LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರ್.ಎಸ್.ಎಸ್ ನೋಂದಣಿ ಬಗ್ಗೆ ಮೋಹನ್ ಭಾಗವತ್ ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರ: ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು?

ನವದೆಹಲಿ: ಆರ್.ಎಸ್.ಎಸ್ ನೋಂದಣಿ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು ವಿವರ ಕೇಳಿರುವ ವಿಚಾರ ಇದೀಗ ಬಿಜೆಪಿ ನಾಯಕರನ್ನು ಕೆರಳಿಸಿದ್ದು, ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಆರ್.​​​ಎಸ್​​.ಎಸ್​​​ನ ನೋಂದಣಿ, ಆದಾಯ, ಆಸ್ತಿಪಾಸ್ತಿ ಸೇರಿದಂತೆ ಇತರೆ ವಿವರ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಅವರ ಪ್ರಶ್ನೆಗಳಿಗೆ ಆರ್‌.ಎಸ್‌.ಎಸ್‌ನವರು ಕಾನೂನಾತ್ಮಕವಾಗಿ ಉತ್ತರಿಸ್ತಾರೆ. ಸಂಘ ಸಂಸ್ಥೆ ಸ್ಥಾಪಿಸುವ ಹಕ್ಕನ್ನು ಸಂವಿಧಾನ ನೀಡಿದೆ. ಕೇವಲ ಆರ್‌.ಎಸ್‌.ಎಸ್‌ಗೆ ಮಾತ್ರ ಅವಕಾಶ ನೀಡಿಲ್ಲ. ಗ್ರಾಮೀಣ ಭಾಗದ ನಾಲ್ವರು ಯುವಕರು ಸೇರಿ ಸಂಘ ಕಟ್ಟಬಹುದು. ಸಂವಿಧಾನ ಇಲ್ಲದಾಗಲೂ, ಬ್ರಿಟಿಷರ ಕಾಲದಲ್ಲೂ ಕೆಲಸ ಮಾಡಿದೆ ಎಂದಿದ್ದಾರೆ.

ಸಂಘದ ಆಸ್ತಿ, ವಹಿವಾಟುಗಳು ನಿಯಮಗಳ ಅಡಿಯಲ್ಲಿ ನಡೆಯುತ್ತಿವೆ. ಸಚಿವ ಪ್ರಿಯಾಂಕ್ ಖರ್ಗೆ ಇದೇ ಮೊದಲ ಅಲ್ಲ ಆಡಿಟ್ ಕೇಳ್ತಿರೋದು. ಐಟಿ-ಬಿಟಿ ಇಲಾಖೆಯಲ್ಲಿ ರಿಸರ್ಚ್ ಇನೋವೇಷನ್ ಮಾಡಬೇಕಿತ್ತು. ಆದರೆ ಪ್ರಿಯಾಂಕ್ ಖರ್ಗೆ ಇಲ್ಲಿ ರಿಸರ್ಚ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ನಾನೇ ಮೊದಲು ನೋಂದಣಿ ಕೇಳುತ್ತಿದ್ದೇನೆ ಅಂದುಕೊಂಡರೆ ಅದು ತಪ್ಪು. ಈ ಹಿಂದೆ ಪಥಸಂಚಲನಕ್ಕೆ ವಿರೋಧಿಸಿದರು, ಕೋರ್ಟ್ ಅನುಮತಿ ನೀಡಿತು. ಪಥ ಸಂಚಲನಕ್ಕೆ ಮೊದಲು 500 ಜನ ಸೇರುವ ಜಾಗದಲ್ಲಿ ವಿರೋಧದ ಬಳಿಕ 5000 ಜನ ಸೇರಿದರು. ವಿರೋಧಿಸಿದಷ್ಟು ಅದರ ಚಿಂತನೆಗಳು ಬಲಿಷ್ಠವಾಗುತ್ತವೆ, ಇದಕ್ಕೆ ಸ್ವಾಗತಿಸುತ್ತೇನೆ ಎಂದರು.

ದೇಶದ ಸಂವಿಧಾನದ ಅಡಿಯಲ್ಲಿ ಆರ್‌.ಎಸ್‌.ಎಸ್ ಕೆಲಸ ಮಾಡುತ್ತಿದೆ. ಸಂವಿಧಾನದ ಮೇಲೆ ಎಂದು ಕೆಲಸ ಮಾಡುವ ಜನರು, ಸಂಘಟನೆ ಮಾಡುವವರು ಯಾರು ಎಂದು ಗೊತ್ತಿದೆ, ನೋಂದಣಿ ಬಗ್ಗೆ ಚರ್ಚೆ ಆಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಾನೂನು ಸಲಹೆ ಪಡೆಯಬೇಕಿತ್ತು. ಇದಕ್ಕೆ ಆರ್‌.ಎಸ್‌.ಎಸ್ ಮತ್ತು ಜನರು ಮುಂದೆ ಉತ್ತರ ಕೊಡುತ್ತಾರೆ ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ