LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಚೇರಿಗಳಲ್ಲಿ ಅಧಿಕಾರಿಗಳ ದೂರವಾಣಿ ಸಂಖ್ಯೆ ಪ್ರದರ್ಶನ ಕಡ್ಡಾಯ: ಒಂದೇ ಜಾತಿಯವರು ಇರುವಂತಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಿಸ್ತಿನ ಪಾಠ ಮಾಡಿದ್ದಾರೆ.

ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ಎಲ್ಲಾ ಅಧಿಕಾರಿಗಳು ಬೆಳಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು. ಜಿಲ್ಲಾ ಕೇಂದ್ರ ಕಚೇರಿಗೆ ಹಾಜರಾಗಿರುವ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಂಬಂಧಿಸಿದ ಇಲಾಖೆ ಆಡಳಿತ ಅಧಿಕಾರಿಗೆ ಸಂದೇಶ ಹೋಗಬೇಕು. ಜೊತೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ತಹಶೀಲ್ದಾರ್, ಕಂದಾಯ ಪರಿವೀಕ್ಷಕರು ಸೇರಿದಂತೆ ಎಲ್ಲಾ ಸರ್ಕಾರಿ ಅಧಿಕಾರಿಗಳ ವಿಳಾಸ ಹಾಗೂ ದೂರವಾಣಿ ಸಂಖ್ಯೆ ಅವರವರ ಕಚೇರಿ ಮತ್ತು ಸಂಬಂಧಿಸಿದ ವೆಬ್ಸೈಟ್ ಗಳಲ್ಲಿ ಲಭ್ಯವಿರಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

ಒಂದೇ ಜಿಲ್ಲೆ ಅಥವಾ ಕಚೇರಿಗಳಲ್ಲಿನ ವಿವಿಧ ಹುದ್ದೆಗಳಲ್ಲಿ ಒಂದೇ ಜಾತಿಯ ಅಧಿಕಾರಿಗಳು ಇರುವಂತಿಲ್ಲ. ಅಧಿಕಾರಿಗಳಲ್ಲಿಯೂ ಸಾಮಾಜಿಕ ನ್ಯಾಯ ಇರಬೇಕು. ಬೇರೆಬೇರೆ ಜಾತಿ, ಧರ್ಮದವರು ಇರಬೇಕು. ಅಧಿಕಾರಿಗಳ ಹಂತದಲ್ಲಿ ಜಾತಿ ಲಾಬಿ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಪ್ರತಿ ತಾಲೂಕಿನಲ್ಲಿಯೂ ಸಚಿವರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆ ನಡೆಸಬೇಕು. ಪ್ರತಿ ಹೋಬಳಿ ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆ ನಡೆಸಬೇಕು. ಸ್ಥಳೀಯ ಮಟ್ಟದಲ್ಲಿಯೇ ಜನರ ಸಮಸ್ಯೆ ಬಗೆಹರಿಯಬೇಕು. ಮುಖ್ಯಮಂತ್ರಿಗಳ ಕಚೇರಿಯವರೆಗೂ ದೂರುಗಳು ಬರಬಾರದು. ಪ್ರತಿ ಜಿಲ್ಲೆಗೂ ಪ್ರವಾಸ ಮಾಡಿ ಪರಿಶೀಲಿಸುತ್ತೇನೆ ಎಂದು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ALERT : ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ಬಳಸಲು ನೀಡಿದರೆ ಜೈಲು ಶಿಕ್ಷೆ ಫಿಕ್ಸ್ ; RBI ಎಚ್ಚರಿಕೆBREAKING: ತಡರಾತ್ರಿ ತೆಲಂಗಾಣದಲ್ಲಿ ಭೂಕಂಪ: ಭಯಭೀತರಾಗಿ ಮನೆಯಿಂದ ಓಡಿ ಬಂದು ಹೊರಗೇ ಕಾಲಕಳೆದ ಜನ‘ವಾಟ್ಸಾಪ್’ ನಲ್ಲಿ ಮೊಬೈಲ್ ಸಂಖ್ಯೆ ಕಾಣಿಸದೇ ಇತರರೊಂದಿಗೆ ಚಾಟ್ ಮಾಡಬಹುದು.. ಹೇಗೆ ಗೊತ್ತೇ ?ಕಚೇರಿಗಳಲ್ಲಿ ಅಧಿಕಾರಿಗಳ ದೂರವಾಣಿ ಸಂಖ್ಯೆ ಪ್ರದರ್ಶನ ಕಡ್ಡಾಯ: ಒಂದೇ ಜಾತಿಯವರು ಇರುವಂತಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆ