LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೂಪರ್ ಓವರ್‌ನಲ್ಲಿ ತಂಡವನ್ನು ಗೆಲ್ಲಿಸಲಾಗದೇ ಶ್ರೀಲಂಕಾ ಆಟಗಾರನನ್ನು ತಳ್ಳಿ ಹೊಡೆಯಲು ಮುಂದಾದ ವೈಭವ್ ಸೂರ್ಯವಂಶಿ; ವಿಡಿಯೊ

ನಿನ್ನೆ ( ಜೂನ್ 15 ) ಡಂಬುಲ್ಲಾ ಕ್ರೀಡಾಂಗಣದಲ್ಲಿ ನಡೆದ ಭಾರತ ಎ ಹಾಗೂ ಶ್ರೀಲಂಕಾ ಎ ತಂಡಗಳ ನಡುವಿನ ತ್ರಿಕೋನ ಸರಣಿಯ ನಾಲ್ಕನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡು ಸೂಪರ್ ಓವರ್ ನಡೆಯಿತು. ಈ ರೋಚಕ ಪಂದ್ಯದಲ್ಲಿ ಶ್ರೀಲಂಕಾ ಎ ತಂಡ ಗೆದ್ದುಬೀಗಿತು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 49.2 ಓವರ್‌ಗಳಲ್ಲಿ 265 ರನ್‌ಗಳಿಗೆ ಆಲ್‌ಔಟ್ ಆಗಿ ಭಾರತ ತಂಡಕ್ಕೆ 266 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಶ್ರೀಲಂಕಾ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 265 ರನ್ ಗಳಿಸಿತು. ಈ ಮೂಲಕ ಪಂದ್ಯ ಡ್ರಾ ಆಯಿತು.

ಬಳಿಕ ನಡೆದ ಸೂಪರ್ ಓವರ್‌ನಲ್ಲಿ ಶ್ರೀಲಂಕಾ 16 ರನ್ ಬಾರಿಸಿ ಭಾರತಕ್ಕೆ 17 ರನ್‌ಗಳ ಸವಾಲಿನ ಗುರಿಯನ್ನು ನೀಡಿತು. ಆದರೆ ಭಾರತ ಕೇವಲ 9 ರನ್ ಕಲೆಹಾಕಿ 7 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿತು.

ಲಂಕಾ ಸೂಪರ್ ಓವರ್‌ನಲ್ಲಿ ನೀಡಿದ ಗುರಿ ಬೆನ್ನಟ್ಟಿದ ಭಾರತದ ಪರ ಸೂರ್ಯನ್ಶ್ ಶೆಡ್ಗೆ ಹಾಗೂ ವೈಭವ್ ಸೂರ್ಯವಂಶಿ ಕಣಕ್ಕಿಳಿದರು. ಮೊದಲ ಎಸೆತಕ್ಕೆ ಎರಡು ರನ್ ಬಾರಿಸಿ ಎರಡನೇ ಎಸೆತ ನುಂಗಿದ ಶೆಡ್ಗೆ ಮೂರನೇ ಎಸೆತದಲ್ಲಿ ಒಂದು ರನ್ ಗಳಿಸಿದರು. ನಂತರ ವೈಭವ್ ಸೂರ್ಯವಂಶಿ ನಾಲ್ಕನೇ ಎಸೆತದಲ್ಲಿ ಎರಡು ರನ್, ಐದನೇ ಎಸೆತದಲ್ಲಿ ಬೌಂಡರಿ ಬಾರಿಸಿ ಕೊನೆಯ ಎಸೆತದಲ್ಲಿ ರನ್ ಬಾರಿಸಲಾಗದೇ ಓವರ್ ಮುಗಿಸಿದರು.

ಹೀಗೆ ಪಂದ್ಯ ಸೋತು ಶೆಡ್ಗೆ ಹಾಗೂ ವೈಭವ್ ಪೆವಿಲಿಯನ್‌ನತ್ತ ಹೆಜ್ಜೆ ಹಾಕಲು ಮುಂದಾದರು. ಈ ಸಮಯದಲ್ಲಿ ಶ್ರೀಲಂಕಾ ಆಟಗಾರರು ಪಂದ್ಯ ಗೆದ್ದ ಖುಷಿಯಲ್ಲಿ ಕಿರುಚಿ ಸಂಭ್ರಮಿಸಿದರು. ಇದಕ್ಕೆ ಪ್ರತಿಕ್ರಿಯಿಸಲು ಮುಂದಾದ ವೈಭವ್ ಶ್ರೀಲಂಕಾ ಆಟಗಾರರ ವಿರುದ್ಧ ಕಿಡಿಕಾರಿ ಅವರ ಬಳಿ ತೆರಳಿ ಸೂಪರ್ ಓವರ್ ಮಾಡಿದ ಕುಗದಾಸ್ ಮಧುಲನ್‌ ಎದೆ ಮೇಲೆ ಕೈ ಹಾಕಿ ತಳ್ಳಿ ಹಲ್ಲೆ ಯತ್ನ ಮಾಡಿದರು. ಸದ್ಯ ಈ ವಿಡಿಯೊ ವೈರಲ್ ಆಗಿದ್ದು, ಸೂಪರ್ ಓವರ್‌ನಲ್ಲಿ ಚೆನ್ನಾಗಿ ಆಡಿ ತಂಡ ಗೆಲ್ಲಿಸದೇ ಹೀಗೆ ಹಲ್ಲೆ ಮಾಡಲು ಮುಂದಾದರೆ ಏನು ಪ್ರಯೋಜನ ಎಂಬ ಕಾಮೆಂಟ್ ಕೇಳಿಬರುತ್ತಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ