯಾಗುತ್ತದೆ. ಹೀಗಾಗಿ ಈ ವರ್ಷ ಮುಂಗಾರು ಕ್ಷೀಣಿಸುತ್ತಿದೆ ಎಂದು ತಜ್ಞರು ಹೇಳಿದ್ದಾರೆ.

ಈ ವರ್ಷ ಫೇರ್ ಕಾಸ್ಟ್‌ಗಳ ಅನ್ವಯ ಮುಂಗಾರು ಮಳೆ ಶೇ.08 ರಿಂದ 10 ರಷ್ಟು ಕ್ಷೀಣಿಸಿದೆ. ಸಂಖ್ಯೆಯಲ್ಲಿ ಇದು ಕಡಿಮೆ ಎಂದು ತೋರಿದರೂ, ಕೃಷಿಗೆ ಇದು ದೊಡ್ಡ ಹೊಡೆತವಾಗಬಹುದು. ಕರ್ನಾಟಕದ ಬಹುಪಾಲು ರೈತರು ಮಳೆಆಧಾರಿತ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಮಳೆ ಕಡಿಮೆಯಾದರೆ ಬಿತ್ತನೆ ವಿಳಂಬವಾಗುವುದು, ಬೆಳೆಯ ಬೆಳವಣಿಗೆ ಕುಂಠಿತವಾಗುವುದು, ಕೊಯ್ಲಿನ ಪ್ರಮಾಣ ಕಡಿಮೆಯಾಗುವುದು ಸಹಜ.

ಮುಂಗಾರು ಕ್ಷೀಣಿಸಿದ್ದು ಕೇವಲ ಮಳೆಯ ಪ್ರಮಾಣಕ್ಕೆ ಮಾತ್ರ ಸೀಮಿತವಲ್ಲ, ಮಳೆಯ ಹಂಚಿಕೆ, ಕಾಲಮಾನದ ವ್ಯತ್ಯಾಸವೂ ಹೆಚ್ಚಾಗಿದೆ. ಕೆಲವೊಮ್ಮೆ ಒಂದೇ ಸಾರಿ ಜೋರಾಗಿ ಸುರಿದು, ನಂತರ ದೀರ್ಘಕಾಲ ಒಣಹವಾಮಾನ ಮುಂದುವರಿಯುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಹೆಚ್ಚು ಅವಧಿಯ ಬೆಳೆಗಳಿಗೆ (ಉದಾಹರಣೆಗೆ ಹೆಚ್ಚು ನೀರು ಬೇಕಾಗುವ ಬೆಳೆಗಳು) ಹಾನಿಯಾಗಬಹುದು.ಇದನ್ನೆಲ್ಲ ಪರಿಗಣಿಸಿ, ತಜ್ಞರು ರೈತರಿಗೆ ತಮ್ಮ ಕೃಷಿ ಪದ್ಧತಿಯಲ್ಲಿ ಕೆಲವು ಬದಲಾವಣೆಗಳನ್ನು ತರಲು ಸಲಹೆ ನೀಡಿದ್ದಾರೆ.

ಮೊದಲು, ಕಡಿಮೆ ಅವಧಿಯಲ್ಲಿ ಬೆಳೆ ಕೊಡುವ ಪೈರುಗಳನ್ನು ಆಯ್ಕೆ ಮಾಡಬೇಕು. ಅಂದರೆ, ಬಿತ್ತನೆ ಮಾಡಿದ ಮೇಲೆ ಬೇಗನೆ ಕೊಯ್ಲಿಗೆ ಬರುತ್ತಿರುವ, ಕಡಿಮೆ ದಿನಗಳಲ್ಲಿ ಬೆಳೆಯುವ ಬೆಳೆಗಳನ್ನು ಬೆಳೆಸುವುದು ಸುರಕ್ಷಿತ. ಇಂತಹ ಬೆಳೆಗಳು ಮಳೆಯ ಅನಿಶ್ಚಿತತೆ ಇದ್ದರೂ ಕೆಲವು ಮಟ್ಟಿಗೆ ರಕ್ಷಣೆ ನೀಡುತ್ತವೆ.

ಕಡಿಮೆ ಪ್ರಮಾಣದ ನೀರು ಬಳಕೆ ಮಾಡುವ ಬೆಳೆಗಳಿಗೆ ಆದ್ಯತೆ ನೀಡುವುದು. ಅಂದರೆ, ನೀರಿನ ಅವಶ್ಯಕತೆ ಕಡಿಮೆ ಇರುವ ದಾಳಿಂಬೆ, ತೆನೆ, ಜೋಳ, ಕೆಲವು ಬಗೆಯ ದಾಳಿಂಬೆ ಪೈರುಗಳು, ಎಣ್ಣೆ ಬೇಳೆ ತರದ ಬೆಳೆಗಳನ್ನು ಆಯ್ಕೆಮಾಡಬಹುದು. ಇವು ಮಳೆ ಕಡಿಮೆಯಾದರೂ, ಭೂಮಿ ತೇವಾಂಶವನ್ನು ಸಮರ್ಥವಾಗಿ ಬಳಸಿಕೊಂಡು ಬೆಳೆಯುವ ಸಾಮರ್ಥ್ಯ ಹೊಂದಿರುತ್ತವೆ.

ಎಲ್ ನಿನೋ ಎಂದರೆ ಪೆಸಿಫಿಕ್ ಸಾಗರದ ಸಮಭಾಜಕ ವಲಯದ ಸಮುದ್ರದ ಮೇಲೆ ನೀರು ಅಸಹಜವಾಗಿ ಬಿಸಿಯಾಗುವ ಪ್ರಕ್ರಿಯೆ. ಇದು ಜಾಗತಿಕ ಹವಾಮಾನ ಮಾದರಿಗಳ ಮೇಲೆ ದೊಡ್ಡ ಮಟ್ಟದ ಬದಲಾವಣೆಗಳನ್ನು ಉಂಟು ಮಾಡುತ್ತದೆ. ಭಾರತದ ಮಟ್ಟಿಗೆ ಹೇಳುವುದಾದರೆ, ಎಲ್ ನಿನೋ ಸಕ್ರಿಯವಾಗಿದ್ದಾಗ ಮುಂಗಾರು ಮಳೆಯ ಪ್ರಮಾಣ ಕಡಿಮೆಯಾಗುವ ಅಥವಾ ಮಳೆಯ ಹಂಚಿಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್