LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಟ್ಟ ಸಾಲ ವಾಪಸ್ ಬರದೇ ಪರದಾಟ: ಕಾಲೇಜು ಶುಲ್ಕ ಪಾವತಿಸಲಾಗದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಕಾರವಾರ: ಪರಿಚಿತರೊಬ್ಬರಿಗೆ ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ.

ಕಾಲೇಜು ಶುಲ್ಕ ಕಟ್ಟಲು ತಂದೆ ನೀಡಿದ್ದ 10 ಸಾವಿರ ರೂಪಾಯಿ ಹಣವನ್ನು ಯುವತಿ ಪರಿಚಯಸ್ಥರಿಗೆ ಸಾಲವಾಗಿ ನೀಡಿದ್ದಳು. ಆ ಹಣ ಮರಳಿ ಸಿಗದ ಕಾರಣ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಭಟ್ಕಳದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಕಾಲೇಜು ಶುಲ್ಕ ಪಾವತಿಸಲು ತಂದೆ ನಾಗರಾಜ ಲಚ್ಚಯ್ಯ ನಾಯ್ಕ ಮಗಳು ಗಾಯತ್ರಿಗೆ 10 ಸಾವಿರ ರೂಪಾಯಿ ನೀಡಿದ್ದರು. ಇದೇ ವೇಳೆ ಊರಿನ ಪರಿಚಯಸ್ಥ ಸಂತೋಷ ಮಾಧೇವ ನಾಯ್ಕ ಎಂಬಾತ ನಿಗದಿತ ಸಮಯಕ್ಕೆ ಮರಳಿ ನೀಡುವುದಾಗಿ ಹೇಳಿ ಆಕೆಯಿಂದ 10 ಸಾವಿರ ರೂಪಾಯಿ ಸಾಲ ಪಡೆದಿದ್ದ.

ಸಾಲವಾಗಿ ಪಡೆದ ಹಣವನ್ನು ಆತ ನಿಗದಿತ ಸಮಯ ಕಳೆದರೂ ಮರಳಿ ನೀಡಿರಲಿಲ್ಲ. ಇದರಿಂದ ಗಾಯತ್ರಿಗೆ ಕಾಲೇಜು ಶುಲ್ಕ ಪಾವತಿಸಲು ಹಣವಿಲ್ಲದೇ ಪರದಡಿದ್ದಾಳೆ. ಶುಲ್ಕ ಕಟ್ಟದ ಕಾರಣ ಪರೀಕ್ಷೆಯ ಹಾಲ್‌ಟಿಕೆಟ್ ಕೂಡ ದೊರೆತಿರಲಿಲ್ಲ. ಇದರಿಂದ ಮನನೊಂದ ಗಾಯತ್ರಿ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ