LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಸ್ಥಾನದಲ್ಲಿ ಲಂಚ ಪಡೆದು ಸಿಕ್ಕಿಬಿದ್ದ ಬೆಂಗಳೂರು ಪೊಲೀಸರು

ಬೆಂಗಳೂರು: ವರದಕ್ಷಿಣೆ ಕಿರುಕುಳ ಆರೋಪಿಯಿಂದ ಲಂಚ ಪಡೆಯುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನ ಹೆಚ್ಎಎಲ್ ಪೊಲೀಸ್ ಠಾಣೆಯ ಮಹಿಳಾ ಸಬ್ ಇನ್ಸ್ಪೆಕ್ಟರ್ ಸೇರಿ ಮೂವರು ಪೊಲೀಸರನ್ನು ರಾಜಸ್ಥಾನ ಭ್ರಷ್ಟಾಚಾರ ನಿಗ್ರಹದಳ(ಎಸಿಬಿ) ಬಂಧಿಸಿದೆ.

ಪಿಎಸ್ಐ ಕೆ. ಅನಿತಾ, ಹೆಡ್ ಕಾನ್ಸ್ಟೇಬಲ್ ಗಳಾದ ಉಳವಪ್ಪ ತೇಗೂರು ಮತ್ತು ಯತೀಶ್ ಬಂಧಿತರು. ರಾಜಸ್ಥಾನ ಮೂಲದ ವ್ಯಕ್ತಿ ವಿರುದ್ಧ ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಲು ಹೆಚ್ಎಎಲ್ ಠಾಣೆ ಪೊಲೀಸರು ಜೈಪುರಕ್ಕೆ ತೆರಳಿದ್ದರು. ಅಲ್ಲಿ ಎರಡು ಲಕ್ಷ ರೂಪಾಯಿ ನೀಡಿದರೆ ಕ್ಲೀನ್ ಚಿಟ್ ನೀಡುವುದಾಗಿ ಆರೋಪಿಗೆ ಆಫರ್ ಮಾಡಿದ್ದರು. ಈ ಬಗ್ಗೆ ಆರೋಪಿ ಎಸಿಬಿಗೆ ದೂರು ನೀಡಿದ್ದು, ಲಂಚದ ಹಣ ಸ್ವೀಕರಿಸುವಾಗ ದಾಳಿ ನಡೆಸಿದ ರಾಜಸ್ಥಾನ ಎಸಿಬಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

ಹೆಚ್ಎಎಲ್ ಪೊಲೀಸ್ ಠಾಣೆಯ ಮಹಿಳಾ ಸಬ್ ಇನ್ಸ್ಪೆಕ್ಟರ್ ಕೆ. ಅನಿತಾ, ಹೆಡ್ ಕಾನ್ಸ್ಟೇಬಲ್ ಉಳವಪ್ಪ ತೇಗೂರು ಮತ್ತು ಕಾನ್ಸ್ಟೇಬಲ್ ಯತೀಶ್ ಅವರನ್ನು ಲಂಚ ಪಡೆದ ಆರೋಪದ ಮೇಲೆ ರಾಜಸ್ಥಾನದ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗಾಗಿ ಜೂನ್ 12ರಂದು ರಾಜಸ್ಥಾನದ ಜೈಪುರಕ್ಕೆ ಹೋಗಿದ್ದರು. ಈ ಪ್ರಕರಣದಿಂದ ಆರೋಪಿ ಮತ್ತು ಆತನ ಕುಟುಂಬ ಸದಸ್ಯರನ್ನು ಕೈಬಿಡಲು 2 ಲಕ್ಷ ರೂಪಾಯಿ ಕೊಡುವಂತೆ ಎಸ್ಐ ಅನಿತಾ ಮತ್ತು ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆರೋಪಿಯ ಕುಟುಂಬ ರಾಜಸ್ಥಾನ ಎಸಿಬಿಗೆ ದೂರು ನೀಡಿದ್ದು, ಇದನ್ನು ಆಧರಿಸಿ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಜೈಪುರದ ಹೋಟೆಲ್ ನಲ್ಲಿ ಲಂಚದ ಭಾಗವಾಗಿ 40,000 ರೂ. ಪಡೆಯುತ್ತಿದ್ದಾಗ ಉಳವಪ್ಪ ತೇಗೂರು ಅವರನ್ನು ಹಣದ ಸಮೇತ ಬಂಧಿಸಿದ್ದಾರೆ. ವಿಚಾರಣೆಯ ವೇಳೆ ಪ್ರಕರಣದಲ್ಲಿ ಎಸ್ಐ ಅನಿತಾ ಮತ್ತು ಕಾನ್ಸ್ಟೇಬಲ್ ಯತೀಶ್ ಪಾತ್ರ ಇರುವುದಾಗಿ ಉಳವಪ್ಪ ತೇಗೂರು ತಿಳಿಸಿದ್ದಾರೆ. ಹೀಗಾಗಿ ಎಸಿಬಿ ಅಧಿಕಾರಿಗಳು ಅನಿತಾ ಮತ್ತು ಯತೀಶ್ ಅವರನ್ನು ಕೂಡ ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಲಂಚದ ಬೇಡಿಕೆ, ಕರೆ ವಿವರ, ಹಣಕಾಸು ವ್ಯವಹಾರದ ಮಾಹಿತಿ ಸೇರಿ ಎಲ್ಲಾ ವಿಧದಲ್ಲಿಯೂ ಎಸಿಬಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ