LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಾಹಿತೆಗೆ ಅಸಭ್ಯ ಮೆಸೇಜ್ ಮಾಡಿ ಕಿರುಕುಳ: ಯುವಕನ ಹತ್ಯೆಗೈದು ಶವಕ್ಕೆ ಬೆಂಕಿ

ಬಳ್ಳಾರಿ: ಸಂಬಂಧಿಯಾಗಿರುವ ವಿವಾಹಿತೆಗೆ ಜಾಲತಾಣದಲ್ಲಿ ಅಸಭ್ಯ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಸಂಚು ರೂಪಿಸಿ ಕೊಲೆ ಮಾಡಿ ಮೃತದೇಹವನ್ನು ಸುಟ್ಟು ಹಾಕಿದ ಘಟನೆ ಬಳ್ಳಾರಿಯ ಮೋಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಳ್ಳಾರಿಯ ಬಸವನಗೌಡ ಪಾಟೀಲ್(26) ಕೊಲೆಯಾದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಸಂಬಂಧಿ ಶ್ವೇತಾ, ಆಕೆಯ ಪತಿ ದೊಡ್ಡಬಸವನಗೌಡ ಮತ್ತು ಸಹೋದರ ವಿಜಯ್ ಎಂಬವರನ್ನು ಮೋಕಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿಯ ವೈದ್ಯಕೀಯ ಲ್ಯಾಬ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಬಸವನಗೌಡ ಪಾಟೀಲ್ ತನ್ನ ಸಹೋದರನ ಪತ್ನಿಯ ಸಹೋದರಿಯಾದ ಶ್ವೇತಾಗೆ ಹಲವು ತಿಂಗಳುಗಳಿಂದ ಅಸಭ್ಯ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳದಿಂದ ಬೇಸತ್ತ ಶ್ವೇತಾ ಪತಿಗೆ ವಿಷಯ ತಿಳಿಸಿದ್ದರು.

ನಂತರ ಬಸನಗೌಡನ ವಿಕೃತಿಗೆ ಅಂತ್ಯ ಹಾಡಲು ನಿರ್ಧರಿಸಿದ ಮೂವರು ಸಂಚು ರೂಪಿಸಿ ಆತನನ್ನು ಕರೆ ಮಾಡಿ ಕರೆಸಿಕೊಂಡಿದ್ದಾರೆ. ಕೊಲೆ ಮಾಡಿ 10 ಕಿಲೋಮೀಟರ್ ದೂರದಲ್ಲಿ ಮೃತದೇಹ ಸುಟ್ಟು ಹಾಕಿದ್ದಾರೆ ಎನ್ನಲಾಗಿದೆ. ತನಿಖೆ ಕೈಗೊಂಡ ಪೊಲೀಸರು ಮೃತನ ಮೊಬೈಲ್ ಕರೆ ಮತ್ತು ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿದಾಗ ಕೊಲೆ ವಿಚಾರ ಬೆಳಕಿಗೆ ಬಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಗುಡ್ ನ್ಯೂಸ್: ಸತತ 2ನೇ ದಿನವೂ ಇಳಿಕೆಯಾದ ಚಿನ್ನದ ಬೆಲೆ ಇಂದಿನ ಲೇಟೆಸ್ಟ್ ದರ ವಿವರ ಇಲ್ಲಿದೆಮಗನಿಗಾಗಿ ಜಮೀನು ಮಾರಿದ ತಂದೆ, ಮುಂಜಾನೆ 3ಕ್ಕೆ ಏಳುತ್ತಿದ್ದ ತಾಯಿ: ಬಿಹಾರದ ಹಳ್ಳಿಯಿಂದ ಐಪಿಎಲ್‌ಗೆ ಬಂದ ವೈಭವ್ ಸೂರ್ಯವಂಶಿ ಯಶೋಗಾಥೆ!ಧರ್ಮಸ್ಥಳ ಕೇಸ್ : ನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ ; ನಟ ‘ಪ್ರಕಾಶ್ ರಾಜ್’ ಸ್ಪೋಟಕ ಹೇಳಿಕೆಸಿಎಂ ಆದಮೇಲೂ ಡಿಕೆಶಿ ಬ್ಲೂ ಫಿಲಂ ಮಾಡಿಸುವ, ಪೋಸ್ಟರ್ ಅಂಟಿಸುವ ಚಾಳಿ ಬಿಟ್ಟಿಲ್ಲ; ಎಚ್‌ಡಿ ಕುಮಾರಸ್ವಾಮಿ ವ್ಯಂಗ್ಯBIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ; ‘ಕರ್ತವ್ಯ’ ಆ್ಯಪ್ ನಲ್ಲಿ ಕಡ್ಡಾಯವಾಗಿ ಹಾಜರಾತಿ ದಾಖಲಿಸಲು ಸೂಚನೆ.!ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ‘EPFO’ ಚಂದಾದಾರರಿಗೆ ಬಿಗ್ ಅಲರ್ಟ್ ; ಬಡ್ಡಿ ಜಮಾ ಬಗ್ಗೆ ಪ್ರಮುಖ ಅಪ್‌ಡೇಟ್ ಇಲ್ಲಿದೆ‘ಹಿಂದೂ ಹೃದಯ ಸಾಮ್ರಾಟ್’ ಬಾಳಾ ಠಾಕ್ರೆ ಕಟ್ಟಿದ ಶಿವಸೇನೆ ಇಂದು ಇಬ್ಭಾಗ; ಅಸ್ತಿತ್ವಕ್ಕಾಗಿ ಹೋರಾಟದಲ್ಲಿ ಉದ್ಧವ್ ಠಾಕ್ರೆ!SHOCKING : ಪ್ರೇಯಸಿಯನ್ನು ಕೊಂದು ಶವವನ್ನೇ ಅಪ್ಪಿಕೊಂಡು ಮಲಗಿದ್ದ ಪ್ರಿಯಕರ ; ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಭವಾನಿ ಕೊಲೆ ಕೇಸ್.!“ಇವರ ಬೆದರಿಕೆಗೆ ನಾವು ಹೆದರಲ್ಲ”: ಡಿಕೆಶಿ ವಿರುದ್ಧ ಕೆಂಡಾಮಂಡಲರಾದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ