LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಮತ್ತೊಂದು ಅವಾಂತರ: ಏರ್ ಪೋರ್ಟ್ ರಸ್ತೆಯಲ್ಲಿ ಕಾರ್ ರೇಸಿಂಗ್ ಮಾಡಿ ಪುಂಡಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳುರಿನ ರಸ್ತೆಗಳಲ್ಲಿ ಮಾಜಿ ಡಾನ್ ದಿ.ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮತ್ತೆ ಐಷಾರಾಮಿ ಲ್ಯಾಂಬೋರ್ಗಿನಿ ಕಾರ್ ರೇಸ್ ಮಾಡಿ ಪುಂಡಾಟ ಮೆರೆದಿದ್ದಾರೆ.

ರಿಕ್ಕಿ ರೈ ಒಡೆತನದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಏರ್ ಪೋರ್ಟ್ ರಸ್ತೆಯಲ್ಲಿ ಭಾರಿ ಸದ್ದು ಮಾಡಿದೆ. ಕೆಲವು ತಿಂಗಳುಗಳ ಹಿಂದಷ್ಟೇ ನಗರದ ಹೃದಯಭಾಗದಲ್ಲಿ ರೇಸಿಂಗ್ ಸ್ಟಂಟ್ (ಡ್ರಿಫ್ಟಿಂಗ್) ಮಾಡಿ ಸಿಕ್ಕಿಬಿದ್ದಿದ್ದ ಇದೇ ಕಾರು, ಇದೀಗ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅತಿವೇಗದ ಚಾಲನೆ ಮತ್ತು ಕರ್ಕಶ ಶಬ್ದದ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿ ಮತ್ತೊಂದು ವಿವಾದವನ್ನು ಸೃಷ್ಟಿಸಿದೆ.

ರಿಕ್ಕಿ ರೈ ಅವರಿಗೆ ಸೇರಿದ KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಏರ್ಪೋರ್ಟ್ ರಸ್ತೆಯಲ್ಲಿ ಅತ್ಯಂತ ಅಪಾಯಕಾರಿ ಹಾಗೂ ಅತಿ ವೇಗವಾಗಿ ಚಾಲನೆ ಮಾಡಲಾಗಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಕಾರಿನ ಸೈಲೆನ್ಸರ್ ಅನ್ನು ಮಾಡಿಫೈ ಮಾಡಿರುವುದು ಸ್ಪಷ್ಟವಾಗಿ ಕಾಣಿಸುತ್ತಿದ್ದು, ಕಾರು ವೇಗವಾಗಿ ಚಲಿಸುವಾಗ ಸೈಲೆನ್ಸರ್‌ನಿಂದ ಕರ್ಕಶ ಶಬ್ದದೊಂದಿಗೆ ಬೆಂಕಿ ಉಗುಳುವ ದೃಶ್ಯಗಳು ಸೆರೆಯಾಗಿವೆ. ಈ ಪುಂಡಾಟದ ವೀಡಿಯೋ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೋವನ್ನು ಆಧರಿಸಿ ಸಂಚಾರಿ ಪೊಲೀಸರು ಮತ್ತು ಕಾನೂನು ಸುವ್ಯವಸ್ಥೆ ಪೊಲೀಸರು ಜಂಟಿ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಘಟನೆ ನಿಖರವಾಗಿ ಯಾವಾಗ ನಡೆದಿದೆ? ಆ ಸಮಯದಲ್ಲಿ ಕಾರಿನೊಳಗೆ ಯಾರ್ಯಾರು ಇದ್ದರು? ಕಾರನ್ನು ಸ್ವತಃ ರಿಕ್ಕಿ ರೈ ಚಲಾಯಿಸುತ್ತಿದ್ದರೇ ಅಥವಾ ಅವರ ಡ್ರೈವರ್ ಚಲಾಯಿಸುತ್ತಿದ್ದರೇ? ಎಂಬಿತ್ಯಾದಿ ಮಾಹಿತಿಗಳನ್ನು ಕಲೆಹಾಕಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರಾಥಮಿಕ ತನಿಖೆ ನಡೆಸಿ, ಶೀಘ್ರದಲ್ಲೇ ಅತಿವೇಗದ ಚಾಲನೆ ಹಾಗೂ ಸೈಲೆನ್ಸರ್ ಮಾರ್ಪಾಡು ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಮತ್ತು ಪೊಲೀಸ್ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಇದೇ ಕಾರು ಮಾರ್ಚ್ 21 ರಂದು ಬೆಂಗಳೂರಿನ ಕುಂಬ್ಳೆ ಸರ್ಕಲ್ ಹಾಗೂ ಕಬ್ಬನ್ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ಕಾರ್ ಡ್ರೈವಿಂಗ್ ಮಾಡಿ ‘ಡ್ರಿಫ್ಟಿಂಗ್’ ಪ್ರಕರಣದಲ್ಲಿ ಸಿಲುಕಿತ್ತು. ಘಟನೆ ನಡೆದ ಆರಂಭದಲ್ಲಿ ಅಲ್ಲಿ ಇದ್ದದ್ದು ನಾನಲ್ಲ ಎಂದು ರಿಕ್ಕಿ ರೈ ವಾದಿಸಿದ್ದರು. ಆದರೆ ಕಬ್ಬನ್ ಪಾರ್ಕ್ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ರಿಕ್ಕಿ ರೈ ಅವರೇ ಕಾರು ಓಡಿಸುತ್ತಿರುವುದು ಪತ್ತೆಯಾಗಿ ಎಫ್‌ಐಆರ್ ದಾಖಲಾಗಿತ್ತು.

ಆ ಸಮಯದಲ್ಲಿ ರಿಕ್ಕಿ ರೈ ಪರ ವಕೀಲರು, ರಸ್ತೆ ಸರಿಯಿರಲಿಲ್ಲ, ಹಾಗಾಗಿ ಕಾರು ಸ್ಕಿಡ್ ಆಗಿದೆ. ಈ ವೇಳೆ ನಮ್ಮ ಕಕ್ಷಿದಾರರು ತಮ್ಮ ಚಾಲನಾ ನೈಪುಣ್ಯತೆ ಮೆರೆದು ಅಪಘಾತ ತಪ್ಪಿಸಿದ್ದಾರೆ ಎಂದು ಕೋರ್ಟ್‌ನಲ್ಲಿ ವಾದಿಸಿದ್ದು ಭಾರಿ ಅಪಹಾಸ್ಯ ಹಾಗೂ ಟ್ರೋಲ್‌ಗೆ ಒಳಗಾಗಿತ್ತು. ನಂತರ ತಪ್ಪು ಒಪ್ಪಿಕೊಂಡು ಕೋರ್ಟ್ ಮುಂದೆ ದಂಡ ಕಟ್ಟಿದ್ದ ರಿಕ್ಕಿ ರೈ, ಈಗ ಮತ್ತೊಮ್ಮೆ ಅದೇ ಕಾರಿನೊಂದಿಗೆ ಸಂಚಾರ ನಿಯಮ ಉಲ್ಲಂಘಿಸಿ ಪುಂಡಾಟ ಮೆರೆದಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ