LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಜಬ್ ಪ್ರೇಮ್ ಕಿ ಗಜಬ್ ಕಹಾನಿ ಶೂಟಿಂಗ್ ವೇಳೆ ರಣಬೀರ್ ಕತ್ರಿನಾ ಮಧ್ಯೆ ಪ್ರೀತಿ ಇರಲಿಲ್ಲವೇ:ಅಸಲಿ ಸತ್ಯ ಬಿಚ್ಚಿಟ್ಟ ಸಹ ನಟ ವಿಶ್ವನಾಥ್

ಬಾಲಿವುಡ್ ಅಂಗಳದ ಒಂದು ಕಾಲದ ಬಹುಚರ್ಚಿತ ಜೋಡಿ ಎಂದರೆ ರಣಬೀರ್ ಕಪೂರ್ ಮತ್ತು ಕತ್ರಿನಾ ಕೈಫ್. ಇವರಿಬ್ಬರ ಪ್ರೀತಿ ಶುರುವಾಗಿದ್ದು ‘ಅಜಬ್ ಪ್ರೇಮ್ ಕಿ ಗಜಬ್ ಕಹಾನಿ’ ಚಿತ್ರದ ಸೆಟ್ ನಿಂದಲೇ ಎಂಬ ಮಾತುಗಳು ಬಿಟೌನ್ ನಲ್ಲಿ ದಟ್ಟವಾಗಿವೆ. ಆದರೆ ಈ ಬಗ್ಗೆ ಚಿತ್ರದಲ್ಲಿ ನಟಿಸಿದ್ದ ಸಹ ನಟ ವಿಶ್ವನಾಥ್ ಇತ್ತೀಚಿನ ಸಂದರ್ಶನವೊಂದರಲ್ಲಿ ಕೆಲವೊಂದು ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ಸಿದ್ಧಾರ್ಥ್ ಕಣ್ಣನ್ ಅವರ ಪಾಡ್‌ಕಾಸ್ಟ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟ ವಿಶ್ವನಾಥ್ ಅವರಿಗೆ, ರಣಬೀರ್ ಹಾಗೂ ಕತ್ರಿನಾ ಪ್ರೀತಿ ನಿಜಕ್ಕೂ ಆ ಸೆಟ್ ನಲ್ಲೇ ಶುರುವಾಗಿತ್ತಾ ಮತ್ತು ನೀವು ಅಲ್ಲಿ ಏನನ್ನು ಗಮನಿಸಿದ್ದಿರಿ ಎಂಬ ಪ್ರಶ್ನೆ ಎದುರಾಯಿತು.

ಇದಕ್ಕೆ ನಗುತ್ತಲೇ ಉತ್ತರಿಸಿದ ವಿಶ್ವನಾಥ್, ಸಿನಿಮಾ ಸೆಟ್ ನಲ್ಲಿ ಅಂತಹ ಯಾವುದೇ ಘಟನೆಗಳು ನಡೆಯುತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚಿತ್ರದ ನಿರ್ದೇಶಕ ರಾಜಕುಮಾರ್ ಸಂತೋಷಿ ಅವರು ಸೆಟ್ ನಲ್ಲಿ ಇರುವಾಗ ಯಾರೂ ಕೂಡ ಇಂತಹ ವಿಷಯಗಳಿಗೆ ಆಸ್ಪದ ನೀಡುತ್ತಿರಲಿಲ್ಲ. ಅವರ ಮುಂದೆ ಎಲ್ಲರೂ ಶಿಸ್ತಿನ ಸಿಪಾಯಿಗಳಂತೆ ಇರುತ್ತಿದ್ದರು. ರಾಜಕುಮಾರ್ ಸಂತೋಷಿ ಅವರು ಸಿಂಹದ ತರಹ, ಅವರು ಕಲಾವಿದರನ್ನು ಕಥೆ ಮತ್ತು ಪಾತ್ರಗಳಲ್ಲಿ ಸಂಪೂರ್ಣವಾಗಿ ಮುಳುಗುವಂತೆ ಮಾಡುತ್ತಿದ್ದರು. ಹಾಗಾಗಿ ನಮಗೆ ಅಲ್ಲಿ ಅಂತಹ ಯಾವುದೇ ಪ್ರೇಮ ಪ್ರಕರಣಗಳು ಕಾಣಿಸಲಿಲ್ಲ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ನಟಿ ಕತ್ರಿನಾ ಕೈಫ್ ಅವರ ಶಿಸ್ತು ಮತ್ತು ಕಠಿಣ ಪರಿಶ್ರಮವನ್ನು ವಿಶ್ವನಾಥ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಕತ್ರಿನಾ ಅವರ ದೈಹಿಕ ಫಿಟ್ನೆಸ್ ಮತ್ತು ಸಿನಿಮಾ ಮೇಲಿರುವ ಸಮರ್ಪಣಾ ಭಾವವನ್ನು ಕಂಡು ರಣಬೀರ್ ಕಪೂರ್ ಸೇರಿದಂತೆ ಸೆಟ್ ನಲ್ಲಿದ್ದ ನಾವೆಲ್ಲರೂ ಆಶ್ಚರ್ಯಚಕಿತರಾಗಿದ್ದೆವು. ದೋಣಿಯಿಂದ ಏಣಿಯ ಮೂಲಕ ಸೇತುವೆಯನ್ನು ಹತ್ತುವ ಒಂದು ದೃಶ್ಯವಿತ್ತು, ಕತ್ರಿನಾ ಅದನ್ನು ಅತ್ಯಂತ ವೇಗವಾಗಿ ಹತ್ತಿ ಮುಗಿಸಿದರು. ಅಷ್ಟೇ ಅಲ್ಲದೆ ಚಿತ್ರದ ಸಂಭಾಷಣೆಗಳಿಗಾಗಿಯೂ ಅವರು ಸಾಕಷ್ಟು ಹೋರಾಟ ನಡೆಸಿ ಸೈ ಎನಿಸಿಕೊಂಡಿದ್ದರು. ಚಿತ್ರತಂಡದಲ್ಲಿ ಅತ್ಯಂತ ಹೆಚ್ಚು ಶ್ರದ್ಧೆ ಹೊಂದಿದ್ದ ನಟಿ ಎಂದರೆ ಅದು ಕತ್ರಿನಾ ಮಾತ್ರ ಎಂದು ಅವರು ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಅಂದಹಾಗೆ, ರಣಬೀರ್ ಕಪೂರ್ ಮತ್ತು ಕತ್ರಿನಾ ಕೈಫ್ ಈ ಚಿತ್ರದ ಬಳಿಕ ರಾಜನೀತಿ ಹಾಗೂ ಜಗ್ಗಾ ಜಾಸೂಸ್ ಸಿನಿಮಾಗಳಲ್ಲೂ ಒಟ್ಟಿಗೆ ನಟಿಸಿದ್ದರು. ಸುಮಾರು ಆರು ವರ್ಷಗಳ ಕಾಲ ರಿಲೇಶನ್‌ಶಿಪ್‌ನಲ್ಲಿದ್ದ ಈ ಜೋಡಿ 2016 ರ ಸುಮಾರಿಗೆ ಬ್ರೇಕಪ್ ಮಾಡಿಕೊಂಡಿತು. ಸದ್ಯ ಕತ್ರಿನಾ ಕೈಫ್ ಅವರು ನಟ ವಿಕ್ಕಿ ಕೌಶಲ್ ಅವರನ್ನು ವಿವಾಹವಾಗಿದ್ದರೆ, ರಣಬೀರ್ ಕಪೂರ್ ಅವರು ಆಲಿಯಾ ಭಟ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್